ಜೀವನ ಮೌಲ್ಯ ಅಳವಡಿಸಿಕೊಳ್ಳಲು ಸಲಹೆ

ಪ್ರೇರಣಾ ತರಗತಿ ಉಪನ್ಯಾಸ ಮಾಲಿಕೆ-ವಿಶೇಷ ಉಪನ್ಯಾಸ

Team Udayavani, May 9, 2022, 5:53 PM IST

20

ಯಲ್ಲಾಪುರ: ಎಲ್ಲ ವೇದ ಹಾಗೂ ಧರ್ಮಗಳು ಸಾಮಾಜಿಕ ಸಹಬಾಳ್ವೆಯ ವಿಷಯ ಸಾರಿವೆ. ಸತ್ಯ, ಪ್ರಾಮಾಣಿಕತೆ, ಪರೋಪಕಾರ, ರಾಷ್ಟ್ರಪ್ರೇಮ, ಸಾಮಾಜಿಕ ಕಳಕಳಿ ಮೊದಲಾದ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡವರು ಉತ್ತಮ ಪ್ರಜೆಯಾಗುತ್ತಾರೆ ಎಂದು ಕೇಂದ್ರ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಹಾಗೂ ದೆಹಲಿ ಸರ್ಕಾರದ ಮಾಹಿತಿ ಹಾಗೂ ತಂತ್ರಜ್ಞಾನ ವಿಭಾಗದ ನಿವೃತ್ತ ಸಲಹೆಗಾರರಾದ ಸಿ.ವಿ. ಗೋಪಿನಾಥ ಹೇಳಿದರು.

ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವದರ್ಶನ ಕರಿಯರ್‌ ಅಕಾಡೆಮಿ ಹಾಗೂ ವಿಶ್ವದರ್ಶನ ಶಿಕ್ಷಣ ಮಹಾ ವಿದ್ಯಾಲಯ (ಬಿ.ಇಡಿ)ದ ಪ್ರೇರಣಾ ತರಗತಿ ಉಪನ್ಯಾಸ ಮಾಲಿಕೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಪ್ರತಿ ಮಗುವೂ ತಾಯಿಯನ್ನು ಅನುಕರಣೆ ಮಾಡುತ್ತದೆ. ಹೀಗಾಗಿ ಮಕ್ಕಳಿಗೆ ಜೀವನದ ಮೌಲ್ಯಗಳನ್ನು ರೂಢಿಸುವ ಜವಾಬ್ದಾರಿ ಪೋಷಕರ ಮೇಲಿದೆ. ಪೋಷಕರು ರೂಢಿಸಿದ ಮೌಲ್ಯಗಳನ್ನು ಬೆಳೆಸುವ ಹಾಗೂ ತಪ್ಪುಗಳನ್ನು ತಿದ್ದುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದರು.

ಸಮಾಜದ ಶ್ರೇಷ್ಠರು ಸಾಮಾಜಿಕ ಮೌಲ್ಯಗಳನ್ನು ಬಿತ್ತುತ್ತಾರೆ. ಮೌಲ್ಯಗಳು ಮನುಷ್ಯನಲ್ಲಿ ನಿಧಾನವಾಗಿ ಬೇರೂ ರುತ್ತವೆ. ಅಂತರಾಳದಲ್ಲಿ ಹುದುಗಿರುವ ಸಂಸ್ಕಾರ ಅನೇಕ ಮಜಲುಗಳಾಗಿ ಹೊರಬರುತ್ತದೆ. ಸಂಸ್ಕಾರದ ಮೌಲ್ಯ ಗಳನ್ನು ಹೆಚ್ಚಿಸಿಕೊಳ್ಳಲು ಪ್ರತಿಯೊಬ್ಬರು ಪ್ರಯತ್ನಿಸಬೇಕು ಎಂದರು.

ಪಾಠ ಮಾಡುವ ಶಿಕ್ಷಕರು ಮಕ್ಕಳಿಗೆ ನೈಜ ಘಟನೆ ಆಧಾರಿತ ಭಾವನಾತ್ಮಕ ವಿಷಯಗಳ ಬಗ್ಗೆ ಹೆಚ್ಚು ತಿಳಿಸಬೇಕು. ಪ್ರತಿ ಮುಗುವಿಗೂ ಸತ್ಯ, ಪ್ರಾಮಾಣಿಕತೆ, ಪರೋಪಕಾರ, ರಾಷ್ಟ್ರಪ್ರೇಮ, ಸಾಮಾಜಿಕ ಕಳಕಳಿ, ಕಾನೂನು ಗೌರವಿಸುವ ಸಂಸ್ಕಾರಯುತ ಶಿಕ್ಷಣ ನೀಡಬೇಕು. ನಂಬಿಕೆ ಹಾಗೂ ಆತ್ಮ ವಿಶ್ವಾಸ ಹೆಚ್ಚಿಸುವ ವಿಷಯಗಳನ್ನು ಅವರಿಗೆ ತಿಳಿಸಬೇಕು. ಪ್ರತಿಯೊಬ್ಬರು ತಲುಪಬೇಕಾದ ಗುರಿಗಾಗಿ ನಿರಂತರ ಪ್ರಯತ್ನ ನಡೆಸಬೇಕು. ಗುರಿ ತಲುಪಿದ ನಂತರ ತಮ್ಮ ಆದಾಯದ ಒಂದು ಭಾಗವನ್ನು ಸಮಾಜಕ್ಕೆ ಮೀಸಲಿಡಬೇಕು ಎಂದರು.

ಶಿಕ್ಷಣ ಪ್ರೇಮಿ ನಾರಾಯಣ ಹೆಗಡೆ ಗಡಿಕೈ ಮಾತನಾಡಿ, ಗಣ್ಯ ವ್ಯಕ್ತಿಗಳ ಸ್ಫೂರ್ತಿದಾಯಕ ಮಾತುಗಳು ಸಾಧನೆಗೆ ಪ್ರೇರಣೆಯಾಗುತ್ತವೆ ಎಂದರು.

ಸಂಸ್ಥೆ ಕಾರ್ಯದರ್ಶಿ ನರಸಿಂಹ ಕೋಣೆಮನೆ ಮಾತನಾಡಿ, ಶಿಕ್ಷಣ ಹಾಗೂ ಆರೋಗ್ಯ ಸೇವೆಗೆ ವಿಶ್ವದರ್ಶನ ಬದ್ಧವಾಗಿದೆ ಎಂದರು.

ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ ಹಾಗೂ ವಿವಿಧ ಅಂಗಸಂಸ್ಥೆಯ ಮುಖ್ಯಸ್ಥರು ಹಾಜರಿದ್ದರು. ವಿಶ್ವದರ್ಶನ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಚಾರ್ಯರಾದ ಡಾ|ಎಸ್‌.ಎಲ್‌. ಭಟ್ಟ ಸ್ವಾಗತಿಸಿದರು. ಪ್ರಶಿಕ್ಷಣಾರ್ಥಿ ಶಿವಪ್ರಸಾದ ಭಟ್ಟ ನಿರ್ವಹಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

ಗೋಕರ್ಣ: 12ರಂದು ಎನ್‌ಎಚ್‌ಎಐ ಕಚೇರಿಗೆ ಮುತ್ತಿಗೆ-ಸ್ವಾಮೀಜಿ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

Swimming; 19 ಕಿಮೀ ಗಂಗಾ ನದಿಯಲ್ಲಿ ಈಜಿ 4ನೇ ಸ್ಥಾನ ಗೆದ್ದ ಗೋಕರ್ಣದ ನೇಹಾ

4-sirsi

Sirsi: ಗುಂಡಿಗದ್ದೆ ಬಳಿ ರಸ್ತೆ ದಾಟಿದ ಚಿರತೆ! : ಸ್ಥಳೀಯರಲ್ಲಿ ಆತಂಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ಕೈಗೊಳ್ಳುತ್ತಾರೆ: ಭೀಮಣ್ಣ ನಾಯ್ಕ

Sirsi: ದೇಶಪಾಂಡೆ ಸಿಎಂ ಆಗುವ ತೀರ್ಮಾನ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ: ಭೀಮಣ್ಣ ನಾಯ್ಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.