ಮತ್ತಿಘಟ್ಟ-ಜಾಜಿಗುಡ್ಡೆ ಪುನಶ್ಚೇತನಕ್ಕೆ ಅನಂತ ಹೆಗಡೆ ಅಶೀಸರ ಒತ್ತಾಯ


Team Udayavani, Jun 24, 2021, 6:18 PM IST

dfghjjhgfd

ಶಿರಸಿ: ಭೂ ಕುಸಿತವಾಗಿರುವ ಮತ್ತಿಘಟ್ಟ ಹಾಗು ಜಾಜಿಗುಡ್ಡೆ ಪ್ರದೇಶದ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಗುರುತಿಸಿ ಆದ್ಯತೆಯ ಮೇಲೆ ಪರಿಹಾರ ಮತ್ತು ಪುನಶ್ಚೇತನಗೊಳಿಸಿ ಕೊಡಬೇಕೆಂದು ಕರ್ನಾಟಕ ಜೀವವೈವಿಧ್ಯತೆ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಒತ್ತಾಯಿಸಿದ್ದಾರೆ.

ಗುರುವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ಭೂ ಕುಸಿತದ ಕುರಿತು ಸಭೆ ನಡೆಸಿ ಮಾತನಾಡಿದರು. ಭೂ ಕುಸಿತಕ್ಕೊಳಗಾಗಿ ಮನೆ ಕಳೆದುಕೊಂಡ ಮತ್ತಿಘಟ್ಟಾ ಹಾಗು ಜಾಜಿಗುಡ್ಡೆ ಕುಟುಂಬದವರಿಗೆ ಪರಿಹಾರದ ಜೊತೆಗೆ ಅವರ ಬೆಟ್ಟದಲ್ಲಿ ಮನೆ ಕಟ್ಟಿಕೊಡಲು ಅನುಕೂಲಮಾಡಿಕೊಡಬೇಕೆಂದು ಹೇಳಿದರು.

ಭೂ ಕುಸಿತಕ್ಕೊಳಗಾಗಿ ಹಾನಿ ಅನುಭವಿಸಿದವರಿಗೆ ಪ್ರಕ್ರತಿ ವಿಕೋಪದಡಿಯಲ್ಕಿ ಪರಹಾರ ನೀಡಲು ಕೇಂದ್ರ ಹಾಗು ರಾಜ್ಯ ಸರಕಾರ ಒಪ್ಪಿರುವುದರಿಂದ ಎಸಿ ಹಾಗು ತಹಶಿಲ್ದಾರರು ಸ್ಥಳಕ್ಕೆ ಬೇಟಿ ನೀಡಿ ಸರಕಾರಕ್ಕೆ ಕೂಡಲೇ ವರದಿ ಸಲ್ಲಿಸಿ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಅರಣ್ಯ ನಾಶ ಹಾಗು ಅತಿಯಾದ ಮಳೆಯಿಂದಾಗಿ ಭೂ ಕುಸಿತಗಳಾಗುತ್ತಿವೆ. ಇಂತಹ ಪ್ರದೇಶಗಳನ್ನು ಸರಕಾರ ಗುರುತಿಸಿ ತಡೆಗಟ್ಟುವ ಮಾರ್ಗೋಪಾಯಗಳನ್ನು ಕಂಡು ಹಿಡಿಯಬೇಕು.ಮತ್ತು ಅಂತಹ ಪ್ತದೇಶಗಳನ್ನು ಭೂಕುಸಿತವಾಗಬಲ್ಲ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಸಮಗ್ರ ಭೂಕುಸಿತ ನಿಯಂತ್ರಣ ಮಾರ್ಗೊಪಾಯಗಳ ಕಾರ್ಯಯೋಜನೆ ತಯಾರಿಸಬೇಕೆಂದರು.ನಿಖರ ಮಾಹಿತಿಯ ಪ್ರಕಾರವಾಗಿ ಮಲೆನಾಡು ಮತ್ತು ಕರಾವಳಿ ಪ್ತದೇಶದ ಉತ್ತರಕನ್ನಡ ಸೇರಿದಂತೆ ಕೊಡಗು,ದಕ್ಷಿಣ ಕನ್ನಡ, ಹಾಸನ,ಚಿಕ್ಕಮಗಳೂರು, ಉಡುಪಿ ಹಾಗು ಶಿವಮೊಗ್ಗದ ಕಡಿದಾದ ಗುಡ್ಡ,ಕಣಿವೆಗಳಲ್ಲಿ ಭೂಕುಸಿತವಾಗಿದೆ.ಉತ್ತರಕನ್ನಡ ಜಿಲ್ಲೆಯಲ್ಲಿ ಕಾರವಾರ,ಅಂಕೋಲಾ, ಕುಮಟಾ,ಹೊನ್ನಾವರ, ಸಿದ್ದಾಪುರ, ಶಿರಸಿ,ಯಲ್ಲಾಪುರ ಹಾಗು ಜೋಯಿಡಾ ಭವಿಷ್ಯದಲ್ಲಿ ಭೂಕುಸಿತವಾಗಲಿರುವ ಪ್ರದೇಶವೆಂದು ಗುರುತಿಸಲಾಗಿದೆ ಎಂದರು.

ಕರಾವಳಿ ಮತ್ತು ಮಲೆನಾಡಿನ ಎಲ್ಲಾ ತಾಲೂಕುಗಳಲ್ಲಿ ಭೂಕುಸಿತ ಸಾದ್ಯತೆಯಿರುವ ಎಲ್ಲಾ ್ರದೇಶಗಳ ಗ್ರಾಮಮಟ್ಟದ ನಕ್ಷೆ ರಚಿಸಬೇಕು.ಭೂಕುಸಿತವಾಗುವ ಮೊದಲೆ ಶೀಘ್ರ ಮುನ್ಸೂಚನೆ ನೀಡುವ ತಾಂತ್ರಿಕ ವ್ಯವಸ್ಥೆಯನ್ನು ರೂಪಿಸಬೇಕು. ಹಾಗು ಜಿಲ್ಲಾಡಳಿತ ಅವುಗಳ ಸೂಕ್ತ ಸಹಾಯಪಡೆಯುವಂತಹ ಆಡಳಿತಾತ್ಮಕ ನೀತಿ ರೂಪಿಸುವ ಮೂಲಕ ಭವಿಶ್ಯದಲ್ಲಿ ಸಂಭವಿಸುವ ಭೂಕುಸಿತವನ್ನು ತಡೆಗಟ್ಟಬೇಕೆಂದು ಹೇಳಿದರು.

ಜುಲೈ 1 ರಿಂದ 15 ರವರಗೆ ಜೀವವೈವಿಧ್ಯತೆ ಜಾಗ್ರತೆ ಅಭಿಯಾನ ನಡೆಯಲಿದ್ದು ಇದರಲ್ಲಿ ನಗರಸಭೆ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಭಾಗವಹಿಸಲಿವೆ ಎಂದರು. ಸಭೆಯಲ್ಲಿ ಎಸಿ ಆಕೃತಿ ಬನ್ಸಾಲ್ ಹಾಗು ತಹಶಿಲ್ದಾರ ಎಂ ಆರ್ ಕುಲಕರ್ಣಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.