Ankola:ಹಣ ಕೀಳುತ್ತಿದ್ದ ನಕಲಿ ಮಂಗಳಮುಖಿಗೆ ಹಿಗ್ಗಾಮುಗ್ಗಾ ಗೂಸಾ


Team Udayavani, Jun 21, 2024, 11:17 PM IST

1–eweqwe

ಅಂಕೋಲಾ : ಮಂಗಳಮುಖಿಯರ ರೀತಿಯಲ್ಲಿ ವೇಷಭೂಷಣ ಧರಿಸಿ ಹಣ ಕೀಳುವ ಕಾಯಕದಲ್ಲಿ ತೊಡಗಿದ್ದ ಪುರುಷನೋರ್ವ ನೈಜ ಮಂಗಳಮುಖಿಯ ಕೈಗೆ ಸಿಕ್ಕಿಬಿದ್ದು ಗೂಸಾ ತಿಂದ ಘಟನೆ ಪಟ್ಟಣದಲ್ಲಿ ಜರುಗಿದೆ.

ಸುರತ್ಕಲ್ ಮೂಲದ ವ್ಯಕ್ತಿ ಎಂದು ಹೇಳಿಕೊಳ್ಳುವ ಈತ ಕಳೆದ ಕೆಲವು ದಿನಗಳಿಂದ ಮಂಗಳಮುಖಿಯರಂತೆ ಬಟ್ಟೆಗಳನ್ನು ಧರಿಸಿ ಗಡ್ಡ ಮೀಸೆ ಬೋಳಿಸಿಕೊಂಡು ಜಿಲ್ಲೆಯಾದ್ಯಂತ ಹಣ ಪಡೆಯುತ್ತಿದ್ದ ಎಂದು ಹೇಳಲಾಗುತ್ತಿದೆ. ಅಸಲಿ ಮಂಗಳಮುಖಿಯರು ನಿಯಮಿತವಾಗಿ ತೆರಳುವ ಕೆಲವು ಸ್ಥಳಗಳಲ್ಲಿ ಅವರಿಗಿಂತ ಮುನ್ನವೇ ಹಣ ಪಡೆದುಕೊಂಡು ಮಾಯವಾಗುತ್ತಿದ್ದ. ನಂತರ ಇನ್ನೊಂದು ಸ್ಥಳಕ್ಕೆ ತೆರಳಿ ಪಡೆದು ಮಾಡುತ್ತಿದ್ದ.

ಮಂಗಳಮುಖಿಯರು ಅಂಗಡಿಗಳಿಗೆ ತೆರಳಿದಾಗ ಈಗಾಗಲೇ ಹಣ ನೀಡಿರುವುದಾಗಿ ಅಂಗಡಿಕಾರರು ತಿಳಿಸಿದ ವೇಳೆ ಯಾರೋ ಅಪರಿಚಿತರು ಮಂಗಳಮುಖಿಯರ ಹೆಸರಿನಲ್ಲಿ ಹಣ ಎತ್ತುತ್ತಿರುವುದು ತಿಳಿದು ಬಂದಿದೆ. ಕಳೆದ ವಾರ ಮುರುಡೇಶ್ವರದಲ್ಲಿ ಇದೇ ರೀತಿಯಾಗಿ ಅಂಗಡಿಗೆ ತೆರಳಿ ಮಂಗಳಮುಖಿಯರ ವೇಷದಲ್ಲಿ ಭಿಕ್ಷೆ ಸಂಗ್ರಹಿಸಿದ್ದ. ಮಂಗಳಮುಖಿಯರ ಸಂಘದವರು ನಕಲಿ ಮಂಗಳಮುಖಿಯರನ್ನು ಪತ್ತೆ ಹಚ್ಚಲು ಹೊಂಚು ಹಾಕಿ ಕೂತಿದ್ದರು ಎನ್ನಲಾಗಿದೆ.

ಗುರುವಾರ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಅಂಗಡಿಯಲ್ಲಿ ಮಂಗಳಮುಖಿಯೆಂದು ಹೇಳಿಕೊಂಡು ಹಲವರಿಂದ ಹಣ ವಸೂಲಿ ಮಾಡಿದ್ದ. ಈ ನಡುವೆ ನಿಯಮಿತವಾಗಿ ಬರುವ ಮಂಗಳಮುಖಿಯರ ಪರಿಚಯಸ್ಥ ಬೆಳಂಬಾರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಾದೇವ ಗೌಡ ನಕಲಿ ಮಂಗಳಮುಖಿಯನ್ನು ಪತ್ತೆ ಮಾಡಿದ್ದಾರೆ. ಅವನ ಹಿಂದೆಯೇ ನಿಯಮಿತವಾಗಿ ಬರುವ ಮಂಗಳಮುಖಿ ಹಣ ಕೇಳಲು ಬಂದಾಗ ಅಂಗಡಿಕಾರರು ಈಗಾಗಲೇ ಹಣ ನೀಡಿದ್ದಾಗಿ ಹೇಳಿ ನಕಲಿ ಮಂಗಳಮುಖಿಯನ್ನು ತೋರಿಸಿದ್ದಾರೆ. ಸಿನಿಮಾ ಶೈಲಿಯಲ್ಲಿ ಬೆನ್ನತ್ತಿದ್ದ ನೈಜ ಮಂಗಳಮುಖಿ ವೇಷ ಧರಿಸಿದ ಪುರುಷನನ್ನು ಪಟ್ಟಣದ ಕ್ರೈಸ್ತ ಮಿತ್ರ ಚರ್ಚ್ ಬಳಿ ಹಿಡಿದು ಥಳಿಸಿದ್ದಾರೆ.

ಮಂಗಳಮುಖಿಯೆಂದು ವೇಷ ಧರಿಸಿದ ವ್ಯಕ್ತಿಯ ಬ್ಯಾಗ್ ಪರಿಶೀಲನೆ ಮಾಡಿದಾಗ ಪುರುಷರ ಬಟ್ಟೆಗಳು ದೊರೆತಿದ್ದು, ಎಲ್ಲಿಯೂ ಕೆಲಸ ಸಿಗದೇ ಇದ್ದಾಗ ಈ ದಂಧೆಗೆ ಇಳಿದಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ನಂತರ ಸಂಘದ ಮುಖ್ಯಸ್ಥೆಗೆ ಕರೆ ಮಾಡಿ ಈ ವಿಷಯ ತಿಳಿಸಿದಾಗ ಇನ್ನೊಮ್ಮೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.