Ankola:ಹಣ ಕೀಳುತ್ತಿದ್ದ ನಕಲಿ ಮಂಗಳಮುಖಿಗೆ ಹಿಗ್ಗಾಮುಗ್ಗಾ ಗೂಸಾ


Team Udayavani, Jun 21, 2024, 11:17 PM IST

1–eweqwe

ಅಂಕೋಲಾ : ಮಂಗಳಮುಖಿಯರ ರೀತಿಯಲ್ಲಿ ವೇಷಭೂಷಣ ಧರಿಸಿ ಹಣ ಕೀಳುವ ಕಾಯಕದಲ್ಲಿ ತೊಡಗಿದ್ದ ಪುರುಷನೋರ್ವ ನೈಜ ಮಂಗಳಮುಖಿಯ ಕೈಗೆ ಸಿಕ್ಕಿಬಿದ್ದು ಗೂಸಾ ತಿಂದ ಘಟನೆ ಪಟ್ಟಣದಲ್ಲಿ ಜರುಗಿದೆ.

ಸುರತ್ಕಲ್ ಮೂಲದ ವ್ಯಕ್ತಿ ಎಂದು ಹೇಳಿಕೊಳ್ಳುವ ಈತ ಕಳೆದ ಕೆಲವು ದಿನಗಳಿಂದ ಮಂಗಳಮುಖಿಯರಂತೆ ಬಟ್ಟೆಗಳನ್ನು ಧರಿಸಿ ಗಡ್ಡ ಮೀಸೆ ಬೋಳಿಸಿಕೊಂಡು ಜಿಲ್ಲೆಯಾದ್ಯಂತ ಹಣ ಪಡೆಯುತ್ತಿದ್ದ ಎಂದು ಹೇಳಲಾಗುತ್ತಿದೆ. ಅಸಲಿ ಮಂಗಳಮುಖಿಯರು ನಿಯಮಿತವಾಗಿ ತೆರಳುವ ಕೆಲವು ಸ್ಥಳಗಳಲ್ಲಿ ಅವರಿಗಿಂತ ಮುನ್ನವೇ ಹಣ ಪಡೆದುಕೊಂಡು ಮಾಯವಾಗುತ್ತಿದ್ದ. ನಂತರ ಇನ್ನೊಂದು ಸ್ಥಳಕ್ಕೆ ತೆರಳಿ ಪಡೆದು ಮಾಡುತ್ತಿದ್ದ.

ಮಂಗಳಮುಖಿಯರು ಅಂಗಡಿಗಳಿಗೆ ತೆರಳಿದಾಗ ಈಗಾಗಲೇ ಹಣ ನೀಡಿರುವುದಾಗಿ ಅಂಗಡಿಕಾರರು ತಿಳಿಸಿದ ವೇಳೆ ಯಾರೋ ಅಪರಿಚಿತರು ಮಂಗಳಮುಖಿಯರ ಹೆಸರಿನಲ್ಲಿ ಹಣ ಎತ್ತುತ್ತಿರುವುದು ತಿಳಿದು ಬಂದಿದೆ. ಕಳೆದ ವಾರ ಮುರುಡೇಶ್ವರದಲ್ಲಿ ಇದೇ ರೀತಿಯಾಗಿ ಅಂಗಡಿಗೆ ತೆರಳಿ ಮಂಗಳಮುಖಿಯರ ವೇಷದಲ್ಲಿ ಭಿಕ್ಷೆ ಸಂಗ್ರಹಿಸಿದ್ದ. ಮಂಗಳಮುಖಿಯರ ಸಂಘದವರು ನಕಲಿ ಮಂಗಳಮುಖಿಯರನ್ನು ಪತ್ತೆ ಹಚ್ಚಲು ಹೊಂಚು ಹಾಕಿ ಕೂತಿದ್ದರು ಎನ್ನಲಾಗಿದೆ.

ಗುರುವಾರ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಅಂಗಡಿಯಲ್ಲಿ ಮಂಗಳಮುಖಿಯೆಂದು ಹೇಳಿಕೊಂಡು ಹಲವರಿಂದ ಹಣ ವಸೂಲಿ ಮಾಡಿದ್ದ. ಈ ನಡುವೆ ನಿಯಮಿತವಾಗಿ ಬರುವ ಮಂಗಳಮುಖಿಯರ ಪರಿಚಯಸ್ಥ ಬೆಳಂಬಾರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಾದೇವ ಗೌಡ ನಕಲಿ ಮಂಗಳಮುಖಿಯನ್ನು ಪತ್ತೆ ಮಾಡಿದ್ದಾರೆ. ಅವನ ಹಿಂದೆಯೇ ನಿಯಮಿತವಾಗಿ ಬರುವ ಮಂಗಳಮುಖಿ ಹಣ ಕೇಳಲು ಬಂದಾಗ ಅಂಗಡಿಕಾರರು ಈಗಾಗಲೇ ಹಣ ನೀಡಿದ್ದಾಗಿ ಹೇಳಿ ನಕಲಿ ಮಂಗಳಮುಖಿಯನ್ನು ತೋರಿಸಿದ್ದಾರೆ. ಸಿನಿಮಾ ಶೈಲಿಯಲ್ಲಿ ಬೆನ್ನತ್ತಿದ್ದ ನೈಜ ಮಂಗಳಮುಖಿ ವೇಷ ಧರಿಸಿದ ಪುರುಷನನ್ನು ಪಟ್ಟಣದ ಕ್ರೈಸ್ತ ಮಿತ್ರ ಚರ್ಚ್ ಬಳಿ ಹಿಡಿದು ಥಳಿಸಿದ್ದಾರೆ.

ಮಂಗಳಮುಖಿಯೆಂದು ವೇಷ ಧರಿಸಿದ ವ್ಯಕ್ತಿಯ ಬ್ಯಾಗ್ ಪರಿಶೀಲನೆ ಮಾಡಿದಾಗ ಪುರುಷರ ಬಟ್ಟೆಗಳು ದೊರೆತಿದ್ದು, ಎಲ್ಲಿಯೂ ಕೆಲಸ ಸಿಗದೇ ಇದ್ದಾಗ ಈ ದಂಧೆಗೆ ಇಳಿದಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ನಂತರ ಸಂಘದ ಮುಖ್ಯಸ್ಥೆಗೆ ಕರೆ ಮಾಡಿ ಈ ವಿಷಯ ತಿಳಿಸಿದಾಗ ಇನ್ನೊಮ್ಮೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಟಾಪ್ ನ್ಯೂಸ್

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-sirsi

ಶಿರಸಿಯ ಅದ್ವೈತನಿಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

6-honnavar

Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್

Egret ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!

Egret: ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!

1-weqwwe

Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ

ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ: ಜಿಲ್ಲಾಧಿಕಾರಿ ಆದೇಶ

DC Order; ಅ.15ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ಘನ ವಾಹನಗಳಿಗೆ ನಿಷೇಧ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.