Ankola; ಗುಡ್ಡ ಕುಸಿತ ದುರಂತ; ಶಾಸಕರ ಸೂಚನೆಯಂತೆ ಶೋಧ ಶುರು
Team Udayavani, Aug 13, 2024, 8:14 PM IST
ಅಂಕೋಲಾ: ಉತ್ತರಕನ್ನಡ ಜಿಲ್ಲೆ ಅಂಕೋಲಾ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಕಣ್ಮರೆಯಾಗಿರುವ ಮೂವರ ಪತ್ತೆಗಾಗಿ ಶೋಧ ಕಾರ್ಯ ಮಂಗಳವಾರ ಮತ್ತೆ ಆರಂಭವಾಗಿದೆ.
ಮಳೆ ಕಡಿಮೆಯಾಗಿ ಗಂಗಾವಳಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ ಅವರ ಸೂಚನೆಯಂತೆ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿದ್ದು, ಮಲ್ಪೆಯ ಮುಳುಗು ತಜ್ಞ ಈಶ್ವರ ಅವರ ತಂಡ ಶೋಧ ಕಾರ್ಯ ನಡೆಸುತ್ತಿದೆ.
ಈ ವೇಳೆ ಗುಡ್ಡದ ಮಣ್ಣಿನೊಂದಿಗೆ ಕೊಚ್ಚಿಹೋಗಿ ನದಿ ಪಾಲಾಗಿದ್ದ ಕೇರಳದ ಅರ್ಜುನ ಚಲಾಯಿಸುತ್ತಿದ್ದ ಟಿಂಬರ್ ಲಾರಿಯ ಜಾಕ್ ನದಿಯಾಳದಲ್ಲಿ ದೊರೆತಿದ್ದು, ಇದನ್ನು ಸ್ಥಳದಲ್ಲಿದ್ದ ಲಾರಿ ಮಾಲಿಕ ಖಚಿತಪಡಿಸಿದ್ದಾರೆ. ಬುಧವಾರ ಇನ್ನೂ ಐವರು ಮುಳುಗು ಪರಿಣಿತರು ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲಿದ್ದು, ಅತ್ಯಾಧುನಿಕ ಸಲಕರಣೆಯೊಂದಿಗೆ ನದಿಯಲ್ಲಿ ಶೋಧ ನಡೆಸಲಾಗುವುದು ಎಂದು ಈಶ್ವರ ಮಲ್ಪೆ ತಿಳಿಸಿದ್ದಾರೆ.
ಜಿಲ್ಲಾಡಳಿತದ ಅನುಮತಿಯಿಲ್ಲ ?
ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಈಶ್ವರ ಮಲ್ಪೆ ಸ್ಥಳಕ್ಕೆ ಭೇಟಿ ನೀಡಿ ನದಿಯಲ್ಲಿ ನೀರಿನ ಸೆಳೆತ ಇಲ್ಲದಿರುವುದನ್ನು ಗಮನಿಸಿ ಕಾರ್ಯಾಚರಣೆಗೆ ಮುಂದಾಗಿದ್ದರು. ಆದರೆ ಜಿಲ್ಲಾಡಳಿತ ಮಾತ್ರ ನದಿಗೆ ಇಳಿಯದಂತೆ ಸೂಚಿಸಿತ್ತು. ಇದು ಸೂಕ್ತ ಸಮಯವಾಗಿದ್ದು, ಮತ್ತೆ ಮಳೆ ಸುರಿಯಲಾರಂಭಿಸಿದರೆ ಕಾರ್ಯಾಚರಣೆ ಕಷ್ಟ ಎಂದು ಅವರು ಬೇಸರ ವ್ಯಕ್ತಪಡಿಸಿದ್ದರು. ಬಳಿಕ ಶಾಸಕ ಸತೀಶ ಸೈಲ್ ಕಾರ್ಯಾಚರಣೆ ನಡೆಸಲು ಸೂಚನೆ ನೀಡಿದರು. ಈಶ್ವರ ಅವರಿಗೆ ಸ್ಥಳೀಯ ಮೀನುಗಾರರು ಬೋಟ್ಗಳೊಂದಿಗೆ ಸಾಥ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.