Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Team Udayavani, Sep 20, 2024, 3:52 PM IST
ಅಂಕೋಲಾ: ಶಿರೂರು ಗುಡ್ಡ ಕುಸಿತದಲ್ಲಿ ಕಾಣೆಯಾದ ಮೂವರ ಶೋಧಕ್ಕಾಗಿ ಗೋವಾದಿಂದ ಶಿರೂರಿಗೆ ಡ್ರೆಜ್ಜರ್ ಯಂತ್ರ ತಲುಪಿದ್ದು, ಸೆ.20ರ ಶುಕ್ರವಾರ 3ನೇ ಹಂತದ ಕಾರ್ಯಾಚರಣೆ ಆರಂಭವಾಗಿದೆ.
ಡ್ರೆಜ್ಜರ್ ಯಂತ್ರವನ್ನು ನದಿಯಲ್ಲಿ ಲಂಗರು ಹಾಕಿ ನಿಲ್ಲಿಸಲಾಗಿದ್ದು, ಡ್ರೆಜ್ಜರ್ ಮೇಲಿರುವ ಕ್ರೇನ್, ಹಿಟಾಚಿ ಸಹಾಯದಿಂದ ಪೈಪ್ ಅಳವಡಿಕೆ ಕಾರ್ಯ ಪ್ರಾರಂಭವಾಗಿದೆ.
ನೌಕಾನೆಲೆ ಗುರುತಿಸಿದ 4 ಸ್ಥಳಗಳಲ್ಲಿ ಮಣ್ಣು ತೆರವುಗೊಳಿಸಲು ಡ್ರೆಜ್ಜರ್ ಸಿದ್ದವಾಗಿದ್ದು, ಎನ್ಡಿಆರ್ಎಫ್, ಪೊಲೀಸ್, ತಾಲೂಕಾಡಳಿತದ ಸಿಬ್ಬಂದಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಗುಡ್ಡಕುಸಿತ ದುರಂತದಲ್ಲಿ 11 ಜನ ಮೃತಪಟ್ಟಿದ್ದು, ಇದುವರೆಗೆ 8 ಮಂದಿಯ ಶವ ಮಾತ್ರ ಪತ್ತೆ ಮಾಡಲಾಗಿತ್ತು.
ಇನ್ನು ಶಿರೂರಿನ ಜಗನ್ನಾಥ ನಾಯ್ಕ, ಲೋಕೇಶ್, ಕೇರಳದ ಅರ್ಜುನ್ಗಾಗಿ 3ನೇ ಹಂತದ ಹತ್ತು ದಿನದ ಕಾರ್ಯಾಚರಣೆ ಇಂದಿನಿಂದ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.