Ankola: ಮಳೆ ಮಾರಣ: ಶಿರೂರಿನಲ್ಲಿ ಹೆದ್ದಾರಿಗೆ ಗುಡ್ಡ ಕುಸಿದು 8 ಸಾವು

ಅನಿಲ ಸೋರಿಕೆ ಭೀತಿ: ಒಲೆ ಹಚ್ಚದಂತೆ ಸುತ್ತಲಿನ ಜನರಿಗೆ ಸೂಚನೆ ರಾಜ್ಯದಲ್ಲಿ ಮಳೆ ಅವಘಡಗಳಿಂದ 10 ಸಾವು

Team Udayavani, Jul 16, 2024, 4:29 PM IST

3-ankola

ಕಾರವಾರ/ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಅಂಕೋಲಾ ತಾ|ನ ಶಿರೂರು ಬಳಿ ಗಂಗಾವಳಿ ನದಿ ದಡದಲ್ಲಿ ಗುಡ್ಡ ಕುಸಿದು ಒಂದೇ ಕುಟುಂಬದ ನಾಲ್ವರ ಸಹಿತ 8 ಮಂದಿ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ.

ಮಂಗಳೂರು-ಗೋವಾ ರಾಷ್ಟ್ರೀಯ ಹೆದ್ದಾರಿ ಯಲ್ಲಿರುವ ಈ ಗುಡ್ಡ ಏಕಾಏಕಿ ಜರಿದ ಪರಿಣಾಮ ಇನ್ನೊಂದು ದಿಕ್ಕಿನಲ್ಲಿ ನದಿ ದಂಡೆಯ ಅಂಚಿನಲ್ಲಿದ್ದ ಚಹಾ ಅಂಗಡಿಗಳ ಮೇಲೆ ಭಾರೀ ಪ್ರಮಾಣದ ಮಣ್ಣು ಕುಸಿದು ಬಿದ್ದು, ಅಲ್ಲಿದ್ದ ಆರು ಮಂದಿ ಹಾಗೂ ಚಹಾ ಕುಡಿಯುತ್ತಿದ್ದ ಗ್ಯಾಸ್‌ ಟ್ಯಾಂಕರ್‌ ಡ್ರೈವರ್‌ ಮತ್ತು ಕ್ಲೀನರ್‌ ನದಿಗೆ ಜಾರಿದ ಮಣ್ಣಲ್ಲಿ ಸೇರಿ ಕೊಚ್ಚಿ ಹೋದರು. ಅಲ್ಲದೆ ಅಲ್ಲೇ ನಿಲ್ಲಿಸಿದ್ದ ಅನಿಲ ಟ್ಯಾಂಕರ್‌ ಹಾಗೂ ಲಾರಿ ಕೂಡ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದವು ಎಂದು ಹೇಳಲಾಗಿದೆ.

ಈ ಘಟನೆಯಲ್ಲಿ ಚಹಾ ಅಂಗಡಿ ಮಾಲಕ ಲಕ್ಷ್ಮಣ ಬೊಮ್ಮಯ್ಯ ನಾಯ್ಕ (47), ಅವರ ಪತ್ನಿ ಶಾಂತಿ (36), ಮಕ್ಕಳಾದ ರೋಶನ್‌ (11), ಅವಂತಿಕಾ (6) ಹಾಗೂ ಅಲ್ಲಿದ್ದ ಜಗನ್ನಾಥ (55), ಉಪೇಂದ್ರ ಮತ್ತು ಉಳುವರೆ ಗ್ರಾಮದ ಸಣ್ಣು ಹನುಮಂತ ಗೌಡ, ಟ್ಯಾಂಕರ್‌ ಚಾಲಕ ತಮಿಳುನಾಡು ಮೂಲದ ಸಿನಿವಣ್ಣನ್‌ ಸೇರಿ 8 ಜನರು ನೀರುಪಾಲಾಗಿದ್ದರು. ನಾಲ್ವರ ಮೃತದೇಹ ಸಿಕ್ಕಿದೆ.

ಸಂಜೆ ವೇಳೆಗೆ ಘಟನೆ ನಡೆದ ಆರು ಕಿ.ಮೀ. ದೂರದ ನದಿಯ ಮತ್ತೊಂದು ತುದಿಯ ದುಬ್ಬನಶಶಿ ಹಾಗೂ ಗಂಗೇಕೊಳ್ಳದಲ್ಲಿ ಲಕ್ಷ್ಮಣ, ಶಾಂತಿ, ರೋಶನ್‌ ಹಾಗೂ ಸಿನಿವಣ್ಣನ್‌ ಶವಗಳು ಪತ್ತೆಯಾಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣ ಪಡೆ (ಎನ್‌ಡಿಆರ್‌ಎಫ್‌) ಹಾಗೂ ಕಾರವಾರ ನೌಕಾಪಡೆಯ ಮುಳುಗು ತಜ್ಞರು ಶೋಧ ಕಾರ್ಯ ಕೈಗೊಂಡರು.

ತಲಾ 5 ಲಕ್ಷ ರೂ. ಪರಿಹಾರ: ಗುಡ್ಡ ಕುಸಿತದಲ್ಲಿ ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಕೊಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಇಂದೂ ಕಾರ್ಯಾಚರಣೆ: ಭಾರೀ ಮಳೆಯಿಂದಾಗಿ ಬರೆಯ ಮಣ್ಣು ಜಾರುತ್ತಿದ್ದ ಕಾರಣ ಹೆದ್ದಾರಿ ತೆರವು ಹಾಗೂ ರಕ್ಷಣ ಕಾರ್ಯಾಚರಣೆ ನಿಧಾನಗತಿಯಲ್ಲಿ ಸಾಗಿದ್ದು, ಬುಧವಾರವೂ ಮುಂದುವರಿಯಲಿದೆ.ರಾಷ್ಟ್ರೀಯ ಹೆದ್ದಾರಿ ಕುಮಟಾ ಅಂಕೋಲಾ ಮಧ್ಯೆ ರಸ್ತೆ ಸಂಚಾರ ಸ್ಥಗಿತವಾಗಿದೆ. ಹೆದ್ದಾರಿಯ ಎರಡೂ ದಿಕ್ಕಿನಲ್ಲೂ ಸಾಲುಗಟ್ಟಿ ನಿಂತಿದ್ದ ವಾಹನಗಳಿಗೆ ಪರ್ಯಾಯ ಮಾರ್ಗ ಮೂಲಕ ಸಂಚರಿಸಲು ಸೂಚಿಸಲಾಯಿತು.

ಮತ್ತೊಬ್ಬ ಮಹಿಳೆ ಕಾಣೆ: ಗುಡ್ಡ ಕುಸಿದ ಪರಿಣಾಮ ಗಂಗಾವಳಿ ನದಿಯ ಮತ್ತೂಂದು ದಡದಲ್ಲಿರುವ ಮೂರು ಮನೆಗಳು ಹಾನಿಗೊಳಗಾಗಿವೆ. ಒಟ್ಟು 12 ಮಂದಿಗೆ ಗಾಯಗಳಾಗಿವೆ. ಮಹಿಳೆಯೊಬ್ಬರು ನಾಪತ್ತೆಯಾಗಿದ್ದಾರೆ. ಭಾರೀ ಗಾತ್ರದ ಕಲ್ಲುಬಂಡೆ ನದಿಯಲ್ಲಿ ಬಿದ್ದ ಪರಿಣಾಮ ನದಿ ಸುತ್ತಲಿನ ಮನೆಯ ಬಳಿ ಭಾರೀ ಗಾತ್ರದಲ್ಲಿ ಸುನಾಮಿಯಂತೆ ನೀರು ಹರಿದು ಬಂದಿದೆ.

ಸುಮಾರು 25 ಅಡಿ ಆಳದ ನದಿ ಮಧ್ಯೆ ಬಂಡೆ ಬಿದ್ದಿದ್ದು, ಬಂಡೆಯ ಮೇಲ್ಭಾಗ ಸುಮಾರು ಐದು ಅಡಿಯಷ್ಟು ನೀರಿನ ಹೊರಗೆ ಕಾಣುತ್ತಿದೆ.

20 ಅಡಿಗಳಷ್ಟು ಮಣ್ಣು: ಬರೆ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ 20 ಅಡಿಗಳಷ್ಟು ಎತ್ತರದ ಮಣ್ಣಿನ ರಾಶಿ ಸಂಗ್ರಹವಾಗಿದೆ. ಈ ಮಣ್ಣಿನಲ್ಲಿ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು ಸಹಿತ ಮತ್ತಷ್ಟು ವಾಹನ ಹಾಗೂ ಜನರು ಸಿಲುಕಿರುವ ಬಗ್ಗೆ ಸ್ಥಳದಲ್ಲಿ ಮಾತುಗಳು ಕೇಳಿಬಂದವು.

ಕಾರವಾರ ಬಳಿ ಗುಡ್ಡ ಕುಸಿದು ಓರ್ವ ಸಾವು
ಉತ್ತರಕನ್ನಡ ಜಿಲ್ಲೆ ಕಾರವಾರ ಬಳಿಯ ಕಿನ್ನರ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ತಿಕರ್ಸ ಗುರವ್‌ ಅವರು ಮೃತಪಟ್ಟಿದ್ದಾರೆ. ಕಾರ್ಯಾಚರಣೆ ನಡೆಸಿ ಕಲ್ಲು ಮಣ್ಣು ತೆರವುಗೊಳಿಸಿ ಶವ ಹೊರತೆಗೆಯಲಾಗಿದೆ. ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಗೋಕರ್ಣದ ಶ್ರೀರಾಮ ಮಂದಿರ (ರಾಮತೀರ್ಥ) ಹಿಂಭಾಗದ ಗುಡ್ಡ ಕುಸಿದಿದ್ದು, ದೇವಸ್ಥಾನ ಹಾಗೂ ಅಕ್ಕಪಕ್ಕದ ಪ್ರಮುಖ ಸ್ಥಳಗಳಲ್ಲಿ ಹಾನಿಯಾಗಿದೆ.

ನದಿಯಲ್ಲಿ ತೇಲಿಹೋದ ಟ್ಯಾಂಕರ್‌
ಈ ಘಟನೆಯಲ್ಲಿ ಮಂಗಳೂರಿನಿಂದ ಧಾರವಾಡಕ್ಕೆ ಸಾಗುತ್ತಿದ್ದ ಬುಲೆಟ್‌ ಗ್ಯಾಸ್‌ ಟ್ಯಾಂಕರ್‌ ಗಂಗಾವತಿ ನದಿ ಪಾಲಾಗಿದ್ದು, ಏಳು ಕಿ.ಮೀ.ಗಳಷ್ಟು ದೂರ ತೇಲಿ ಹೋಗಿ ಸಗಡಗೇರಿ ಎಂಬಲ್ಲಿ ವಾಲಿ ನಿಂತಿದೆ. ಈ ಟ್ಯಾಂಕರ್‌ನಲ್ಲಿ ಸುಮಾರು 30 ಟನ್‌ ಅನಿಲವಿದ್ದು, ಸೋರಿಕೆ ಭೀತಿ ಕಾರಣ ಪರಿಸರದ ನಿವಾಸಿಗಳಿಗೆ ಒಲೆ ಹಾಗೂ ವಿದ್ಯುತ್‌ ದೀಪಗಳನ್ನು ಹಚ್ಚದಂತೆ ಜಿಲ್ಲಾಡಳಿತ ಸೂಚಿಸಿದ್ದು, ಸುರಕ್ಷಿತ ಸ್ಥಳಗಳಿಗೆ ತೆರಳಲು ಹೇಳಿದೆ.

ಟಾಪ್ ನ್ಯೂಸ್

1-ggggg

SpaceX; ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ!

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

Nagamangala Case; ಹಿಂದೂಗಳ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ: ಹರಿಪ್ರಕಾಶ ಕೋಣೆಮನೆ

Sirsi: ಹಕ್ಕು ಪ್ರಾಪ್ತವಾಗುವವರೆಗೂ, ಹೋರಾಟದ ಘರ್ಜನೆ ನಿಲ್ಲಿಸದಿರಿ; ಕಾಗೋಡ ತಿಮ್ಮಪ್ಪ

Sirsi: ಹಕ್ಕು ಪ್ರಾಪ್ತವಾಗುವವರೆಗೂ, ಹೋರಾಟದ ಘರ್ಜನೆ ನಿಲ್ಲಿಸದಿರಿ; ಕಾಗೋಡ ತಿಮ್ಮಪ್ಪ

Sirsi ಟಿಆರ್‌ಸಿಗೆ ರಾಜ್ಯಮಟ್ಟದ ಪ್ರಶಸ್ತಿ

Sirsi ಟಿಆರ್‌ಸಿಗೆ ರಾಜ್ಯಮಟ್ಟದ ಪ್ರಶಸ್ತಿ

Eco Park: ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿರುವ ದಾಂಡೇಲಿಯ ದಂಡಕಾರಣ್ಯ ಇಕೋ ಪಾರ್ಕ್

Eco Park: ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿರುವ ದಾಂಡೇಲಿಯ ದಂಡಕಾರಣ್ಯ ಇಕೋ ಪಾರ್ಕ್

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-ggggg

SpaceX; ಮೊದಲ ಖಾಸಗಿ ಬಾಹ್ಯಾಕಾಶ ನಡಿಗೆ!

Court-1

Kasaragod: ಕೊ*ಲೆ ಪ್ರಕರಣ: ವಿಚಾರಣೆ ಪೂರ್ಣ; ಶೀಘ್ರ ತೀರ್ಪು ಪ್ರಕಟ ನಿರೀಕ್ಷೆ

1-eweeeeeee

Palestine ದಾಳಿಗೆ ಭಾರತ ಮೂಲದ ಇಸ್ರೇಲಿ ಯೋಧ ಸಾ*ವು

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.