![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 9, 2022, 10:11 PM IST
ಅಂಕೋಲಾ : ತಾಲೂಕಿನ ಬಾಳೆಗುಳಿಯಿಂದ ಯಲ್ಲಾಪುರ ಮಾರ್ಗಮಧ್ಯೆ ರಾಷ್ಟ್ರೀಯ ಹೆದ್ದಾರಿ 63 ರ ಕಂಚಿನಬಾಗಿಲ ಬಳಿ ಕಿರು ಸೇತುವೆಯಂಚಿನ ರಸ್ತೆ ಕುಸಿತವಾಗಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ.
ರಾತ್ರಿಯಿಡೀ ಸುರಿದ ಮಳೆಯಲ್ಲಿ ರಸ್ತೆಯ ಪಿಚ್ಚಿಂಗ್ ಕಿತ್ತುಹೋಗಿ ರಸ್ತೆ ಕುಸಿದಿದ್ದು ಹೆದ್ದಾರಿಯಲ್ಲಿ 2 ಮೀಟರಿನಷ್ಟು ಅಗಲದ ಹೊಂಡ ಬಿದ್ದಿದೆ. ದಿನವೊಂದಕ್ಕೆ ಸುಮಾರು 20 ಸಾವಿರ ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರದ ಉ.ಕನ್ನಡ ವಿಭಾಗದ ಕಿರಿಯ ಅಭಿಯಂತರ ಪಿ.ಕೆ.ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸದ್ಯ ಮಳೆ ಬೀಳುತ್ತಿದ್ದು ಪಾಲಿಥಿನ್ ಶೀಟಿನ ಹೊದಿಕೆಯನ್ನು ಹಾಕಿ ಮಳೆಯಿಂದ ಇನ್ನೂ ಕುಸಿಯದಂತೆ ರಕ್ಷಣೆ ನೀಡಲಾಗುವದು ಮತ್ತು ಪರಿಣಿತರು ಸ್ಥಳ ಪರೀಕ್ಷೆ ನಡೆಸಿ ತುರ್ತು ದುರಸ್ತಿ ಕಾಮಗಾರಿ ನಡೆಸಲಾಗುವದು ಎಂದಿದ್ದಾರೆ.
ರಸ್ತೆ ಕುಸಿತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಸಿಪಿಐ ಸಂತೋಷ ಶೆಟ್ಟಿ ವಾಹನಗಳ ಸಂಚಾರಕ್ಕೆ ತೊಡಕಾಗದಂತೆ ಹೆದ್ದಾರಿ ಒಂದು ಬದಿಯಿಂದ ಮಾತ್ರ ವಾಹನಗಳು ಸಂಚರಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಮಳೆಯಲ್ಲಿಯೂ ಪೊಲೀಸ್ ಸಿಬಂದಿ ವಾಹನಗಳ ಸುಗಮ ಸಂಚಾರಕ್ಕೆ ತಮ್ಮ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಹೆದ್ದಾರಿಯಲ್ಲಿ ಮಲ್ಟಿ ಎಕ್ಸೆಲನ ಭಾರೀ ವಾಹನಗಳು ಸಂಚರಿಸುವದರಿಂದ ಸೂಕ್ತ ನಿಗಾ ವಹಿಸಲಾಗುತ್ತಿದೆ.ಸೇತುವೆಯ ಬಳಿಯ ರಸ್ತೆಯ ಮೇಲೆ ಬಹಳಷ್ಟು ಹೊಂಡಗಳಿದ್ದು ಸದ್ಯ ಜೆಸಿಬಿ ಬಳಸಿ ಜಲ್ಲಿಕಲ್ಲು ಮತ್ತಿತರ ಸಾಮಗ್ರಿಗಳನ್ನು ಬಳಸಿ ಹೊಂಡಗಳನ್ನು ಮುಚ್ಚಲಾಗುತ್ತಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.