ಪ್ರತ್ಯೇಕ ಹಾಲು ಒಕ್ಕೂಟಕ್ಕೆ ಯತ್ನ


Team Udayavani, Jan 20, 2020, 4:21 PM IST

UK-TDY-1

ಶಿರಸಿ: ತಾಲೂಕಿನ ಕೋಳಿಗಾರನಲ್ಲಿ ಭಾನುವಾರ ನಡೆದ ರಾಸು ಪ್ರದರ್ಶನ ಹಾಗೂ ಬರಡು ದನ ಚಿಕಿತ್ಸಾ ಶಿಬಿರ ಜನ ಮೆಚ್ಚುಗೆಗೆ ಪಾತ್ರವಾಯಿತು.

ಕೆ.ಎಂ.ಎಫ್‌ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ರಾಸು ಪ್ರದರ್ಶನಕ್ಕೆ ಚಾಲನೆ ನೀಡಿ, ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಕೇಂದ್ರ ರಚಿಸುವ ಪ್ರಯತ್ನ ಮಾಡಲಾಗುತ್ತಿದ್ದು, ಈ ಕುರಿತು ಹೋರಾಡುತ್ತಿದ್ದೇವೆ ಎಂದರು. ದೇಶಿ ತಳಿಗಳಿಗೆ ವಿದೇಶಿ ತಳಿಗಳ ಮಿಶ್ರಣದಿಂದಗುಣಮಟ್ಟದ ತಳಿಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಕೆ.ಎಂ.ಎಫ್‌ ಹಾಗೂ ಪಶು ಇಲಾಖೆ ತಳಿಗಳ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸುತ್ತಿದೆ ಎಂದರು.

ಹಳ್ಳಿ ಬಿಟ್ಟು ಪಟ್ಟಣ ಸೇರಿದ ಯುವಕರಲ್ಲಿಯೂ ಹೈನುಗಾರಿಕೆ ಕುರಿತು ಜಾಗೃತಿ ಮೂಡಿದೆ. ಕೃಷಿ ಲಾಭದಾಯವೆಂಬಜಾಗೃತಿ ಮೂಡಿಸಿ ಪುನಃ ಹಳ್ಳಿಗಳಲ್ಲಿ ಯುವಕರ ಸಂಖ್ಯೆ ಹೆಚ್ಚಿಸುವ ಕಾರ್ಯ ಮಾಡಬೇಕಿದೆ ಎಂದರು. ಪಶು ಇಲಾಖೆ ಉಪನಿರ್ದೇಶಕ ಡಾ| ಸುಬ್ರಾಯ ಭಟ್ಟ ಮಾತನಾಡಿ, ಈಚೆಗೆ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದೆ. ಯುವಕರು ಪಶುವೈದ್ಯಕೀಯ ವಿದ್ಯಾಭ್ಯಾಸದ ಮೂಲಕ ವೈದ್ಯಕೀಯ ವೃತ್ತಿಗೆ ಪಾದಾರ್ಪಣೆ ಮಾಡಬೇಕಿದೆ. ಯುವಕರು ಹೈನುಗಾರಿಕೆಯಲ್ಲಿ ಆಸಕ್ತಿ ಹೊಂದಬೇಕು ಎಂದರು.

ತಾಪಂ ಸದಸ್ಯ ರವಿ ಹೆಗಡೆ ಹಳದೋಟ ಮಾತನಾಡಿ, ಸರ್ಕಾರದಿಂದ ಹೈನುಗಾರರಿಗೆ ನೀಡಲ್ಪಡುವ ಔಷಧಗಳನ್ನು ಹಣಕ್ಕೆ ಮಾರಾಟ ಮಾಡುತ್ತಿರುವ ದೂರುಗಳು ಕೇಳಿಬಂದಿವೆ. ಅಂತಹ ಪ್ರಕರಣಗಳು ಮತ್ತೆಮತ್ತೆ ನಡೆಯದಂತೆ ಪಶು ಇಲಾಖೆ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದರು. ಇದೇ ವೇಳೆ ಕೋಳಿಗಾರ್‌ ಹಾಲು ಉತ್ಪಾದಕ ಸಂಘದ ಸದಸ್ಯರಿಗೆ ಹಾಲು ಕ್ಯಾನ್‌ ವಿತರಣೆ ಮಾಡಲಾಯಿತು. ಸಂಘದ ಹಿರಿಯ ಸದಸ್ಯ ರಾಮಕೃಷ್ಣ ಗಣಪತಿ ಹೆಗಡೆ ಮುರೇಗಾರ್‌ ಅವರನ್ನು ಸನ್ಮಾನಿಸಲಾಯಿತು.

ಅಂತೆಯೇ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಹಾಗೂ ಉಪನಿರ್ದೇಶ ಡಾ| ಸುಬ್ರಾಯ ಭಟ್ಟ ಅವರನ್ನು ಗೌರವಿಸಲಾಯಿತು. ಜಿಪಂ ಸದಸ್ಯ ಜಿ.ಎನ್‌. ಹೆಗಡೆ ಮುರೇಗಾರ್‌,ಕೆಎಂಎಫ್‌ ಸಹಾಯಕ ಸಿ.ಎಸ್‌. ಪರಮೇಶ್ವರಪ್ಪ, ತಟ್ಟಿಸರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಿ.ಟಿ. ಹೆಗಡೆ ಇನ್ನಿತರರು ಇದ್ದರು. ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ| ಆರ್‌.ಜಿ. ಹೆಗಡೆ, ಪಶು ವೈದ್ಯಾಧಿಕಾರಿ ಡಾ| ಎನ್‌.ಎಚ್‌. ಸವಣೂರು, ಡಾ| ರೋಹಿತ್‌ ಹೆಗಡೆ, ಡಾ| ರಾಕೇಶ್‌ ಇವರು ರಾಸುಗಳ ಆರೋಗ್ಯಕ್ಕೆ ಅಗತ್ಯವಿರುವ ಮಾಹಿತಿ ನೀಡಿದರು. ಪ್ರದರ್ಶನಗೊಂಡ ರಾಸುಗಳಲ್ಲಿ ಆಯಾ ವಿಭಾಗಕ್ಕೆ ತಕ್ಕಂತೆ ಉತ್ತಮ ರಾಸುಗಳೆಂದು ಆಯ್ಕೆ ಮಾಡಿ ಬಹುಮಾನ ವಿತರಿಸಲಾಯಿತು.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.