Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

ಮಳೆಯ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ ಜಲಾವೃತ

Team Udayavani, Jul 7, 2024, 8:05 PM IST

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

ಭಟ್ಕಳ: ತಾಲೂಕಿನಲ್ಲಿ ಮುಂದುವರಿದ ವರುಣನ ಆರ್ಭಟದಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದರೆ ಹಳ್ಳ, ನದಿಗಳು ಉಕ್ಕಿ ಹರಿಯುತ್ತಿದ್ದು ಯಾವ ಸಂದರ್ಭದಲ್ಲಿಯೂ ಕೂಡಾ ನೆರೆಹಾವಳಿಯಾಗುವ ಸಾಧ್ಯತೆ ಇದೆ.

ತಾಲೂಕಿನಲ್ಲಿ ರವಿವಾರ ಬೆಳಿಗ್ಗೆಯ 24 ಗಂಟೆಗಳಲ್ಲಿ 39.4 ಮಳೆಯಾಗಿದ್ದು ಇಲ್ಲಿನ ತನಕ ಒಟ್ಟೂ 1808.02 ಮಿ.ಮಿ. ಮಳೆಯಾದಂತಾಗಿದೆ. ರವಿವಾರ ಬೆಳಿಗ್ಗೆಯಿಂದ ಸಂಜೆಯ ತನಕ ಎಡೆಬಿಡದೇ ಸುರಿದ ಮಳೆಯಿಂದಾಗಿ ಹಲವೆಡೆ ನೆರೆಹಾವಳಿಯ ಭೀತಿ ಉಂಟಾಗಿದ್ದು ಅನೇಕ ಕಡೆಗಳಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಜನರು ಮನೆಯಿಂದ ಹೊರ ಬರದಂತೆ ದಿಗ್ಬಂಧನ ಹಾಕಿದಂತಾಗಿತ್ತು. ಅನೇಕ ಕಡೆಗಳಲ್ಲಿ ರಸ್ತೆಗಳಲ್ಲಿ ವಾಹನ ಓಡಾಟಕ್ಕೆ ತೀವ್ರ ಪರದಾಡುವಂತಾಗಿದ್ದು ಗ್ರಾಮೀಣ ಭಾಗದಲ್ಲಿಯ ರಸ್ತೆಗಳೂ ಕೂಡಾ ಇದಕ್ಕೆ ಹೊರತಾಗಿಲ್ಲ ಎನ್ನುವಂತಾಗಿದೆ.

ಅನೇಕ ಕಡೆಗಳಲ್ಲಿ ಗ್ರಾಮೀಣ ರಸ್ತೆಗಳು ಕೊಚ್ಚಿಹೋಗಿದ್ದು ವಾಹನ ಸವಾರರು ನಿತ್ಯ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು ಸರಕಾರ ಕಣ್ಣಿದ್ದೂ ಕುರುಡಾಗಿದೆ ಎನ್ನುವಂತಾಗಿದೆ.

ಯಾವುದೇ ಸಮಸ್ಯೆಗೆ ತುರ್ತು ಪರಿಹಾರ ದೊರೆಯದ ಕಾರಣ ಜನತೆ ನಿತ್ಯ ಸಂಕಷ್ಟ ಎದುರಿಸುವಂತಾಗಿದೆ.

ನಿತ್ಯದ ಪರದಾಟ: ಕಳೆದ 4-5ವರ್ಷಗಳಿಂದ ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಪರದಾಟ ಎನ್ನುವಂತಾಗಿದ್ದು ರವಿವಾರ ಮಾತ್ರ ಸುಮಾರು 3 ರಿಂದ 4 ಅಡಿ ನೀರು ಹೆದ್ದಾರಿಯಲ್ಲಿ ನಿಂತಿದ್ದರಿಂದ ವಾಹನಗಳು ಸುಮಾರು ಅರ್ಧ ಕಿ.ಮಿ.ಗೂ ಹೆಚ್ಚು ದೂರವನ್ನು ಕ್ರಮಿಸುವುದಕ್ಕೆ 15 ನಿಮಿಷ ಬೇಕಾಗುವಂತಾಗಿದೆ.

ಬೆಳಿಗ್ಗೆಯಿಂದ ಸಂಜೆಯ ತನಕವೂ ಒಂದೇ ರೀತಿಯಾಗಿದ್ದು ಅಂಬುಲೆನ್ಸ್ ಗಳೂ ಕೂಡಾ ಈ ಭಾಗವನ್ನು ದಾಟಲು ಸುಮಾರು 10 ನಿಮಿಷಕ್ಕೂ ಹೆಚ್ಚು ಸಮಯ ಹಿಡಿಯುವುದರಿಂದ ಮಾನವ ಹಕ್ಕುಗಳ ಉಲ್ಲಂಘನೆಯಾದಂತಾಗಿದೆ.

ಎಲ್ಲಿಯೋ ದೂರದಿಂದ ಬಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಗಮವಾಗಿ ಸಾಗಿ ಆಸ್ಪತ್ರೆಗೆ ಹೋಗಬಹುದು ಎನ್ನುವ ನಂಬಿಕೆಯಿಂದ ಅಂಬುಲೆನ್ಸ್ ನಲ್ಲಿ ಬರುವ ರೋಗಿ ಹಾಗೂ ರೋಗಿಯ ಪಾಲಕ ಚಿಂತನೆ ಹುಸಿಯಾಗಿ ಆಸ್ಪತ್ರೆಗೆ ಬೇಗ ತಲುಪುವ ಅವರನ್ನು ಹಕ್ಕನ್ನು ಕೂಡಾ ಹೆದ್ದಾರಿ ಇಲಾಖೆ ಕಸಿದುಕೊಂಡಿರುವುದು ತೀವ್ರ ಖೇದಕರ ವಿಷಯವಲ್ಲದೇ ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎನ್ನುವುದು ಸಾರ್ವಜನಿಕರ ಆಕ್ರೋಶವಾಗಿದೆ.

ನೀರಿನಲ್ಲಿ ತೇಲಿದ ಸಚಿವರ ಕಾರು: ರಂಗಿನಕಟ್ಟೆಯಲ್ಲಿನ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ಸುಮಾರು ಅರ್ಧ ಕಿ.ಮಿ.ಗಟ್ಟೆಲೆ ವಾಹನಗಳು ಸಾಲು ಸಾಲಾಗಿ ನಿಂತಿದ್ದರೆ ಇದೇ ಹೆದ್ದಾರಿಯಲ್ಲಿ ಬಂದ ಸಚಿವರ ಬೆಂಗಾವಲು ವಾಹನ ಹಾಗೂ ಸಚಿವರ ವಾಹನ ಕೂಡಾ ಸುಮಾರು10 ನಿಮಿಷಗಳ ಕಾಲ ಕಾಯುವಂತಾಯಿತು. ಬೆಂಗಾವಲು ವಾಹನ ಹೆದ್ದಾರಿಯ ಹಳ್ಳ ದಾಟಿದರೂ ಕೂಡಾ ಸಚಿವರ ಕಾರು ಮಾತ್ರ ಹಳ್ಳದಲ್ಲಿ ತೇಲಿ ಬಂದಂತೆ ದಾಟಿ ಹೋಗಿರುವುದು ಮಾತ್ರ ಪರಿಸ್ಥಿತಿಗೆ ಹಿಡಿದ ಕನ್ನಡಿಯಂತಿತ್ತು. ಪ್ರತಿ ಬಾರಿಯೂ ಇದೇ ಪರಿಸ್ಥಿತಿ ಇದ್ದರೂ ಕೂಡಾ ಸರಕಾರವಾಗಲೀ, ಅಧಿಕಾರಿಗಳಾಗಲೀ ಯಾವುದೇ ಕಠಿಣ ನಿರ್ಧಾರ ತೆಗೆದುಕೊಳ್ಳದಿರುವುದು ನಿತ್ಯ ಪ್ರಯಾಣಿಕರು ಗೋಳನ್ನು ಅನುಭವಿಸುವಂತಾಗಿದೆ.

ಹೆದ್ದಾರಿಯಲ್ಲಿ ಸುಗಮ ಸಂಚಾರಕ್ಕಾಗಿ ಟೋಲ್ ನೀಡುತ್ತಿದ್ದರೆ ಇಲ್ಲಿ ನೀರಿನಲ್ಲಿ ತೇಲಿ ಹೋದರೂ ಟೋಲ್ ವಸೂಲಿ ಮಾತ್ರ ನಿಂತಿಲ್ಲ.

ಐ.ಆರ್.ಬಿ. ಕೆಲಸ ಮಾಡುತ್ತಿರುವಾಗ ಗುಡ್ಡದ ಕುಸಿತದಿಂದಾಗಿ ಮಣ್ಣು ಹೊಳೆಯಲ್ಲಿ ತುಂಬಿಕೊಂಡು ನೀರು ಸರಾಗವಾಗಿ ಹೋಗಲು ಅಡತಡೆಯಾಗಿ ಮನೆಗೆ ನುಗ್ಗಲು ಕಾರಣವಾಗಿದೆ. ರಂಗೀಕಟ್ಟೆಯಲ್ಲಿ ನೀರು ಶೇಡ್ಕುಳಿ ಹೊಂಡಕ್ಕೆ, ಕೋಗ್ತಿಕೆರೆಗೆ ಹೋಗುತ್ತಿತ್ತು. ಈಗ ನೀರು ಹೋಗಲು ಜಾಗಾ ಇಲ್ಲದೇ ಇರುವುದರಿಂದ ಹೆದ್ದಾರಿಯಲ್ಲಿ ನೀರು ತುಂಬಿಕೊಳ್ಳುತ್ತಿದೆ. ತಕ್ಷಣ ಹೆದ್ದಾರಿ ಇಲಾಖೆಯವರು ತಾತ್ಕಾಲಿಕವಾಗಿ ಹಿಂದೆ ನೀರು ಹೋಗುತ್ತಿದ್ದ ದಾರಿ ಬಿಡಿಸಿಕೊಡಬೇಕು. ಅಂಬುಲೆನ್ಸ್ ಗಳಿಗೆ ಕೂಡಾ ಹೋಗಲು ಸಾಧ್ಯವಾಗುತ್ತಿಲ್ಲ ಇದು ಖಂಡನೀಯವಾಗಿದ್ದು ತಕ್ಷಣ ಸರಿಪಡಿಸಲು ಕ್ರಮ ತೆಗೆದುಕೊಳ್ಳಬೇಕು.
– ಅಬ್ದುಲ ಮಜೀದ್, ಜಿಲ್ಲಾ ಅಧ್ಯಕ್ಷರು, ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

ಅಂತ್ಯಾರಂಭ ಕೊಂಕಣಿ ಚಲನಚಿತ್ರ ಶೀಘ್ರ ಬಿಡುಗಡೆ: ಡಾ| ಕೆ. ರಮೇಶ್‌ ಕಾಮತ್‌ ನಿರ್ದೇಶನ

ಅಂತ್ಯಾರಂಭ ಕೊಂಕಣಿ ಚಲನಚಿತ್ರ ಶೀಘ್ರ ಬಿಡುಗಡೆ: ಡಾ| ಕೆ. ರಮೇಶ್‌ ಕಾಮತ್‌ ನಿರ್ದೇಶನ

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

ಶಿರಸಿಗೆ ಶೀಘ್ರ ಬರಲಿದೆ ಸಂಚಾರ ಪೊಲೀಸ್‌ ಠಾಣೆ!

ಕಾರವಾರ: ರಾಷ್ಟ್ರೀಯ-ರಾಜ್ಯ ಹೆದ್ದಾರಿಗಳ ಹೊಂಡ ಮುಚ್ಚಲು ಒತ್ತಾಯ

ಕಾರವಾರ: ರಾಷ್ಟ್ರೀಯ-ರಾಜ್ಯ ಹೆದ್ದಾರಿಗಳ ಹೊಂಡ ಮುಚ್ಚಲು ಒತ್ತಾಯ

ಜಿಲ್ಲೆಯಲ್ಲಿ ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ- ಸತೀಶ್‌ ಸೈಲ್‌

ಜಿಲ್ಲೆಯಲ್ಲಿ ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ- ಸತೀಶ್‌ ಸೈಲ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.