ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ


Team Udayavani, Apr 30, 2024, 6:23 PM IST

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

■ ಉದಯವಾಣಿ ಸಮಾಚಾರ
ಭಟ್ಕಳ: ದಿನದಿಂದ ದಿನಕ್ಕೆ ಬಿಸಿಲ ತಾಪ ಏರುತ್ತಿದ್ದು ತಾಲೂಕಿನ ಹಲವೆಡೆ ಜೀವ ಜಲ ಪಾತಾಳಕ್ಕಿಳಿಯುತ್ತಿದ್ದು ಕೆಲವೇ ದಿನಗಳಲ್ಲಿ ನೀರಿಗೆ ಬರ ಬಂದರೂ ಆಶ್ಚರ್ಯವಿಲ್ಲ ಎನ್ನುವಂತಾಗಿದೆ. ತಾಲೂಕಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಲೇ ಇದ್ದು ಕಳೆದ ಸುಮಾರು ಒಂದು ವಾರದಿಂದ 28 ಡಿಗ್ರಿಯಿಂದ 36-38 ಡಿಗ್ರಿಯ ತನಕ ತಾಪಮಾನ ದಾಖಲಾಗುತ್ತಿದೆ. ಕೆಲ ದಿನಗಳ ಹಿಂದೆ ಎರಡು ಮಳೆ ಬಂದಾಗ ಮಾತ್ರ ಕೊಂಚ ತಾಪಮಾನ ಕಡಿಮೆಯಾಗಿದ್ದು ಬಿಟ್ಟರೆ ಮತ್ತೆ ಬಿಸಿಲ ಪ್ರಖರತೆ ಹೆಚ್ಚುತ್ತಲೇ ಇದ್ದು ಸೆಖೆ ತಡೆಯಲಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಭಟ್ಕಳ ತಾಲೂಕಿನಾದ್ಯಂತ ಬಿರು ಬೇಸಿಗೆ ಹಾಗೂ ನೀರಿನ ಕೊರತೆ ಜನರನ್ನು ಹೈರಾಣಾಗಿಸಿದೆ. ಇನ್ನು ಕೆಲ ದಿನಗಳ ಕಾಲ ಮಳೆ ಬಾರದಿದ್ದರೆ ಹನಿ ನೀರಿಗೂ ಕಷ್ಟಪಡುವ ಪರಿಸ್ಥಿತಿ ಬಂದರೂ ಆಶ್ಚರ್ಯವಿಲ್ಲ. ಹಿಂದೆ ನದಿ, ಹೊಳೆ-ಹಳ್ಳಗಳಿಗೆ ಕಟ್ಟು (ಒಡ್ಡು) ಹಾಕಿ ಕೃಷಿ ಚಟುವಟಿಕೆಗೆ ನೀರು ನಿಲ್ಲಿಸುವುದರಿಂದ ಅಕ್ಕಪಕ್ಕದ ಕಿ.ಮೀ. ಗಟ್ಟಲೆ ಪ್ರದೇಶದಲ್ಲಿ ತಂಪು ಗಾಳಿಯಾದರೂ ಬೀಸುತ್ತಿತ್ತು. ಬಾವಿ, ಕೆರೆಗಳಲ್ಲಿ ನೀರಿನ ಸೆಲೆ ಉಳಿದುಕೊಂಡು ಕುಡಿಯುವ ನೀರಿಗೆ ಬರ ಎನ್ನುವುದು ಇರಲಿಲ್ಲ. ಆದರೆ ಇಂದು ಕೃಷಿಯೇ ನಾಸ್ತಿಯಾಗಿದೆ. ಮಳೆಗಾಲದಲ್ಲೂ ಕೂಡಾ ಕೆಲವೊಂದು ಗದ್ದೆಗಳನ್ನು ಪಾಳು ಬಿಡುತ್ತಿರುವ ಇಂದಿನ ಕಾಲದಲ್ಲಿ ಬೇಸಿಗೆ ಕೃಷಿಯಂತು ದೂರದ ಮಾತಾಗಿದೆ.

ಬತ್ತಿದ ನದಿ-ಬಾವಿ: ತಾಲೂಕಿನಲ್ಲಿ ನೂರಾರು ನದಿ, ಹಳ್ಳ-ಕೊಳ್ಳಗಳಿದ್ದು ಇವುಗಳಲ್ಲಿ ಅರ್ಧದಷ್ಟು ನವೆಂಬರ್‌-ಡಿಸೆಂಬರ್‌ ಕೊನೆ ವಾರವೇ ಒಣಗಿ ಹೋದರೆ ಮತ್ತೆ ಸುಮಾರು ಶೇ.25 ರಷ್ಟು ಮಾರ್ಚ್‌ ವೇಳೆಗೆ ಬತ್ತಿ ಬರಡಾಗಿವೆ. ಇನ್ನು ಕೆಲವೇ ಕೆಲವು ನದಿ, ಹಳ್ಳ-ತೊರೆಗಳು ಏಪ್ರಿಲ್‌, ಮೇ ತನಕ ಇರುತ್ತಿದ್ದು, ಅವು ಜೀವ ಸೆಲೆಗಳಾಗಿ ಇಲ್ಲಿನ ಬಾವಿ, ಕೆರೆಗಳಿಗೆ ನೀರುಣಿಸುವ ಜಲಮೂಲವಾಗಿವೆ. ಆದರೆ ಕಳೆದ ಎರಡು ದಶಕಗಳಿಂದ ಇವು ಕೂಡಾ ಬತ್ತಿ ಹೋಗುತ್ತಿದ್ದು ನೀರನ್ನು ಕಟ್ಟುಕಟ್ಟಿ ಹಿಡಿದಿರುವ ಸಂಪ್ರದಾಯವೂ ಮಾಯವಾಗಿದ್ದರಿಂದ ನೀರಿನ ಸೆಲೆಯೇ ಇಲ್ಲದಂತಾಗಿದೆ.

ಟ್ಯಾಂಕರ್‌ ನೀರೇ ಗತಿ: ಏಪ್ರಿಲ್‌ ತಿಂಗಳಿನಲ್ಲಿಯೇ ತಾಲೂಕಿನಲ್ಲಿ ಕುಡಿಯುವ ನೀರಿನ ಬರ ಉಂಟಾಗಿದ್ದು. ತಾಲೂಕಿನಲ್ಲಿ ವರ್ಷ ವರ್ಷ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಕೊರತೆ ಹೆಚ್ಚುತ್ತಿದೆ. ಆದರೆ ಬೇಸಿಗೆ ಮಧ್ಯದಲ್ಲಿ ಒಂದೆರಡು ಉತ್ತಮ ಮಳೆ ಸುರಿದು ದಾಹ ತೀರಿಸುವಲ್ಲಿ ಸಫಲವಾಗುತ್ತಿತ್ತು. ಈ ಬಾರಿಯ ಮಳೆ ಕೇವಲ ಒಂದೆರಡು ತಾಸು ಬಂದು ಹೋಗಿದ್ದು, ಇರುವ ನೀರನ್ನು ಒಣಗಸಿದೆ ಎನ್ನುವುದು ಹಿರಿಯರ ಮಾತು. ಕೆಲವು ಪ್ರದೇಶದಲ್ಲಿ ಬಾವಿಗಳು ಸಂಪೂರ್ಣ ಬತ್ತಿ ಹೋಗಿ ಆ ಭಾಗದ ಜನ ಪಂಚಾಯತ್‌ ನೀಡುವ ಟ್ಯಾಂಕರ್‌ ನೀರು ಅಥವಾ ಹತ್ತಿರದಲ್ಲಿನ ಇರುವ ಯಾವುದಾದರೂ ಒಂದು ಬಾವಿಯನ್ನು ಆಶ್ರಯಿಸುವ ಸ್ಥಿತಿ ಎದುರಾಗಿದೆ.

ಹೆಚ್ಚಿದ ಆತಂಕ: ಆದರೆ ಈ ಬಾರಿ ಈಗಾಗಲೇ ಬಾವಿಗಳು ಒಣಗಿದ್ದರಿಂದ ಜನ ಹಾಗೂ ತಾಲೂಕಾಡಳಿತವನ್ನು ಆತಂಕಕ್ಕೆ ಈಡು ಮಾಡಿದೆ. ಎಲ್ಲರ ಬಾವಿಗಳೂ ಬತ್ತಿ ಹೋಗುತ್ತಾ ಬಂದಿದ್ದು ಜನರಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ನಗರಕ್ಕೆ ನೀರು ಸರಬರಾಜು ಮಾಡುತ್ತಿದ್ದ ಇಲ್ಲಿನ ಕಡವಿನ ಕಟ್ಟೆ ಡ್ಯಾಂ ಕೂಡಾ ಇನ್ನೇನು ಕೆಲವೇ ದಿನಗಳಲ್ಲಿ ಬತ್ತಿ ಹೋಗುವ ಸಾಧ್ಯತೆ ಇದ್ದು ನಗರಕ್ಕೆ, ಶಿರಾಲಿ, ಜಾಲಿ ಹಾಗೂ ಮಾವಿನಕುರ್ವೆ ನೀರು ಸರಬರಾಜು ವ್ಯತ್ಯಯವಾಗಲಿದೆ. ಇನ್ನಾದರೂ ಉತ್ತಮ ಮಳೆ ಬಂದು ಬಾವಿ, ಹಳ್ಳ, ನದಿ-ತೊರೆಗಳಲ್ಲಿ ನೀರು ತುಂಬಿಕೊಂಡರೆ ಮಾತ್ರ ಕುಡಿಯುವ ನೀರು ದೊರೆಯಬಹದು. ಇಲ್ಲವಾದಲ್ಲಿ ನೀರಿನ ಬವಣೆ ತಪ್ಪಿದ್ದಲ್ಲ.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.