ಭಟ್ಕಳ: ತಗ್ಗಿದ ಮಳೆಯ ಪ್ರಮಾಣ… ನಿಟ್ಟುಸಿರು ಬಿಟ್ಟ ಜನ


Team Udayavani, Jul 7, 2023, 10:02 PM IST

ಭಟ್ಕಳ: ತಗ್ಗಿದ ಮಳೆಯ ಪ್ರಮಾಣ… ನಿಟ್ಟುಸಿರು ಬಿಟ್ಟ ಜನ

ಭಟ್ಕಳ: ತಾಲೂಕಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಶುಕ್ರವಾರ ಸ್ವಲ್ಪ ಬಿಡುವು ದೊರೆತಿದ್ದು ಜನರು ನಿಟ್ಟುಸಿರು ಬಿಡುವಂತಾಯಿತು. ಶಾಲೆಗೆ ರಜೆ ಕೊಟ್ಟಿದ್ದರಿಂದ ಮಳೆಯಿಲ್ಲದಿದ್ದರೂ ರಸ್ತೆಯಲ್ಲಿ ಸಂಚಾರ ವಿರಳವಾಗಿತ್ತು.

ಕಳೆದ ಮರ‍್ನಾಲ್ಕು ದಿನಗಳಿಂದ ಎಲ್ಲೆಂದರಲ್ಲಿ ನೀರು ತುಂಬಿಕೊಂಡಿದ್ದೇ ಕಾಣುತ್ತಿದ್ದರೆ ಇಂದು ನೀರಿನ ಪ್ರಮಾಣ ತಗ್ಗಿದ್ದು ಸ್ವಲ್ಪ ಸಮಾಧಾನ ತರುವಂತಿತ್ತು.

ಗುರುವಾರ ಸಂಜೆ ಸಚಿವ ಮಂಕಾಳ ವೈದ್ಯ ಐಆರ್‌ಬಿ, ಹೆದ್ದಾರಿ ಪ್ರಾಧಿಕಾರ, ಪುರಸಭೆಯ ಅಧಿಕಾರಿಗಳಿಗೆ ಹೆದ್ದಾರಿಯ ಮೇಲೆ ನೀರು ನಿಲ್ಲುವ ಕುರಿತು ಹಿಗ್ಗಾಮುಗ್ಗಾ ಝಾಢಿಸಿದ್ದರಿಂದ ಇಂದು ಬೆಳಿಗ್ಗೆಯಿಂದಲೇ ಐ.ಆರ್.ಬಿ. ಕಂಪೆನಿಯ ಜೆ.ಸಿ.ಬಿ. ಕಾಣಿಸಿಕೊಂಡಿದೆ. ಮಳೆ ನೀರು ಹರಿದು ಹೋಗಲು ಗಟಾರ ಬಿಡಿಸಿಕೊಡುವ ಕೆಲಸಕ್ಕೆ ಚಾಲನೆ ಸಿಕ್ಕಿತ್ತು. ಪುರಸಭೆಯವರೂ ಸಹ ತಾಲೂಕು ಪಂಚಾಯತ್, ಪಿಎಲ್‌ಡಿ ಬ್ಯಾಂಕ್ ಎದುರು ಮತ್ತಿತರ ಕಡೆ ಜೆಸಿಬಿ ಸಹಾಯದಿಂದ ನೀರು ಸರಾಗವಾಗಿ ಹರಿದು ಹೋಗಲು ಗಟಾರ ಬಿಡಿಸುವ ಕೆಲಸ ಮಾಡಿದರು.

ಸಚಿವರು ಅಧಿಕಾರಿಗಳ ಸಭೆಯಲ್ಲಿ ಈ ಹಿಂದೆ ಮಳೆಗಾಲಕ್ಕೂ ಮೂರು ತಿಂಗಳ ಮೊದಲು ಜಿಲ್ಲಾಧಿಕಾರಿಗಳು ಸಭೆ ಮಾಡಿ ಮಳೆಗಾಲಕ್ಕೆ ಮೊದಲು ತಯಾರಿ ಮಾಡಿಕೊಳ್ಳಲು ಹೇಳಿದ್ದರೂ ಸಹ ಎನೂ ಮಾಡದೇ ಹೆದ್ದಾರಿಯಲ್ಲಿ ಹೊಳೆಯಾಗುವಂತೆ ಮಾಡಿದ್ದೀರಲ್ಲ ಎಂದು ಅಧಿಕಾರಿಗಳನ್ನು, ಐ.ಆರ್.ಬಿ.ಯವರನ್ನು ಪ್ರಶ್ನಿಸಿದ್ದಲ್ಲದೇ ಯಾವುದೇ ಅಧಿಕಾರಿ ಕೆಲಸ ಮಾಡಲು ಇಷ್ಟವಿಲ್ಲದಿದ್ದರೆ ಜಿಲ್ಲೆಯಿಂದ ಹೊರಗೆ ವರ್ಗ ಮಾಡಿಕೊಂಡು ಹೋಗುವುದಕ್ಕೆ ತಾನೇ ಅನುಮತಿ ನೀಡುತ್ತೇನೆ ಎಂದಿದ್ದು ಪುರಸಭಾ ಅಧಿಕಾರಿಗಳಾದಿಯಾಗಿ ಎಲ್ಲರಿಗೂ ಬಿಸಿ ಮುಟ್ಟಿತ್ತು.

ಭಟ್ಕಳದಲ್ಲಿ ನೀರು ತುಂಬಿಕೊಳ್ಳಲು ಪುರಸಭೆಯವರ ನಿರ್ಲಕ್ಷ ಕೂಡಾ ಇದೆ ಎನ್ನುವುದನ್ನು ಇನಾಯತ್‌ವುಲ್ಲಾ ಶಾಬಂದ್ರಿ ತಿಳಿಸಿದ್ದರು.

ಪಟ್ಟಣದಲ್ಲಿ ಐಆರ್‌ಬಿಯವರು ಮಳೆಗಾಲದ ಪೂರ್ವದಲ್ಲೇ ಗಟಾರ ನಿರ್ಮಾಣ ಅಥವಾ ಸರಿಯಾಗಿ ನೀರು ಹರಿದು ಹೋಗಲು ಗಟಾರ ಬಿಡಿಸಿಕೊಡುವ ಕೆಲಸ ಮಾಡಿದ್ದರೆ ಮಳೆಗಾಲದಲ್ಲಿ ಮಳೆ ನೀರು ಹೆದ್ದಾರಿ ಮೇಲೆ ಶೇಖರಣೆ ಆಗಿ ಜನರಿಗೆ ತೊಂದರೆ ಆಗುವ ಪ್ರಶ್ನೆಯೇ ಇರುತ್ತಿರಲಿಲ್ಲ ಎನ್ನುವ ಅಭಿಪ್ರಾಯ ಸಾರ್ವಜನಿಕರಿಂದ ಕೇಳಿ ಬಂದಿದೆ. ಶುಕ್ರವಾರ ಬೆಳಿಗ್ಗೆಯಿಂದ 24 ಗಂಟೆಗಳಲ್ಲಿ 120 ಮಿಮಿ ಮಳೆಯಾಗಿದೆ.

ಇದನ್ನೂ ಓದಿ: 

ಟಾಪ್ ನ್ಯೂಸ್

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

Middle Class Family Tulu movie

Middle Class Family: ಮತ್ತೆ ರಂಜಿಸಲು ಬರುತ್ತಿದ್ದಾರೆ ಸೌಂಡ್‌ ಲೈಟ್ಸ್‌ ಹುಡುಗರು

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

1-aa

Congress MLA ; ಬೇಲೇಕೇರಿ ಅದಿರು ನಾಪತ್ತೆ ಕೇಸ್: ಕಾರವಾರ ಶಾಸಕ ಸತೀಶ್ ಸೈಲ್‌ ದೋಷಿ

Shiggaon: ಉಪ ಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

Shiggaon: ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

Zee Kannada Kutumba Awards-2024

Kutumba Awards-2024: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.