BJP ಶಿಸ್ತಿನ ಪಕ್ಷಕ್ಕೆ “ಅ” ಸೇರಿದೆ: ಶಾಸಕ ಶಿವರಾಮ ಹೆಬ್ಬಾರ್ ಟಾಂಗ್
Team Udayavani, Sep 2, 2024, 5:56 PM IST
ಶಿರಸಿ: ಶಿಸ್ತಿನ ಪಕ್ಷ ಎಂಬ ಪಟ್ಟ ಬಿಜೆಪಿಗೆ ಈಗಿಲ್ಲ. ಶಿಸ್ತಿನ ಶಬ್ಧದ ಬುಡದಲ್ಲಿ ಹಿಂದೆ “ಅ” ಸೇರಿದೆ ಎಂದು ಬಿಜೆಪಿಯ ರೆಬಲ್ ಶಾಸಕ ಶಿವರಾಮ ಹೆಬ್ಬಾರ್ ಟಾಂಗ್ ನೀಡಿದರು.
ಸೋಮವಾರ ಶಿರಸಿ ಗುಡ್ನಾಪುರದಲ್ಲಿ ಮಾತನಾಡಿದ ಅವರು, ಈಗ ಬಿಜೆಪಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಬಿಜೆಪಿಯ ಹಿರಿಯ ನಾಯಕ ಬಸವನಗೌಡ ಪಾಟೀಲ ಯತ್ನಾಳ್ ಅವರು ಯಡಿಯೂರಪ್ಪ ಮತ್ತು ಅವರ ಮಕ್ಕಳ ಬಗ್ಗೆ ವಿಧಾನಸೌಧದ ಒಳಗಡೆ ಮತ್ತು ಹೊರಗಡೆ ಏನೆಲ್ಲ ಮಾತನಾಡಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಸಾವಿರಾರು ಕೋಟಿ ರೂ. ಪಡೆದಿದ್ದಾರೆ ಎಂದು ನೇರವಾಗಿ ಹೇಳಿದ್ದಾರೆ. ಅವರನ್ನು ಏನು ಮಾಡಿದ್ದಾರೆ? ದೊಡ್ಡವರು ತಿಂದರೆ ಔಷಧ, ಬಡವರು ತಿಂದರೆ ಹೊಟ್ಟೆಗೆ ಹಿಟ್ಟಿಲ್ಲ ಎಂಬಂತಲ್ವಾ ಎಂದು ಬಿಜೆಪಿಗರನ್ನು ಪ್ರಶ್ನಿಸಿದರು.
ದೇಶಪಾಂಡೆ ಅವ್ರಾದರೆ ಸಂತೋಷ:
ಉತ್ತರಕನ್ನಡ ಜಿಲ್ಲೆಯಲ್ಲಿ ರಾಮಕೃಷ್ಣ ಹೆಗಡೆ ನಂತರ ಮತ್ತೆ ಮುಖ್ಯಮಂತ್ರಿ ಸ್ಥಾನ ಬರುತ್ತದೆ ಎಂದರೆ ಸಂತೋಷ. ರಾಜಕೀಯದ ದೃಷ್ಟಿಕೋನದಲ್ಲಿ ಚರ್ಚೆ ಮಾಡುವುದಿಲ್ಲ. ಜಿಲ್ಲೆಯ ಸರ್ವಾಂಗೀಣ ಪ್ರಗತಿ ಮತ್ತು ಅಭಿವೃದ್ಧಿಯಾಗಬೇಕು. ಜಿಲ್ಲೆಗೆ ಮುಖ್ಯಮಂತ್ರಿ ಸ್ಥಾನ ಬಂದರೆ ಸ್ವಾಗತಿಸುತ್ತೇನೆ ಎಂದು ಆರ್.ವಿ.ದೇಶಪಾಂಡೆ ಅವರ ಪರವಾಗಿ ಪರೋಕ್ಷ ಬ್ಯಾಟಿಂಗ್ ಬೀಸಿದರು.
ನಾನು ಜನರ ನಡುವೆ ಇರುವವರು. ಜನರ ಉತ್ತರಕ್ಕಾಗಿ ಕಾಯುತ್ತೇವೆ. ಜನರು ಹೋಗು ಹೇಳಿದಾಗ ಹೋಗುತ್ತೇವೆ. ಅವರು ಇಟ್ಟುಕೊಂಡಾಗ ಅವರ ಕೆಲಸ ಮಾಡುತ್ತೇವೆ. ಇದರ ಕುರಿತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಚಿಂತೆ ಮಾಡುವ ಅವಶ್ಯಕತೆಯಿಲ್ಲ ಎಂದು ಪ್ರತ್ಯುತ್ತರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.