![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-415x233.jpg)
Khanapur ಅಭಿಮಾನಿಗಳಿಗೂ ಅದೇ ಭರವಸೆ: ಅನಂತ ನಡೆ ಇನ್ನೂ ನಿಗೂಢ!
ಕಾರ್ಯಕರ್ತರಿಗೆ ದಕ್ಕಿದ್ದು ಸ್ವೀಟು, ಕಷಾಯ ಹಾಗೂ ಸೆಲ್ಪಿ!
Team Udayavani, Dec 28, 2023, 7:42 PM IST
![1-sadsadsa](https://www.udayavani.com/wp-content/uploads/2023/12/1-sadsadsa-7-620x404.jpg)
ಶಿರಸಿ: ಕಳೆದ ಒಂದು ವಾರದಿಂದ ತೀವ್ರ ಕುತೂಹಲದ ಕೇಂದ್ರವಾಗಿರುವ ಅನಂತಕುಮಾರ ಹೆಗಡೆ ಅವರ ಮನೆ ಶಿವೋಹಂದಲ್ಲಿ ಗುರುವಾರವೂ ಹೆಗಡೆ ಅವರ ಅಭಿಮಾನಿಗಳು, ಕಾರ್ಯಕರ್ತರು ಮತ್ತೆ ಚುನಾವಣೆಗೆ ಸ್ಪರ್ಧಿಸುವಂತೆ ಆಗ್ರಹಿಸಿದರು.
ಹಿಂದೂ ಫೈರ್ ಬ್ರಾಂಡ್ ಸಂಸದ ಅನಂತಕುಮಾರ ಹೆಗಡೆ ಅವರ ನಿವಾಸಕ್ಕೆ ಖಾನಾಪುರದ ಶ್ರೀರಾಮ ಸೇನಾ ಪ್ರಮುಖರು, ಬಿಜೆಪಿ ಕಾರ್ಯಕರ್ತರು ಭೇಟಿ ನೀಡಿ, ಈ ಬಾರಿ ಸ್ಪರ್ಧಿಸಬೇಕೆಂದು ಆಗ್ರಹಿಸಿದರು. ಆದರೆ ಅನಂತಕುಮಾರ ಹೆಗಡೆ ಅವರು ಎಂದಿನಂತೆ ವಾರದೊಳಗೆ ಸಂಘಟನೆಯ ಪ್ರಮುಖರ ಜೊತೆ ಚರ್ಚೆ ನಡೆಸಿ ನಿರ್ಣಯ ಹೇಳುವದಾಗಿ ಹೇಳಿದರು. ಆಗಮಿಸಿದ ಅಭಿಮಾನಿಗಳಿಗೆ ಚಹಾ, ಮಜ್ಜಿಗೆ, ಸ್ವೀಟ್ ನೀಡಿ ಬೀಳ್ಕೊಟ್ಟರು. ಕಾರ್ಯಕರ್ತರು ಸೆಲ್ಪಿಗೆ ಮುಗಿ ಬಿದ್ದರು.
ಕಳೆದ 4 ವರ್ಷದಿಂದ ಸಕ್ರಿಯ ರಾಜಕಾರಣ ಮತ್ತು ಪಕ್ಷ ರಾಜಕಾರಣದಿಂದ ದೂರ ಉಳಿದಿದ್ದ ಅನಂತಕುಮಾರ ಹೆಗಡೆ ಮನೆಗೆ ಜಿಲ್ಲೆಯ ಮುಖಂಡರು ಹಾಗೂ ಕಾರ್ಯಕರ್ತರು ಭೇಟಿ ನೀಡಿ, ಈ ಬಾರಿ ಖಂಡಿತ ಸ್ಪರ್ಧೆ ಮಾಡಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಈವರೆಗೂ 11 ತಾಲೂಕಿನ ಕಾರ್ಯಕರ್ತರ ಮಾತನ್ನು ಆಲಿಸಿ, ಬಿಜೆಪಿಗೆ ಅದರದ್ದೆ ಆದ ಸಿದ್ದಾಂತವಿದೆ. ಉಳಿದ ಪಕ್ಷಗಿಂತ ಬಿಜೆಪಿ ಭಿನ್ನವಾಗಿದೆ. ಸಂಘಟನೆ ಹಾಗೂ ಪಕ್ಷದ ವರಿಷ್ಠರ ಜತೆ ಚರ್ಚಿಸುತ್ತೇನೆ ಎಂದು ಅಷ್ಟೇ ಹೇಳಿದ್ದಾರೆ ಹೊರತು ಇನ್ನೊಬ್ಬರಿಗೆ ಅವಕಾಶ ನೀಡಿ ಮತ್ತು ನಾನೇ ಈ ಬಾರಿಯ ಅಭ್ಯರ್ಥಿ ಎಂದು ಮಾತ್ರ ಹೇಳಿಲ್ಲ. ಅದನ್ನೇ ಗುರುವಾರವೂ ಹೇಳಿದರು.
ಖಾನಾಪುರ ಭಾಗದ ನೂರಾರು ಸಂಖ್ಯೆಯ ಕಾರ್ಯಕರ್ತರು ಹಾಗೂ ಅನಂತಕುಮಾರ ಹೆಗಡೆ ಅಭಿಮಾನಿಗಳು ಅವರ ಶಿವೋಹಂ ನಿವಾಸಕ್ಕೆ ಭೇಟಿ ನೀಡಿ, ಹಿಂದುತ್ವದ ರಕ್ಷಣೆಗಾಗಿ ಅನಂತಕುಮಾರ ಹೆಗಡೆ ಮತ್ತೊಮ್ಮೆ ಸ್ಪರ್ಧಿಸಬೇಕು. ಇಲ್ಲವಾದಲ್ಲಿ ನಾವೆಲ್ಲರೂ ಅನಾಥರಾಗುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಲು ಅನಂತಕುಮಾರ ಹೆಗಡೆ ಮತ್ತೊಮ್ಮೆ ಸ್ಪರ್ಧಿಸಬೇಕು ಎಂದು ಸಂಸದರನ್ನು ಆಗ್ರಹಿಸಿದರು.
ಖಾನಾಪುರದ ಹಿಂದೂ ಪ್ರಮುಖ ಪಂಡಿತ ಓಗೊಲೆ ಮಾತನಾಡಿ, ಕೆನರಾ ಕ್ಷೇತ್ರದಲ್ಲಿ ಹಿಂದುತ್ವ ಉಳಿಯಲು ನೀವು ನಿಲ್ಲಬೇಕು. ಇಲ್ಲದೇ ಹೋದರೆ ಸಾವಿರಾರು ಹಿಂದೂ ಕಾರ್ಯಕರ್ತರು ಮನೆ ಎದುರು ಧರಣಿ ನಡೆಸುತ್ತಾರೆ ಎಂದರು. ಈ ವೇಳೆ ಪ್ರಮುಖ ಪ್ರಮುಖ ಕೃಷ್ಣ ಎಸಳೆ, ಚಂದ್ರು ದೇವಾಡಿಗ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.
ನಾಲ್ಕು ವರ್ಷದಿಂದ ಸಂಸದರು ಕಾಣಲಿಲ್ಲ ಎಂಬ ಬೇಸರವಿತ್ತು. ಅವರನ್ನು ನೋಡಿದಾಗ ಅದೆಲ್ಲ ಮಾಯವಾದುದ್ದೇ ಅಚ್ಚರಿ. ಅವರ ಜತೆ ಸೆಲ್ಪಿ ಪಡೆದು ಕೈ ಕುಲಕಿದೆ ಎಂದು ಬಿಜೆಪಿ ಕಾರ್ಯಕರ್ತ ಗಣೇಶ ಸಂಭ್ರಮ ಹಂಚಿಕೊಂಡರು.
ಟಾಪ್ ನ್ಯೂಸ್
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ](https://www.udayavani.com/wp-content/uploads/2024/07/charmadi-150x83.jpg)
Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ
![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-150x83.jpg)
IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ
![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-150x84.jpg)
Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ
![Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ](https://www.udayavani.com/wp-content/uploads/2024/07/kumata-150x93.jpg)
Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-150x84.jpg)
Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!
![Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ](https://www.udayavani.com/wp-content/uploads/2024/07/charmadi-150x83.jpg)
Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ
![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-150x83.jpg)
IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ
![Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ](https://www.udayavani.com/wp-content/uploads/2024/07/9-3-150x90.jpg)
Divorce Case: ಯುವ ರಾಜ್ಕುಮಾರ್ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ
![Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು](https://www.udayavani.com/wp-content/uploads/2024/07/gas-1-150x83.jpg)
Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.