ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ನಿಮಿತ್ತ ಸ್ವಚ್ಛತಾ ಶ್ರಮದಾನ


Team Udayavani, Sep 27, 2021, 5:23 PM IST

ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ನಿಮಿತ್ತ ಸ್ವಚ್ಛತಾ ಶ್ರಮದಾನ

ದಾಂಡೇಲಿ : ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ನಿಮಿತ್ತ ದಾಂಡೇಲಿ-ಜೋಯಿಡಾ ತಾಲೂಕು ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲಕರ ಅಸೋಶಿಯೇಶನ್ ಆಶ್ರಯದಲ್ಲಿ ಜೋಯಿಡಾ ತಾಲೂಕಿನ ಬಾಪೇಲಿಯಲ್ಲಿರುವ ಬ್ಯಾಕ್ ವಾಟರ್ ಪ್ರದೇಶ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗಿನಿಂದ ಸ್ವಚ್ಛತಾ ಶ್ರಮದಾನವನ್ನು ಹಮ್ಮಿಕೊಳ್ಳಲಾಯ್ತು.

ದಾಂಡೇಲಿ-ಜೋಯಿಡಾ ತಾಲೂಕು ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲಕರ ಅಸೋಶಿಯೇಶನ್ ಇದರ ಅಧ್ಯಕ್ಷರಾದ ವಿಷ್ಣುಮೂರ್ತಿ ರಾವ್ ಅವರು ಮಾತನಾಡಿ ಸ್ವಚ್ಛತೆಯೆ ಎಲ್ಲದಕ್ಕೂ ಮೂಲವಾಗಿದೆ. ಸ್ವಚ್ಚತೆಯಿದ್ದಲ್ಲಿ ಸಮೃದ್ದ ಆರೋಗ್ಯ ನಿರ್ಮಾಣ ಸಾಧ್ಯವಿದೆ. ಪ್ರವಾಸೋದ್ಯಮ ದಿನಾಚರಣೆಯ ನಿಮಿತ್ತವಾಗಿ ಪ್ರವಾಸಿ ಸ್ಥಳಗಳನ್ನು ಸ್ವಚ್ಛವಾಗಿಡುವ ಉದ್ದೇಶ ಹಾಗೂ ಈ ಬಗ್ಗೆ ಜಾಗೃತಿಯನ್ನು ಮೂಡಿಸುವ ನಿಟ್ಟಿನಿಂದ ದಾಂಡೇಲಿ-ಜೋಯಿಡಾ ತಾಲೂಕು ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲಕರ ಅಸೋಶಿಯೇಶನ್ ಸ್ವಚ್ಛತಾ ಶ್ರಮದಾನವನ್ನು ಹಮ್ಮಿಕೊಂಡಿದೆ. ಸಮೃದ್ದವಾದ ದಟ್ಟ ಅರಣ್ಯವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಪ್ರತಿಜ್ಞೆಯನ್ನು ನಾವು ನೀವೆಲ್ಲರೂ ಮಾಡಬೇಕೆಂದು ಕರೆ ನೀಡಿದರು.

ಇದನ್ನೂ ಓದಿ: ಅ.11ರವರೆಗೆ ನೈಟ್ ಕರ್ಫ್ಯೂ ಮುಂದುವರಿಸಿ ಆದೇಶ

ಸ್ಥಳೀಯ ಅರಣ್ಯ ರಕ್ಷಕರಾದ ರಾಮಚಂದ್ರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಜೀವವೈವಿಧ್ಯತೆಗಳಿಂದ ವಿಶ್ವಮನ್ನಣೆಗೆ ಪಾತ್ರವಾದ ಈ ಭಾಗದ ಅರಣ್ಯ ಸಂಪತ್ತು ಹಾಗೂ ಜೀವವೈವಿಧ್ಯತೆಗಳ ರಕ್ಷಣೆಯ ಜೊತೆಗೆ ಸ್ವಚ್ಛತೆಗೆ ವಿಶೇಷವಾದ ಆದ್ಯತೆಯನ್ನು ನೀಡಬೇಕೆಂದು ಕರೆ ನೀಡಿದರು.

ಹಿರಿಯರಾದ ತುಕರಾಮ ಮಾಂಜ್ರೇಕರ ಅವರು ಮಾತನಾಡಿ ಜೋಯಿಡಾ ಮತ್ತು ದಾಂಡೇಲಿಯ ಪ್ರವಾಸೋದ್ಯಮಿಗಳು ಒಂದಾಗಿ ಸಂಘವನ್ನು ಕಟ್ಟಿ ಕ್ರಿಯಾರ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಸ್ವಾಗತಾರ್ಹ ಈ ಸಂಘದ ಮೂಲಕ ಪ್ರವಾಸೋದ್ಯಮ ಕ್ಷೇತ್ರ ಇನ್ನಷ್ಟು ಸದೃಢಗೊಳ್ಳುವಂತಾಗಲೆಂದು ಶುಭ ಹಾರೈಸಿ, ಪ್ರವಾಸಿಗರನ್ನು ಆಕರ್ಷಿಸುವುದರ ಜೊತೆಗೆ ಜೀವವೈವಿಧ್ಯತೆಗಳ ಆರೋಗ್ಯ ಸಂರಕ್ಷಣೆಯ ದೃಷ್ಟಿಯಿಂದ ಸ್ವಚ್ಚತೆಗೆ ಹೆಚ್ಚಿನ ಆಧ್ಯತೆ ನೀಡಬೇಕೆಂದರು.

ಈ ಸಂದರ್ಭದಲ್ಲಿ ದಾಂಡೇಲಿ-ಜೋಯಿಡಾ ತಾಲೂಕು ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲಕರ ಅಸೋಶಿಯೇಶನ್ ಪದಾಧಿಕಾರಿಗಳು ಹಾಗೂ ಸದಸ್ಯರುಗಳಾದ ಇಮಾಮ್ ಸರ್ವರ್, ಉಸ್ಮಾನ್ ವಹಾಬ್ ಶೇಖ, ರಾಹುಲ್ ಬಾವಾಜಿ, ರಾಘವೇಂದ್ರ ಶೆಟ್ಟಿ, ನರಸಿಂಹ ರಾಠಿ, ಸುನೀಲ ಪಡವಳಕರ, ಕೇಶವ ಧುರೆ,  ಭರತ್, ಸ್ವರೂಪ್, ರವಿಕುಮಾರ್.ಜಿ.ನಾಯಕ, ಕರೀಂ ಖತೀಬ್,  ಅಜರುದ್ದೀನ್ ಶೇಖ್, ರಿಜ್ವಾನ್ ಶೇಖ್, ವಿಜಯ್ ಗವಸ, ಸ್ವಪ್ನಿಲ್ ಗವಸ, ರಘು ಗವಸ, ಅಲ್ತಾಫ್ ಬಸೀರಕಟ್ಟಿ, ಉಮೇಶ ಧಾರವಾಡಕರ, ಸುಭಾಷ್ ಮಾಂಜ್ರೇಕರ, ಶಿವಕುಮಾರ್ ಮಾಂಜ್ರೇಕರ, ಸೂರಜ್ ಚನ್ನಪ್ಪಗೌಡರ, ಸೂರಜ್ ಹಿರೇಗೌಡರ, ಅತುಲ್ ಮಾಡ್ದೋಳ್ಕರ, ಸುರೇಶ ದಂಡಗಲ್, ರಾಜೇಶ ವೆರ್ಣೇಕರ, ಕುಲದೀಪ್ ರಜಪೂತ್, ಗಣೇಶ ಶೇಟ್, ಸುನೀಲ ಕಮ್ಮಾರ್ ಮೊದಲಾದವರು ಉಪಸ್ಥಿತರಿದ್ದರು. ಕೊನೆಯಲ್ಲಿ ಇಮಾಮ್ ಸರ್ವರ್ ವಂದಿಸಿದರು.

ಟಾಪ್ ನ್ಯೂಸ್

1-a-rohit-bg

Test series defeat; ನಾನು ಯಾರ ಸಾಮರ್ಥ್ಯವನ್ನೂ ಅನುಮಾನಿಸುವುದಿಲ್ಲ: ರೋಹಿತ್ ಶರ್ಮ

Adulltrate-Milk

Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

ಮದುವೆ,ಪಾರ್ಟಿಗಳ ಡ್ಯಾನ್ಸ್ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

B’town: ಮದುವೆ, ಪಾರ್ಟಿಗಳ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

1-JMM

Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Belekeri Port Scam: ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

BJP 2

Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Raju Talikote: ಗುಬ್ಬಿ ಗೂಡು ಕಟ್ಟುವಂತೆ ರಂಗಾಯಣ ಕಟ್ಟುವೆವು

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿUttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

3

Dandeli: ಸಮರ್ಪಕ ಬೀದಿ ದೀಪ ನಿರ್ವಹಣೆಗೆ ಆಗ್ರಹಿಸಿ ಬಿಜೆಪಿ ನಗರಸಭಾ ಸದಸ್ಯರಿಂದ ಪ್ರತಿಭಟನೆ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Karkala: ಸಿಸಿ ಕೆಮರಾ ಕಳವು

Karkala: ಸಿಸಿ ಕೆಮರಾ ಕಳವು

1

PAK vs ENG: 2021ರ ಬಳಿಕ ತವರಲ್ಲಿ ಟೆಸ್ಟ್‌ ಸರಣಿ ಗೆದ್ದ ಪಾಕ್‌!

1-a-rohit-bg

Test series defeat; ನಾನು ಯಾರ ಸಾಮರ್ಥ್ಯವನ್ನೂ ಅನುಮಾನಿಸುವುದಿಲ್ಲ: ರೋಹಿತ್ ಶರ್ಮ

Adulltrate-Milk

Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

ಮದುವೆ,ಪಾರ್ಟಿಗಳ ಡ್ಯಾನ್ಸ್ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

B’town: ಮದುವೆ, ಪಾರ್ಟಿಗಳ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.