ಸಿಎಂ ನೈತಿಕ ಹೊಣೆ ಹೊತ್ತು ಸದ್ಯಕ್ಕೆ ರಾಜೀನಾಮೆ ನೀಡಲಿ-ಎನ್‌.ಎಸ್‌.ಹೆಗಡೆ


Team Udayavani, Aug 21, 2024, 6:11 PM IST

ಸಿಎಂ ನೈತಿಕ ಹೊಣೆ ಹೊತ್ತು ಸದ್ಯಕ್ಕೆ ರಾಜೀನಾಮೆ ನೀಡಲಿ-ಎನ್‌.ಎಸ್‌.ಹೆಗಡೆ

ಕಾರವಾರ: ಮುಡಾ ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್‌.ಎಸ್‌.ಹೆಗಡೆ ಒತ್ತಾಯಿಸಿದರು.

ಇಲ್ಲಿನ ಪತ್ರಿಕಾಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಭವಿ. ಅವರ ಮೇಲೆ ಆಪಾದನೆ ಬಂದಿದೆ. ರಾಜ್ಯದಲ್ಲಿ 135 ಸ್ಥಾನ ಪಡೆದಿರುವ ಕಾಂಗ್ರೆಸ್‌ ಒಳ್ಳೆಯ ಆಡಳಿತ ನೀಡಲಿ. ಆದರೆ ಸದ್ಯಕ್ಕೆ ಮುಖ್ಯಮಂತ್ರಿ ರಾಜೀನಾಮೆ ಕೊಡಲಿ. ಆರೋಪದಿಂದ ಮುಕ್ತರಾದ ನಂತರ ಮತ್ತೆ ಆಡಳಿತ ನಡೆಸಲಿ ಎಂದರು.

ಕಾಂಗ್ರೆಸ್‌ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡಿದ್ದು ಸರಿಯಲ್ಲ. ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿಯೇ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್‌ ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ವಿರುದ್ಧವೇ ಪ್ರತಿಭಟನೆ ಮಾಡಿದ್ದು ಅಕ್ಷಮ್ಯ ಅಪರಾಧ. ಸಿಎಂ ವಿರುದ್ಧ ಆರೋಪ ಕೇಳಿಬಂದಿದೆ. ಅದನ್ನು ಅವರು ಎದುರಿಸಬೇಕು. ವಿರೋಧ ಪಕ್ಷದ ಯಾವ ಪ್ರಶ್ನೆಗೂ ಉತ್ತರಿಸದೇ
ಸಿದ್ದರಾಮಯ್ಯ ಫಲಾಯನ ಮಾಡಬಾರದು ಎಂದರು.

ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ ಸದಾನಂದ ಭಟ್‌ ಮಾತನಾಡಿ ಸಿದ್ದರಾಮಯ್ಯ 14 ಬಜೆಟ್‌ ಮಂಡಿಸಿದವರು. ಅರ್ಥಿಕ ಖಾತೆ ಅವರ ಬಳಿಯೇ ಇದೆ. ಆದರೂ ಅವರಿಗೆ ವಾಲ್ಮೀಕಿ ನಿಗಮದ ಹಗರಣ ಗೊತ್ತಾಗಲಿಲ್ಲ ಎಂಬುದು ಸೋಜಿಗ. ಮುಡಾ ಹಗರಣ ಸಹ ಅವರ ಕೊರಳಿಗೆ ಬಿದ್ದಿದೆ. ಈ ವಿಚಾರದಲ್ಲಿ ರಾಜ್ಯಪಾಲರ ವಿರುದ್ಧ ಸಚಿವ ಸಂಪುಟ ನಿರ್ಣಯ ಮಾಡಿದ್ದು ಸರಿಯಲ್ಲ. ಇದು
ಸಂವಿಧಾನಕ್ಕೆ ತೋರಿದ ಅಗೌರವ ಎಂದರು.

ಸಿಎಂ ಸಿದ್ದರಾಮಯ್ಯ ರಾಮಕೃಷ್ಣ ಹೆಗಡೆ ಅವರ ಗರಡಿಯಲ್ಲಿ ಬೆಳೆದವರು. ಹೆಗಡೆಯವರ ರಾಜಕೀಯ ಮೌಲ್ಯ
ಅನುಸರಿಸಬೇಕು. ಆರೋಪ ಕೇಳಿಬಂದಾದ ರಾಜೀನಾಮೆ ನೀಡಿದ ಅನೇಕ ಉದಹಾರಣೆಗಳಿವೆ. ಹಾಗೆಯೇ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ಅಪರಾಧ ಸಾಬೀತಾಗದಿದ್ದರೆ ಮತ್ತೆ ಅಧಿಕಾರಕ್ಕೆ ಬರಲಿ. ತಾವು ಇಲ್ಲದೆ ಇದ್ದರೆ ಕಾಂಗ್ರೆಸ್‌ ಇರಲ್ಲ ಎಂಬುದನ್ನು ಬಿಂಬಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪ್ರಕರಣ ಬಳಸಿಕೊಂಡರು. ನಾವು ರಾಜೀನಾಮೆ ಕೇಳಿದರೆ, ಇಡೀ
ಪ್ರಕರಣವನ್ನು ಮತ್ತೂಂದೆಡೆಗೆ ತಿರುಗಿಸಿದರು ಎಂದು ಆರೋಪಿಸಿದರು.

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ನ ಸಚಿವ ಕೃಷ್ಣ ಭೈರೇಗೌಡ, ಜಮೀರ್‌ ಅಹಮ್ಮದ್‌ ಖಾನ್‌, ವಿಧಾನ ಪರಿಷತ್‌ ಸದಸ್ಯ ಐವನ್‌
ಡಿಸೋಜಾ ಅವರು ಮಾತನಾಡಿದ್ದು ಅಕ್ಷಮ್ಯ. ಇವರಿಗೆಲ್ಲ ರಾಜ್ಯಪಾಲ ಹುದ್ದೆಯ ಮಹತ್ವವೇ ತಿಳಿದಿಲ್ಲ ಎಂಬುದು ಅವರ ಹೇಳಿಕೆಗಳಿಂದ ಸಾಬೀತಾಗಿದೆ ಎಂದರು. ಜಗದೀಶ್‌ ನಾಯಕ, ಸುಭಾಷ್‌ ಗುನಗಿ, ಕಿಶನ್‌‌, ಬಿಜೆಪಿ ಪದಾಧಿಕಾರಿಗಳು, ಮುಂತಾದವರು ಉಪಸ್ಥಿತರಿದ್ದರು.

ಹತ್ತು ದಿನದ ನಂತರವೂ ಸಿಎಂ ಮಾತಿಗೆ ಬದ್ಧರಾಗಿರಲಿ
ಬಿಜೆಪಿ ಆರೋಪ ಮಾಡಿದೆ. ಅದಕ್ಕೆ ರಾಜ್ಯಪಾಲರು ತನಿಖೆಗೆ ಅನುಮತಿ ಕೊಟ್ಟಿದ್ದಾರೆ. ಪ್ರಕರಣ ಹೈಕೋರ್ಟ್‌ ನಲ್ಲಿದೆ. ಹತ್ತು ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಿಲೀಫ್‌ ಸಿಕ್ಕಿದೆ. ಈಗ ಸಿದ್ದರಾಮಯ್ಯ ಸತ್ಯಮೇವ ಜಯತೆ ಎಂದಿದ್ದಾರೆ. ಹತ್ತು ದಿನಗಳ ನಂತರ ಬರುವ ತೀರ್ಮಾನವನ್ನೂ ಅವರು ಒಪ್ಪಿಕೊಳ್ಳಬೇಕು. ಸತ್ಯಮೇವ ಜಯತೆ ಎಂಬ ಮಾತಿಗೆ ಬದ್ಧರಾಗಿರಬೇಕು ಎಂದು ಬಿಜೆಪಿ ವಕ್ತಾರ ಸದಾನಂದ ಭಟ್‌ ಹೇಳಿದರು.

ಟಾಪ್ ನ್ಯೂಸ್

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola-School

Ankola: ಸಿಸಿ ಕೆಮರಾ ನಿಷ್ಕ್ರಿಯಗೊಳಿಸಿ ಶಿಕ್ಷಣ ಸಂಸ್ಥೆಯಿಂದ ಲಕ್ಷಾಂತರ ರೂ. ದೋಚಿದ ಕಳ್ಳರು!

Nagamangala Case; ಹಿಂದೂಗಳ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ: ಹರಿಪ್ರಕಾಶ ಕೋಣೆಮನೆ

Sirsi: ಹಕ್ಕು ಪ್ರಾಪ್ತವಾಗುವವರೆಗೂ, ಹೋರಾಟದ ಘರ್ಜನೆ ನಿಲ್ಲಿಸದಿರಿ; ಕಾಗೋಡ ತಿಮ್ಮಪ್ಪ

Sirsi: ಹಕ್ಕು ಪ್ರಾಪ್ತವಾಗುವವರೆಗೂ, ಹೋರಾಟದ ಘರ್ಜನೆ ನಿಲ್ಲಿಸದಿರಿ; ಕಾಗೋಡ ತಿಮ್ಮಪ್ಪ

Sirsi ಟಿಆರ್‌ಸಿಗೆ ರಾಜ್ಯಮಟ್ಟದ ಪ್ರಶಸ್ತಿ

Sirsi ಟಿಆರ್‌ಸಿಗೆ ರಾಜ್ಯಮಟ್ಟದ ಪ್ರಶಸ್ತಿ

Eco Park: ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿರುವ ದಾಂಡೇಲಿಯ ದಂಡಕಾರಣ್ಯ ಇಕೋ ಪಾರ್ಕ್

Eco Park: ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿರುವ ದಾಂಡೇಲಿಯ ದಂಡಕಾರಣ್ಯ ಇಕೋ ಪಾರ್ಕ್

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.