ಪಶು ಸಂಗೋಪನಾ ಇಲಾಖೆಯಲ್ಲಿ ಭ್ರಷ್ಟಾಚಾರ


Team Udayavani, Sep 13, 2019, 11:41 AM IST

uk-tdy-2

ಹಳಿಯಾಳ: ತಾಪಂ ಕೆಡಿಪಿ ಸಭೆಯಲ್ಲಿ ಶಾಸಕ ಆರ್‌.ವಿ.ದೇಶಪಾಂಡೆ ಇತರರು ಪಾಲ್ಗೊಂಡಿದ್ದರು.

ಹಳಿಯಾಳ: ಪಶು ಸಂಗೋಪನಾ ಹಾಗೂ ಪಶು ವೈದ್ಯ ಇಲಾಖೆಯಲ್ಲಿ ದುಡ್ಡು ನೀಡದೆ ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ಸಾಕಷ್ಟು ದೂರು ಗಳು ಬರುತ್ತಿವೆ ಎಂದು ಶಾಸಕ ಆರ್‌.ವಿ. ದೇಶಪಾಂಡೆ ಆಕ್ರೋಶ ವ್ಯಕ್ತಪಡಿಸಿದರು.

ಮಿನಿ ವಿಧಾನಸೌಧದ ಸಭಾಭವನದಲ್ಲಿ ನಡೆದ ತಾಪಂ ತ್ತೈಮಾಸಿಕ ಕೆಡಿಸಿ ಸಭೆಯಲ್ಲಿ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಪಶು ಸಂಗೋಪನಾ ಇಲಾಖೆ ಅಧಿಕಾರಿ ಡಾ| ನದಾಫ್‌ ಇಲಾಖೆಯ ಪ್ರಗತಿ ಹೇಳುತ್ತಿದ್ದಾಗ ಮಧ್ಯ ಪ್ರವೇಶಿಸಿದ ಶಾಸಕರು ರೈತರಿಂದ ಬರುತ್ತಿರುವ ದೂರುಗಳ ಕುರಿತು ಹೇಳಿದರು. ಅಲ್ಲದೇ ಈ ಕುರಿತು ಸಭೆಯಲ್ಲಿದ್ದ ಎಸಿ ಅಭಿಜಿನ್‌ಗೆ ತನಿಖೆ ನಡೆಸುವಂತೆ ಸೂಚಿಸಿದರು. ಭ್ರಷ್ಟಾಚಾರ ಕಂಡು ಬಂದರೇ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಿದರು.

ತಾಲೂಕಿನಲ್ಲಿ ಸಂಭವಿಸಿರುವ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳು, ಬೆಳೆಗಳ ಕುರಿತು ಸರಿಯಾದ ಸಮೀಕ್ಷೆ ಆಗಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಒಮ್ಮೆ ಸರ್ಕಾಕ್ಕೆ ವರದಿ ಹೋದ ಬಳಿಕ ಏನೂ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಮಾಧಾನದಿಂದ ಜವಾಬ್ದಾರಿಯುತವಾಗಿ ಹಾಗೂ ಪಾರದರ್ಶಕವಾಗಿ ಸಮಗ್ರ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ. ಹೊರತು ತರಾತುರಿಯಲ್ಲಿ ಬೇಡ ಎಂದರು.

ಮಳೆ, ನೆರೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಕನಿಷ್ಠ 25 ಸಾವಿರ ರೂ. ಪರಿಹಾರ ಧನ ನೀಡುವ ರಾಜ್ಯ ಸರ್ಕಾರದ ನೂತನ ಆದೇಶವನ್ನು ಸ್ವಾಗತಿಸುವುದಾಗಿ ಹೇಳಿದ ಅವರು, ಈ ಆದೇಶ ತಕ್ಷಣ ಜಾರಿಗೆ ಬರಬೇಕು. ಈಗಾಗಲೇ ತಡವಾಗಿರುವ ಕಾರಣ ವಿಳಂಬವಾಗದಂತೆ ಅರ್ಹರಿಗೆ ಶೀಘ್ರವೇ ಪರಿಹಾರದ ಮೊತ್ತ ಸಿಗುವಂತಾಗಬೇಕು. ಬಾಕಿ ಉಳಿದ ಮೊತ್ತವನ್ನು ಅವರ ಖಾತೆಗಳಿಗೆ ಜಮಾ ಮಾಡಲು ಕ್ರಮ ಕೈಗೊಳ್ಳುವಂತೆ ಎಸಿ ಅಭಿಜಿನ್‌ಗೆ ಸೂಚಿಸಿದರು.

ಕೆಸರೊಳ್ಳಿ ನಾಕಾ ಪ್ರದೇಶದ ನಿರಾಶ್ರಿತರಿಗೆ ಒಂದು ವಾರದ ಒಳಗಾಗಿ ಕೆಸರೊಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಜಾಗ ಗುರುತಿಸಿ ಸೂರು ಒದಗಿಸುವ ಕಾರ್ಯವಾಗಬೇಕೆಂದು ತಾಲೂಕಾಡಳಿತಕ್ಕೆ ಸೂಚಿಸಿದ ದೇಶಪಾಂಡೆ ಅಧಿಕಾರಿಗಳು ತಮ್ಮ ಬಳಿ ಆಗದ ಕೆಲಸಗಳ ಕುರಿತು ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ವಿಪ ಸದಸ್ಯ ಘೊಕ್ಲೃಕರ್‌ ಗಮನಕ್ಕೆ ತರಬೇಕು. ಅದನ್ನು ಮಾಡದೇ ಸುಮ್ಮನೆ ಕೂತರೆ ಹೇಗೆ ಎಂದು ಪ್ರಶ್ನಿಸಿದರು.

ಶೀಘ್ರವೇ ಹಾಳಾದ ರಸ್ತೆಗಳ ದುರಸ್ತಿ ಮಾಡುವಂತೆ ಪಿಡಬ್ಲೂಡಿ ಅಧಿಕಾರಿ ಕುಲಕರ್ಣಿಗೆ ಹಾಗೂ ತಹಶೀಲ್ದಾರ್‌ ಬಳಿ ಇರುವ ವಿಶೇಷ ಅನುದಾನವನ್ನು ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಲು ವಿವಿಧ ಇಲಾಖೆಗಳಿಗೆ ಬಿಡುಗಡೆಗೊಳಿಸುವಂತೆ ತಹಶೀಲ್ದಾರ್‌ ವಿದ್ಯಾಧರ ಗುಳಗುಳಿಗೆ ಸೂಚಿಸಿದರು.

ಜಿಪಂ ಉಪಾದ್ಯಕ್ಷ ಸಂತೋಷ ರೇಣಕೆ, ಸದಸ್ಯರಾದ ಲಕ್ಷ್ಮೀ ಕೊರ್ವೆಕರ, ಮಹೇಶ್ರಿ ಮಿಶ್ಯಾಳಿ, ತಾಪಂ ಅಧ್ಯಕ್ಷೆ ರೀಟಾ ಸಿದ್ದಿ, ಸದಸ್ಯರಾದ ದೇಮಾಣಿ ಶೀರೋಜಿ, ಗಿರಿಶ ಟೋಸುರ, ಜಾವಳೆಕರ, ಪುರಸಭೆ ಸದಸ್ಯರು, ಎಲ್ಲಾ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

suicide (2)

Manipal: ಬಾವಿಗೆ ಬಿದ್ದು ಕಾರ್ಮಿಕ ಸಾ*ವು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.