![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jun 29, 2020, 12:48 PM IST
ಕಾರವಾರ: ಇಲ್ಲಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕೋವಿಡ್- 18 ವಾರ್ಡಿನಿಂದ ಸೋಂಕಿತನೊಬ್ಬ ಪರಾರಿಯಾಗಿ ಆತಂಕ ಸೃಷ್ಟಿಸಿದ್ದ. ಸದ್ಯ ಈತ ಕದ್ರಾ ಬಳಿ ಪತ್ತೆಯಾಗಿದ್ದು, ಜಿಲ್ಲಾಡಳಿತ ನಿಟ್ಟುಸಿರು ಬಿಟ್ಟಿದೆ.
ಧಾರವಾಡ ಮೂಲದ 38 ವರ್ಷದ ವ್ಯಕ್ತಿ, ಕಳ್ಳತನದ ಆರೋಪ ಪರಿಣಾಮ ಶಿರಸಿಯ ಸಬ್ ಜೈಲಿನಲ್ಲಿ ಇಡಲಾಗಿತ್ತು. ಅವನಿಗೆ ಕೊವಿಡ್- 19 ಸೋಂಕಿನ ಲಕ್ಷಣ ಕಾಣಿಸಿತ್ತು. ಆ ಕಾರಣದಿಂದ ಅವನ ಗಂಟಲು ದ್ರವ ಪರೀಕ್ಷಿಸಿದಾಗ ಕೋವಿಡ್- 19 ಸೋಂಕು ದೃಢಪಟ್ಟಿತ್ತು.
ನಿನ್ನೆ ಶಿರಸಿಯ ಸಬ್ ಜೈಲಿನಿಂದ ಕಾರವಾರದ ಕೋವಿಡ್ ವಾರ್ಡಿಗೆ ದಾಖಲಿಸಲಾಗಿತ್ತು. ಆದರೆ, ಇಂದು ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಸೋಂಕಿತ ವಾರ್ಡ್ ನ ಗಾಜು ಒಡೆದು ಪರಾರಿಯಾಗಿದ್ದ.
ಪರಾರಿಯಾಗುವ ಮುನ್ನ ಈತ ವಾರ್ಡ್ ನಲ್ಲೂ ಎರಡು ಮೊಬೈಲ್ ಕಳವು ಮಾಡಿದ್ದ. ಕೂಡಲೇ ವಿಷಯ ತಿಳಿದ ಪೊಲೀಸರು, ಈತನ ಹುಡುಕಲು ಮುಂದಾದರು. ಕಾರವಾರದ ಕದ್ರಾ ಬಳಿ ಸೋಂಕಿತ ಆರೋಪಿ ಸೆರೆ ಸಿಕ್ಕಿದ್ದು, ಆಸ್ಪತ್ರೆಗೆ ಕರೆತರಲಾಗುತ್ತಿದೆ.
ಉತ್ತರ ಕನ್ನಡ ಪೊಲೀಸರ ಕಾರ್ಯಕ್ಕೆ ನಾಗರಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.