![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jul 14, 2023, 2:08 PM IST
ದಾಂಡೇಲಿ: ಅಂಗಡಿಯ ಮುಂಭಾಗದಲ್ಲಿ ಸಾರ್ವಜನಿಕರಿಗೆ ಅನಧಿಕೃತವಾಗಿ ಮದ್ಯ ಕುಡಿಯಲು ಅನುವು ಮಾಡಿಕೊಟ್ಟ ಸಂದರ್ಭದಲ್ಲಿ ದಾಂಡೇಲಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ, ಅನಧಿಕೃತವಾಗಿ ಮಾರಲಿಟ್ಟಿದ್ದ ಮದ್ಯವನ್ನು ವಶಪಡಿಸಿಕೊಂಡಿರುವ ಘಟನೆ ನಗರದ ಹಳಿಯಾಳ ರಸ್ತೆಯ ಮೂರು ನಂ ಗೇಟ್ ಹತ್ತಿರ ನಡೆದಿದೆ.
ಹಳಿಯಾಳ ರಸ್ತೆಯ ಮೂರು ನಂ ಗೇಟ್ ಹತ್ತಿರದ ಅಂಗಡಿಯ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಂಗಡಿಯಾತ ದೇವರಾಜ ಎಂಬಾತನು ಸಾರ್ವಜನಿಕರಿಗೆ ಅನಧಿಕೃತವಾಗಿ ಸರಾಯಿ ಕುಡಿಯಲು ಅವಕಾಶ ಮಾಡಿಕೊಟ್ಟ ಸಂದರ್ಭದಲ್ಲಿ ದಾಂಡೇಲಿ ನಗರ ಠಾಣೆಯ ಪಿಎಸ್ಐ ಐ.ಆರ್.ಗಡ್ಡೇಕರ್ ಅವರ ನೇತೃತ್ವದ ಪೊಲೀಸ್ ತಂಡ ದಾಳಿ ಮಾಡಿ ಸರಾಯಿ ಸೇವನೆ ಮಾಡಲು ಅವಕಾಶ ಮಾಡಿಕೊಟ್ಟ ದೇವರಾಜ ಮತ್ತು ಅನಧಿಕೃತವಾಗಿ ಅಲ್ಲಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಎಂಬಪ್ಪೆ ಬಗ್ಗೆ ಫ್ರಾನ್ಸ್ ಜನರಿಗಿಂತ ಭಾರತೀಯರಿಗೆ ಹೆಚ್ಚು ಗೊತ್ತು: ಪ್ಯಾರಿಸ್ ನಲ್ಲಿ ಮೋದಿ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.