ದಾಂಡೇಲಿ: ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅತಿಕ್ರಮಣ-ತೆರವುಗೊಳಿಸದ ನಗರ ಸಭೆ


Team Udayavani, Oct 19, 2021, 7:35 PM IST

ದಾಂಡೇಲಿ: ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅತಿಕ್ರಮಣ-ತೆರವುಗೊಳಿಸದ ನಗರ ಸಭೆ

ದಾಂಡೇಲಿ: ಅತಿಕ್ರಮಣ ವಿಚಾರದಲ್ಲಿ ರಾಜ್ಯದಲ್ಲೆ ಐತಿಹಾಸಿಕ ದಾಖಲೆಯತ್ತ ದಾಂಡೇಲಿ ನಗರ ಮುನ್ನುಗ್ಗುತ್ತಿರುವುದು ಸ್ಪಷ್ಟವಾಗುತ್ತಿದೆ. ನಗರದಲ್ಲಿ ಎಗ್ಗಿಲ್ಲದೆ ನಡೆಯುವ ಅತಿಕ್ರಮಣಗಳಿಗೆ ಕಡಿವಾಣ ಹಾಕುವ ನಗರಾಡಳಿತದ ದಿವ್ಯ ಮೌನ ಹತ್ತು ಹಲವು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ.

ರಾಜ್ಯದ ಮುತ್ಸದ್ದಿ ನಾಯಕರಾದ ಆರ್.ವಿ.ದೇಶಪಾಂಡೆಯವರ ಕ್ಷೇತ್ರದಲ್ಲಿ ಅವರದ್ದೇ ಪಕ್ಷ ಆಡಳಿತವಿರುವ ದಾಂಡೇಲಿ ನಗರ ಸಭೆಯ ವ್ಯಾಪ್ತಿಯಲ್ಲಿ ಹೇಳುಕೇಳುವವರಿಲ್ಲದೆ ಅತಿಕ್ರಮಣಗಳು ನಿತ್ಯ ನಿರಂತರವಾಗಿ ನಡೆಯುತ್ತಿದೆ. ಅತಿಕ್ರಮಣಗಳ ಬಗ್ಗೆ ಮಾದ್ಯಮಗಳು ವರದಿ ಮಾಡಿದ ಸಂದರ್ಭದಲ್ಲಿ ಕಾಟಚಾರಕ್ಕೆ ಎಂಬಂತೆ ನಗರ ಸಭೆಯ ಅಧಿಕಾರಿಗಳು ದಾಳಿ ಮಾಡುವಂತಹ ನಾಟಕಗಳು ನಗರದಲ್ಲಿ ಮಾಮುಲಿ ಎಂಬಂತಾಗಿದೆ.

ಇನ್ನೂ ನಗರ ಸಭೆಯ ಅಧಿಕಾರಿಗಳು ಅತಿಕ್ರಮಣ ತೆರವಿಗೆ ಹೋಗಬಾರದಂಬ ಕಟ್ಟಪ್ಪಣೆಯನ್ನು ಮಾಡಿರುವುದರಿಂದ ನಗರ ಸಭೆಯ ಅಧಿಕಾರಿಗಳು ಅತಿಕ್ರಮಣ ತೆರವಿಗೆ ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾಹಿತಿ ಹೊರ ಬೀಳುತ್ತಿದೆ. ನಗರದ ಬರ್ಚಿ ರಸ್ತೆಯಲ್ಲಿರುವ ಖಾಲಿ ಜಾಗದಲ್ಲಿ ಪಿಲ್ಲರ್ ಎಬ್ಬಿಸಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ನಗರ ಸಭೆ ಮಾತ್ರ ಗೊತ್ತಿದ್ದು ಗೊತ್ತಿಲ್ಲದಂತೆ ಕಣ್ಣು ಮುಚ್ಚಿ ಕುಳಿತಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ.

ನಗರದಲ್ಲಿ ಅನೇಕ ಕಡೆಗಳಲ್ಲಿ ನಗರ ಸಭೆಯ ಖಾಲಿಯಿರುವ ಜಾಗಗಳನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂಬ ಆರೋಪಗಳು ಬಲವಾಗಿ ಕೇಳಿ ಬರುತ್ತಿದೆ. ಪ್ರತಿಷ್ಟಿತರೊಬ್ಬರು ಕೆರೆ ಇಲ್ಲವೇ ಒಳಚರಂಡಿಯನ್ನೆ ಒತ್ತುವರಿ ಮಾಡಿಕೊಂಡು, ನಕಲಿ ದಾಖಲೆ ಸೃಷ್ಟಿಸಿ ಬೃಹತ್ ಬಂಗಲೆ ನಿರ್ಮಿಸುತ್ತಿದ್ದಾರೆ ಎಂಬ ಮಾತುಗಳು ಚರ್ಚೆಯಲ್ಲಿದೆ. ಇನ್ನೂ ಐ.ಡಿ.ಎಸ್.ಎಂ ಲೇಔಟಿನಲ್ಲಿ ಕಾಯ್ದಿರಿಸಲಾದ ನಿವೇಶನಗಳನ್ನೆ ಅಕ್ರಮವಾಗಿ ನಕಲಿ ದಾಖಲೆ ಸೃಷಿಸಿಕೊಂಡು ಮಾರಾಟ ಮಾಡಿರುವುದು ಜಗಜ್ಜಾಹೀರಾಗಿದ್ದು, ಆ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳಿದ್ದಲ್ಲಿ ಮಾಹಿತಿ ನೀಡಲು ನಗರ ಸಭೆ ವಿಳಂಭ ದೋರಣೆಯನ್ನು ಅನುಸರಿಸುತ್ತಿದೆ ಎಂಬ ದೂರುಗಳು ಬರುತ್ತಿದೆ.

ನಗರ ಸಭೆಯ ವ್ಯಾಪ್ತಿಯಲ್ಲಿ ಬಾರಿ ಪ್ರಮಾಣದಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣ, ಅಕ್ರಮ ಆಶ್ರಯ ಪಟ್ಟಾದ ಮೂಲಕ ಜಾಗದ ಒತ್ತುವರಿ, ಕಾನೂನುಬಾಹಿರವಾಗಿ 99 ವರ್ಷದ ಲೀಸ್ ನಿವೇಶನಗಳನ್ನು ಅಕ್ರಮವಾಗಿ ನೊಂದಣಿ ಮಾಡಿಕೊಂಡಿರುವುದು, ಮೃತ ವ್ಯಕ್ತಿಯ ಕಟ್ಟಡವನ್ನು ಅಕ್ರಮವಾಗಿ ಪರಭಾರೆ ಮಾಡಿರುವುದು ಹೀಗೆ ಇನ್ನೂ ಅನೇಕ ಅನಧಿಕೃತ ಚಟುವಟಿಕೆಗಳು ನಡೆದಿದೆ ಎನ್ನಲಾಗಿದ್ದು, ಈ ಬಗ್ಗೆ ಮೇಲಾಧಿಕಾರಿಗಳು ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬರುತ್ತಿದೆ.

ಅತಿಕ್ರಮಣ ತೆರವಿಗೆ ಮುಂದಾಗಬೇಕು-ಪ್ರವೀಣ ಕೊಠಾರಿ, ಕರವೇ ಮುಖಂಡರು ನಗರದಲ್ಲಿ ನಡೆಯುತ್ತಿರುವ ಅತಿಕ್ರಮಣವನ್ನು ನಗರ ಸಭೆ ನಿಯಂತ್ರಿಸಬೇಕು. ಅತಿಕ್ರಮಣ ತೆರವಿಗೆ ನಗರ ಸಭೆ ಸೂಕ್ತ ರೀತಿಯ ಕ್ರಮವನ್ನು ಕೈಗೊಳ್ಳಬೇಕೆಂದು ಕರವೇ ಮುಖಂಡರಾದ ಪ್ರವೀಣ ಕೊಠಾರಿಯವರು ನಗರ ಸಭೆಯನ್ನು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.