![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Oct 21, 2021, 4:46 PM IST
ಅಂಕೋಲಾ: ಲಾರಿಯೊಂದರಲ್ಲಿ ಅಕ್ರಮ ಹಾಗೂ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 17 ಕೋಣಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಿದ ಘಟನೆ ತಾಲೂಕಿನ ಕೋಡಸಣಿ ಬಳಿ ನಡೆದಿದೆ.
ಲಾರಿಯಲ್ಲಿ 2.25 ಲಕ್ಷ ಮೌಲ್ಯದ 17 ಕೋಣಗಳನ್ನು ಅಹಾರ ನೀರಿಲ್ಲದೆ ಹಗ್ಗದಿಂದ ಕಟ್ಟಿ ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಪಿಐ ಸಂತೋಷ ಶೆಟ್ಟಿ ನೇತೃತ್ವದ ತಂಡ ದಾಳಿ ನಡೆಸಿದರು.
ದಕ್ಕಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಹೈದರ ರೆಮಲನ್ ಬ್ಯಾರಿ, ಶಿರಗುಂಜಿಯ ಬೊಮ್ಮಯ್ಯ ಬೀರಣ್ಣ ನಾಯಕ ಹಾಸನ ಹಳೇಕೊಪ್ಪಲದ ಮಂಜೇಗೌಡ ಜವರೇಗೌಡ, ಕೇರಳದ ಕಾಸರಕೋಡಿನ ಅಬ್ದುಲ ರಿಯಾಜ ತಂದೆ ಮಹಮ್ಮದ್ ಇವರನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಕೇರಳದ ಕಾಸರಕೋಡಿನ ಮುತ್ತಾತೋಡಿಯ ಅಬೂಬಕರ ಅಬ್ದುಲ ಹಮೀದ ತಲೆಮರೆಸಿಕೊಂಡಿದ್ದಾನೆ.
ಇದನ್ನೂ ಓದಿ:2020-21ನೇ ಸಾಲಿನ ಐಟಿಆರ್ ಫೈಲಿಂಗ್: ಈ 9 ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
ಪ್ರಕರಣದಲ್ಲಿ ದನಗಳನ್ನು ಸಾಗಿಸುತ್ತಿದ್ದ ಲಾರಿ ನಂ.ಕೆಎ01 ಎಎಲ್ 2779, ಹಾಗೂ ಲಾರಿಯನ್ನು ಎಸ್ಕಾರ್ಟ್ ಮಾಡುತ್ತಿದ್ದ ಇನೋವಾ ಕಾರು ನಂ.ಕೆಎಲ್.60 ಬಿ4004 ಮತ್ತು ಮೂರು ಮೊಬೈಲ್ 30000 ರೂ. ನಗದನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಕಾರ್ಯಾಚರಣೆ ನಡೆಸಿದ ಸಿಪಿಐ ಸಂತೋಷ ಶೆಟ್ಟಿ ನೇತೃತ್ವದ ತಂಡದಲ್ಲಿ ಪಿ.ಎಸ್.ಐ ಪ್ರೇಮನಗೌಡ ಪಾಟೀಲ, ಪಿ.ಎಸ್.ಐ ಪ್ರವೀಣಕುಮಾರ ಸಿಬ್ಬಂದಿ ಆಸಿಫ ಕುಂಕೂರ, ಭಗವಾನ ಗಾಂವಕರ, ಮಂಜುನಾಥ ಲಕ್ಮಾಪುರ, ಸತೀಶ ಪಾಲ್ಗೊಂಡಿದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.