ದ್ವಿಚಕ್ರ ವಾಹನಗಳ ಪೆಟ್ರೋಲ್ ಕಳ್ಳತನ: ಅಳಲು ತೋಡಿಕೊಳ್ಳುತ್ತಿರುವ ಸ್ಥಳೀಯರು
Team Udayavani, Oct 24, 2021, 7:16 PM IST
ದಾಂಡೇಲಿ: ನಗರದ ಅಲ್ಲಲ್ಲಿ ಪ್ರತಿನಿತ್ಯ ನಿಲ್ಲಿಸಿಟ್ಟಿದ್ದ ದ್ವಿಚಕ್ರ ವಾಹನಗಳ ಪೆಟ್ರೋಲ್ ಕದಿಯುವ ಜಾಲವೊಂದಿದ್ದು, ಈ ಜಾಲದ ಕಳ್ಳತನ ಕೃತ್ಯದಿಂದ ನಗರದ ಜನತೆ ಬಸವಳಿದಿದ್ದಾರೆ.
ಅದೇ ರೀತಿ ಭಾನುವಾರ ನಸುಕಿನ ವೇಳೆಯಲ್ಲಿ ನಗರದ 14ನೇ ಬ್ಲಾಕ್ ಪ್ರದೇಶದ ಶೇಖರ್ ಆಸ್ಪತ್ರೆಯ ಪ್ರದೇಶ ವ್ಯಾಪ್ತಿಯಲ್ಲಿ ನಿಲ್ಲಿಸಿಟ್ಟಿದ್ದ ನಾಲ್ಕು ದ್ವಿಚಕ್ರ ವಾಹನಗಳ ಪೆಟ್ರೋಲನ್ನು ಕದ್ದಿರುವ ಘಟನೆ ನಡೆದಿದೆ.
ಬಹುತೇಕ ಹೆಚ್ಚಿನ ದಿನಗಳಲ್ಲಿ ಇಲ್ಲಿ ಪೆಟ್ರೋಲ್ ಕಳ್ಳತನವಾಗುತ್ತಿದ್ದು, ಇಂದು ನಸುಕಿನ ವೇಳೆಯಲ್ಲಿ ಬಹುತೇಕ ದ್ವಿಚಕ್ರ ವಾಹನಗಳ ಪೆಟ್ರೋಲ್ ಕಳ್ಳತನವಾಗಿರುವುದರ ಬಗ್ಗೆ ಸ್ಥಳೀಯರು ನಗರ ಠಾಣೆಗೆ ಮಾಹಿತಿಯನ್ನು ನೀಡಿದ್ದಾರೆ.
ತಕ್ಷಣವೆ ಸ್ಥಳಕ್ಕಾಗಮಿಸಿದ ನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಹತ್ತಿರದಲ್ಲಿದ್ದ ಸಿಸಿ ಕ್ಯಾಮೆರದ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಕಳ್ಳರು ಪೆಟ್ರೋಲ್ ಕದಿಯಲು ಬರುತ್ತಿರುವುದು ಸೆರೆಯಾಗಿದೆ. ಒಟ್ಟಿನಲ್ಲಿ ಪೆಟ್ರೋಲ್ ಕದಿಯುವ ಪುಂಡ ಪೊಕೋರಿಗಳನ್ನು ಶೀಘ್ರವಾಗಿ ಹಿಡಿದು ಪೊಲೀಸ್ ರುಚಿ ತೋರಿಸಬೇಕೆಂಬ ಮನವಿಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ
ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.