Dandeli: ದ್ವಿಚಕ್ರ ವಾಹನ ಸ್ಕಿಡ್ : ಸವಾರನಿಗೆ ಗಾಯ
Team Udayavani, Jul 5, 2023, 11:04 AM IST
ದಾಂಡೇಲಿ :ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದು, ಸವಾರರೋರ್ವರು ಗಾಯಗೊಂಡ ಘಟನೆ ತಾಲ್ಲೂಕಿನ ದಾಂಡೇಲಿ ಹಳಿಯಾಳ ಹೆದ್ದಾರಿ ಕರ್ಕಾ ಸಮೀಪ ನಡೆದಿದೆ.
ದಾಂಡೇಲಿ ನಗರದ ಬಂಗೂರನಗರದಲ್ಲಿರುವ ಸ್ಟಾಪ್ ಕ್ವಾಟ್ರಸ್ ನಿವಾಸಿಯಾಗಿದ್ದು, ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರಾಗಿರುವ ಶಂಕರ್ ಪರಶುರಾಮ ಬಂಡಿವಡ್ಡರ ಎಂಬವರೇ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಇವರು ಹಳಿಯಾಳ ಕಡೆಯಿಂದ ದಾಂಡೇಲಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಕರ್ಕಾ ಹತ್ತಿರ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿದ್ದು, ತಲೆಗೆ, ಕಾಲಿಗೆ ಮತ್ತು ಕೈಗೆ ಗಾಯ ಮಾಡಿಕೊಂಡಿದ್ದಾರೆ.
ಬಿದ್ದು ಒದ್ದಾಡುತ್ತಿದ್ದ ಇವರನ್ನು ಇದೇ ರಸ್ತೆಯಲ್ಲಿ ಬರುತ್ತಿದ್ದವರು ತಕ್ಷಣವೆ 108 ಆಂಬುಲೆನ್ಸಿಗೆ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿ, ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ, ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಹಾಗೂ ಸಾರ್ವಜನಿಕ ಆಸ್ಪತ್ರೆಗೆ ದಾಂಡೇಲಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಮಾಹಿತಿಯನ್ನು ಪಡೆದುಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಆಲೂರು-ಕೆರವಾಡದ ಮಧ್ಯೆ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Dandeli: ಬಾಂಬೆಚಾಳದಲ್ಲಿ ಬಾಲಕನ ಮೇಲೆ ಬೀದಿನಾಯಿಗಳಿಂದ ದಾಳಿ; ಗಾಯ
Dandeli: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಸವಾರ ಗಂಭೀರ
Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ
Yellapur: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಲಾರಿ
MUST WATCH
ಹೊಸ ಸೇರ್ಪಡೆ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ
Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ
Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ
Baba Siddiqui Case: ಸಲ್ಮಾನ್ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್ ಬಲೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.