ಡೀಮ್ಡ್ ಅರಣ್ಯ ಅಭಿವೃದ್ಧಿ ಯೋಜನೆಗೆ ಆಗ್ರಹ

 ವೃಕ್ಷಲಕ್ಷ ಆಂದೋಲನ ತಂಡದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ

Team Udayavani, Jul 24, 2022, 5:42 PM IST

18

ಶಿರಸಿ: ವೃಕ್ಷಲಕ್ಷ ಆಂದೋಲನ ತಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಡೀಮ್ಡ್ ಅರಣ್ಯ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲು ಮನವಿ ಮಾಡಿತು.

ಅರಣ್ಯ ಸಚಿವ ಉಮೇಶ ಕತ್ತಿ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಅರಣ್ಯ ಪರಿಸರ ಇಲಾಖೆ ಅಪರ ಪ್ರಧಾನ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ಕೇಂದ್ರ ಅರಣ್ಯ ಮಂತ್ರಾಲಯದ ದಕ್ಷಿಣ ಭಾರತ ಕಚೇರಿ ಮುಖ್ಯಸ್ಥ ಡಾ| ಕೆ.ಪಿ. ಸಿಂಗ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ ಎಂದು ಜೀವ ವೈವಿಧ್ಯ ಮಂಡಳಿ ನಿಕಟಪೂರ್ವ ಅಧ್ಯಕ್ಷ ಅನಂತ ಅಶೀಸರ ತಿಳಿಸಿದ್ದಾರೆ.

ಈಗ ರಾಜ್ಯ ಸರ್ಕಾರ ಘೋಷಣೆ ಮಾಡಿರುವ 330186 ಹೆಕ್ಟೇರ್‌ ಡೀಮ್ಡ್ ಅರಣ್ಯ ಸಂರಕ್ಷಣೆ ಮಾಡಲು ತಳಮಟ್ಟದಲ್ಲಿ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಬೇಕು. ಕಂದಾಯ ಇಲಾಖೆ ಸಹಕಾರ ಪಡೆದು ಡೀಮ್ಡ್ ಅರಣ್ಯ ಗುರುತಿಸಬೇಕು. ಬೇಲಿ, ಕಂದಕ ನಿರ್ಮಿಸಬೇಕು. ಮಲೆನಾಡು, ದಟ್ಟ ಕಾನುಗಳನ್ನು ರಕ್ಷಿಸಲು ವನೀಕರಣ ಕೈಗೊಳ್ಳಲು ಯೋಜನೆ ರೂಪಿಸ ಬೇಕು ಎಂದು ಡಾ| ಟಿ.ವಿ. ರಾಮಚಂದ್ರ, ಡಾ| ಕೇಶವ ಕೊರ್ಸೆ, ಡಾ| ರಾಮಕೃಷ್ಣ, ಪ್ರೊ| ಬಿ.ಎಂ. ಕುಮಾರ ಸ್ವಾಮಿ, ಡಾ| ಪ್ರಕಾಶ ಮೇಸ್ತ, ಡಾ| ಬಾಲಚಂದ್ರ ಸಾಯಿ ಮನೆ, ಕೆ. ವೆಂಕಟೇಶ, ಶ್ರೀಪಾದ ಬಿಚ್ಚುಗುತ್ತಿ ಮುಂತಾದ ಪರಿಸರ, ಅರಣ್ಯ ತಜ್ಞರು ಒತ್ತಾಯಿಸಿದ್ದಾರೆ.

ಈ ಹಿಂದಿನ ತಜ್ಞರ ಸಮಿತಿ ವರದಿಯಲ್ಲಿ 994881 ಹೆಕ್ಟೇರ್‌ ಡೀಮ್ಡ್ ಅರಣ್ಯ ಪ್ರದೇಶ ಎಂದು ಗುರುತಿಸಿತ್ತು. ರಾಜ್ಯ ಸರ್ಕಾರದ ಪುನರ್ರಚಿತ ತಜ್ಞರ ಸಮಿತಿ ಡೀಮ್ಡ್ ಮಾನದಂಡ ಅನ್ವಯಿಸದ 773326 ಹೆಕ್ಟೇರ್‌ಗಳನ್ನು ಕೈ ಬಿಟ್ಟಿತು. ಕೇವಲ 330186 ಹೆಕ್ಟೇರ್‌ ಡೀಮ್ಡ್ ಅರಣ್ಯ ಎಂದು ಈಗ ಘೋಷಿಸಲಾಗಿದೆ.

ಕಳೆದ 20 ವರ್ಷಗಳಲ್ಲಿ ಹಲವು ಬಾರಿ ಪರಿಶೀಲನೆಗೆ ಒಳಗಾಗಿ ಉಳಿದುಕೊಂಡ ಕೇವಲ ಶೇ.33 ಡೀಮ್ಡ್ ಅರಣ್ಯ ಪ್ರದೇಶವನ್ನು ಉಳಿಸಿಕೊಳ್ಳಲೇಬೇಕಾದ ಗುರುತರ ಜವಾಬ್ದಾರಿ ಸರ್ಕಾರದ್ದಿದೆ ಎಂದು ಗಮನ ಸೆಳೆಯಲಾಯಿತು.

ಗ್ರಾಮ ಅರಣ್ಯ ಸಮಿತಿ ರಚನೆಗಳ ಮೂಲಕ ಈ ಅರಣ್ಯ ಅಭಿವೃದ್ಧಿಯಲ್ಲಿ ಗ್ರಾಮ ಜನರ ಸಹಭಾಗಿತ್ವ ಪಡೆಯಬೇಕು. ಸ್ಥಳಿಯ ಪಂಚಾಯತ ಜೀವ ವೈವಿಧ್ಯ ಸಮಿತಿಗಳ ಸಹಕಾರ ಪಡೆಯಬೇಕು. ಡೀಮ್ಡ್ ಅರಣ್ಯ ಪ್ರದೇಶಗಳ ಜೀವ ವೈವಿಧ್ಯ ದಾಖಲಾತಿ, ಡೀಮ್ಡ್ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಕೆರೆ -ಹಳ್ಳಗಳು, ಜಲ ಮೂಲಗಳ ರಕ್ಷಣೆ ಹೀಗೆ ಹಲವು ಮುಖಗಳಲ್ಲಿ ಡೀಮ್ಡ್ ಅರಣ್ಯ ಅಭಿವೃದ್ಧಿಗಾಗಿ ಬಹುದೊಡ್ಡ ಯೋಜನೆ ರೂಪಿಸಬೇಕು ಎಂದು ಜನತೆ ಪರವಾಗಿ ಕೂಡ ಮನವಿ ಮಾಡಲಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.