ದ್ವೇಷದಿಂದ ಪಕ್ಕದ ಮನೆಯ ಕೊಟ್ಟಿಗೆಯಲ್ಲಿ ಜಿಂಕೆ ಕೊಂಬು, ಶ್ರೀಗಂಧದ ತುಂಡುಗಳನ್ನಿಟ್ಟ!
ಶಿರಸಿಯಲ್ಲಿ ಇಬ್ಬರನ್ನೂ ಬಂಧಿಸಿದ ಅರಣ್ಯ ಇಲಾಖೆ ಸಿಬ್ಬಂದಿ
Team Udayavani, Jul 21, 2023, 10:06 PM IST
ಶಿರಸಿ: ಜಮೀನಿನ ವ್ಯಾಜ್ಯ ಮತ್ತು ಹಳೆ ದ್ವೇಷದ ಹಿನ್ನೆಲೆಯಲ್ಲಿ ಜಿಂಕೆ ಕೊಂಬು ಮತ್ತು ಶ್ರೀಗಂಧದ ತುಂಡುಗಳನ್ನು ಪಕ್ಕದ ಮನೆಯವನ ಕೊಟ್ಟಿಗೆಯಲ್ಲಿಟ್ಟು ಆತನ ಜೊತೆ ತಾನೂ ಬಂಧಿತನಾದ ಘಟನೆ ಬನವಾಸಿ ಸಮೀಪದ ಮಾಡನಗೇರಿಯಲ್ಲಿ ಶುಕ್ರವಾರ ನಡೆದಿದೆ.
ಇಲ್ಲಿಯ ಗಣಪತಿ ಕನ್ನಾ ಬಡಗಿ ಮನೆಯಲ್ಲಿ ಗಂಧದ ತುಂಡುಗಳು ಇರುವ ಕುರಿತು ಮಾಹಿತಿ ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ 15 ಕೆಜಿಯಷ್ಟು ಶ್ರೀಗಂಧ, ಎರಡು ಜಿಂಕೆ ಕೊಂಬು ಸಿಕ್ಕಿದೆ. ವಿಚಾರಣೆ ನಡೆಸಿದ ಬಳಿಕ ಪಕ್ಕದ ಮನೆಯ ಮಧುಕೇಶ್ವರ ಕೆರಿಯಾ ಮಡಿವಾಳ ಎಂಬವರು ಅತಿಕ್ರಮಣ ಜಾಗ ಮತ್ತು ಕಾಡಿನಿಂದ ಶ್ರೀಗಂಧ ತಂದು ಗಣಪತಿ ಬಡಗಿ ಮನೆ ಕೊಟ್ಟಿಗೆಯಲ್ಲಿ ಇಟ್ಟಿರುವ ಅಂಶ ಬೆಳಕಿಗೆ ಬಂದಿದೆ. ವಿಚಾರಣೆ ಬಳಿಕ ಶ್ರೀಗಂಧ ಕಡಿದ ಜಾಗವೂ ಪತ್ತೆಯಾಗಿದೆ. ಈಗ ಇಬ್ಬರನ್ನೂ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ದಾಳಿಯಲ್ಲಿ ಡಿಎಫ್ ಒ. ಜಿ.ಆರ್ ಅಜ್ಜಯ್ಯ, ವಲಯ ಅರಣ್ಯಾಧಿಕಾರಿ ವರದ ರಂಗನಾಥ ಜಿ. ಹೆಚ್ ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.