![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 15, 2023, 7:41 PM IST
ಕಾರವಾರ: ಶಕ್ತಿ, ಗೃಹ ಲಕ್ಷ್ಮಿ ಸೇರಿದಂತೆ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ. ವಿರೋಧ ಪಕ್ಷದವರು ಇದನ್ನೆಲ್ಲ ಮೆಚ್ಚಬೇಕು ಎಂದು ಹಾಲಿ ಶಾಸಕ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು.
ಕಾರವಾರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಈವರೆಗೂ ಪೂರ್ಣಗೊಂಡಿಲ್ಲ. ಸುರಂಗ ಮಾರ್ಗ ಸಂಚಾರ ಆರಂಭಿಸಿ ಪುನಃ ಸ್ಥಗಿತಗೊಳಿಸುವ ಸ್ಥಿತಿ ಬಂದಿದೆ. ಕೆಲಸವೂ ಸರಿಯಾಗಿಲ್ಲ ಎಂದರು.
ಕೇಂದ್ರ ಸರ್ಕಾರ ಕೈಗೊಂಡ ಯೋಜನೆ ಇದು. ಗುಣಮಟ್ಟದ ರಸ್ತೆ ಆಗಿಲ್ಲ. ಟೋಲ್ ಸಂಗ್ರಹಕ್ಕೆ ಕೆಲಸ ಮುಗಿಯುವ ಮೊದಲೇ ಆರಂಭಿಸಿದ್ದು ಸರಿಯಾದ ಕ್ರಮವಲ್ಲ. ಇದು ಕಾನೂನುಬಾಹೀರ ಕ್ರಮ ಎಂದು ಪರಿಗಣಿಸಬೇಕಾಗುತ್ತದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವೇನೂ ಇಲ್ಲ ಎಂದರು.
ಇದನ್ನೂ ಓದಿ:ಪ್ರತಿಯೊಬ್ಬ ಭಾರತೀಯನು ನಿಮ್ಮನ್ನು ಸ್ನೇಹಿತನಂತೆ ಕಾಣುತ್ತಾನೆ: ಯುಎಇ ಅಧ್ಯಕ್ಷರಿಗೆ ಮೋದಿ
ಟೆಂಡರ್ ಒಡಂಬಡಿಕೆ ಪ್ರಕಾರ ಕೆಲಸ ಮುಗಿಸಬೇಕಿತ್ತು. ಆದರೆ ಒಡಂಬಡಿಕೆ ನಿಯಮ ಮುರಿದ ಕಾರಣ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ದೇಶಪಾಂಡೆ ಆಗ್ರಹಿಸಿದರು.
ಈ ಬಗ್ಗೆ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರವನ್ನೂ ಬರೆಯುತ್ತೇನೆ ಎಂದರು.
ಯಲ್ಲಾಪುರ, ಶಿರಸಿ, ಹಳಿಯಾಳ, ಮುಂಡಗೋಡ, ದಾಂಡೇಲಿ, ಜೊಯಿಡಾದಲ್ಲಿ ಮಳೆ ಕಡಿಮೆ ಇದೆ. ಮಳೆಯಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ಆದ ಹಾನಿಗೆ ಪರಿಹಾರ ತ್ವರಿತವಾಗಿ ನೀಡಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.
ಜೊಯಿಡಾ ಅಣಶಿ ಭಾಗದಲ್ಲಿ ಅಡಿಕೆ ತೋಟ ನಾಶ ಪಡಿಸಲಾಗಿದೆ. ಜಮೀನಿಗೆ ಪರಿಹಾರ ನೀಡದೆ ಹಾಳು ಮಾಡಿದ್ದಾರೆ. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ. ಮರಗಳನ್ನು ಹಾಳು ಮಾಡಬಾರದು ಎಂದರು
ಕಾರವಾರದ ಮುಡಗೇರಿ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಮೂರು ಬಾರಿ ಅಭಿವೃದ್ಧಿಗೆ ಟೆಂಡರ್ ಕರೆದರೂ ಕೆಲಸ ಆರಂಭವಾಗಿಲ್ಲ. ಭೂಸ್ವಾಧೀನಕ್ಕೆ ಸೂಕ್ತ ಪರಿಹಾರ ನೀಡಿರಲಿಲ್ಲ. ಚುನಾವಣೆ ಹೊತ್ತಲ್ಲಿ ಪ್ರಚಾರಕ್ಕೆ ಚೆಕ್ ನೀಡಿದ್ದರು. ಆದರೆ ಈವರೆಗೆ ಪರಿಹಾರ ನೀಡಿಲ್ಲ ಎಂದರು.
ನಿಮ್ಮನ್ನು ಯಾಕೆ ಸಚಿವರನ್ನಾಗಿ ಮಾಡಲಿಲ್ಲ ಎಂಬ ಪ್ರಶ್ನೆಗೆ ಹಾಸ್ಯ ಚಟಾಕಿ ಹಾರಿಸಿದ ಅವರು ನನ್ನ ಮುಂದೆ ಮುಖ್ಯಮಂತ್ರಿ ಮಾಡುವ ಉದ್ದೇಶದಿಂದ ಸಚಿವ ಸ್ಥಾನ ಕೊಟ್ಟಿಲ್ಲ ಎಂದು ನಗುತ್ತಲೇ ಹೇಳಿದರು .
ಕಾಂಗ್ರೆಸ್ ಪ್ರಮುಖರಾದ ರಮಾನಂದ ನಾಯಕ, ಕೆ.ಎಚ್.ಗೌಡ, ಸಮೀರ ನಾಯ್ಕ, ಕೆ.ಶಂಭು ಶೆಟ್ಟಿ, ಪಾಂಡುರಂಗ ಗೌಡ , ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವಕರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.