ದುರ್ಗಪ್ಪ ಗುಡಿಗಾರ ಓರ್ವ ಅಪ್ರತಿಮ ಕಲಾಕಾರ: ಜಿ.ಎಲ್. ಹೆಗಡೆ

ನನಗೆ ದೊಡ್ಡ ಹೆಸರು ತಂದು ಕೊಟ್ಟಿದ್ದರು : ಸುಬ್ರಹ್ಮಣ್ಯ ಧಾರೇಶ್ವರ

Team Udayavani, Apr 9, 2022, 6:33 PM IST

1-dasdsadsa

ಭಟ್ಕಳ: ದುರ್ಗಪ್ಪ ಗುಡಿಗಾರ ಓರ್ವ ಅಪ್ರತಿಮ ಕಲಾಕಾರರಾಗಿದ್ದು, ಅವರೊಂದಿಗಿನ ಒಡನಾಟ ಸದಾ ಹಸಿರಾಗಿದೆ ಎಂದು ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷ ಜಿ.ಎಲ್. ಹೆಗಡೆ ಕುಮಟಾ ಅವರು ಹೇಳಿದರು.

ಅವರು ದುರ್ಗಪ್ಪ ಗುಡಿಗಾರ ಮೆಮಮೋರಿಯಲ್ ಯಕ್ಷಗಾನ ಆರ್ಟ್ ಅಕಾಡೆಮಿ ಚಾರಿಟೇಬಲ್ ಟ್ರಸ್ಟ್ ಹಾಗೂ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವುಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ “ವರ್ಷದ ಹರ್ಷ ಸಮಾರಂಭ” ಹಾಗೂ ಪ್ರೊ. ಎಂ. ಎ. ಹೆಗಡೆ ದಂಡಕಲ್ ಸಂಸ್ಮರಣೆ, ಯಕ್ಷಗಾನ ಪ್ರದರ್ಶನ ಕಾರ್ಯಕ್ರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು.

ದುರ್ಗಪ್ಪ ಗುಡಿಗಾರ ಅವರ ಮದ್ದಳೆಯ ಮೋಡಿಯನ್ನು ವಿವರಿಸಿದ ಅವರು ತಾವೂ ಕೂಡಾ ಅವರೊಂದಿಗೆ ಯಕ್ಷಗಾನ ಅರ್ಥಗಾರಿಕೆಯಲ್ಲಿ ಭಾಗವಹಿಸಿದ್ದ ಅನುಭವಗಳನ್ನು ಹಂಚಿಕೊಂಡರು. ಯಕ್ಷಗಾನ ಕನ್ನಡ ಭಾಷೆಗೆ ಒಂದು ಉತ್ತಮ ಕೊಡುಗೆಯಾಗಿದ್ದು ಯಕ್ಷಗಾನ ಇರುವ ತನಕವೂ ಕೂಡಾ ಕನ್ನಡಕ್ಕೆ ಯಾವುದೇ ತೊಂದರೆಯಾಗದು ಎಂದರು.

ಯಕ್ಷಗಾನದ ಮೇರು ವ್ಯಕ್ತಿ ದುರ್ಗಪ್ಪ ಗುಡಿಗಾರ ಅವರ ಹೆಸರಿನಲ್ಲಿರುವ ಈ ಸಂಸ್ಥೆ ನೂರಾರು ವರ್ಷಗಳ ಕಾಲ ಬಾಳಲಿ ಎಂದು ಹರಸಿದರು. ಭಟ್ಕಳ ಊರು ಐತಿಹಾಸಿಕವಾಗಿ, ಸಾಹಿತ್ಯಿಕವಾಗಿ ಬಹಳ ದೊಡ್ಡ ಹೆಸರಿದ್ದ ಊರಿದು, ಇದನ್ನು ಹಾಳುಗೆಡವಲು ನೋಡಿದರೂ ಸಹ ಇದು ಮತ್ತೆ ಮತ್ತೆ ಎದ್ದು ನಿಂತಿದೆ. ಮುಂದಿನ ದಿನಗಳಲ್ಲಿ ಇದೊಂದು ಯಕ್ಷಗಾನದ ಕೇಂದ್ರವಾಗಲಿ ಎಂದೂ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಹಿರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಮಾತನಾಡಿ ದುರ್ಗಪ್ಪ ಗುಡಿಗಾರರು ಕೇವಲ ಮದ್ದಲೆಯ ಮಾಂತ್ರಿಕ ಮಾತ್ರವಲ್ಲ ಉತ್ತಮ ಭಾಗವತರೂ ಕೂಡಾ ಹೌದು. ಕಾಳಿದಾಸ ಪ್ರಸಂಗದಲ್ಲಿನ ಒಂದು ಪದ್ಯದ ಶೈಲಿಯನ್ನು ತಮಗೆ ತಿಳಿಸಿಕೊಟ್ಟು ಆ ಪ್ರಸಂಗದಲ್ಲಿ ತನಗೆ ದೊಡ್ಡ ಹೆಸರು ತಂದು ಕೊಡುವಂತೆ ಮಾಡಿದ್ದರು ಎಂದು ನೆನಪಿಸಿಕೊಂಡರು.

ಇನ್ನೋರ್ವ ಮುಖ್ಯ ಅತಿಥಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉ.ಕ.ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಮಾತನಾಡಿ ದುರ್ಗಪ್ಪ ಗುಡಿಗಾರ್ ಓರ್ವ ಅಪ್ರತಿಮ ಕಲಾವಿದರಾದರೂ ಕೂಡಾ ಎಂದೂ ಪ್ರಚಾರ ಬಯಸಿದವರಲ್ಲ. ಇಂದಿನ ದಿನಗಳಲ್ಲಿ ಆಗಿದ್ದರೆ ಅವರು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡುವುದಲ್ಲದೇ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗುತ್ತಿದ್ದರು ಎಂದರು.

ಟ್ರಸ್ಟ್ ವತಿಯಿಂದ ಯಕ್ಷಗಾನಕ್ಕಾಗಿಯೇ ತಮ್ಮ ಜೀವನವನ್ನು ಮುಡುಪಾಗಿಟ್ಟ ಯಕ್ಷರಕ್ಷೆಯ ಅಧ್ಯಕ್ಷ ಡಾ. ಐ. ಆರ್. ಭಟ್ಟ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಮಾತನಾಡಿದ ಅವರು ತನ್ನ ಜೀವನದ ಗುರಿಯೇ ಯಕ್ಷಗಾನವನ್ನು ಉಳಿಸುವುದಾಗಿದೆ. ತಮ್ಮ ತಂದೆ ತಾಯಿಯವರೇ ಇದಕ್ಕೆ ಪ್ರೇರಣೆಯಾಗಿದ್ದು ಕೊಪ್ಪದಮಕ್ಕಿ ಭಾಗವತರ ಪ್ರಭಾವ ಕೂಡಾ ತನ್ನ ಯಕ್ಷಪ್ರೇಮಕ್ಕೆ ಕಾರಣ ಎಂದರು.

ಟ್ರಸ್ಟಿನ ಅಧ್ಯಕ್ಷೆ ಶಾರದಾ ದುರ್ಗಪ್ಪ ಗುಡಿಗಾರ ಅವರು ಮಾತನಾಡಿ ಗುಡಿಗಾರರು ಹಾಗೂ ಧಾರೇಶ್ವರರ ಸುದೀರ್ಘ ಜುಗಲ್‍ಬಂದಿಯ ಕುರಿತು ವಿವರಿಸುತ್ತಾ, ತಮ್ಮ ಕುಟುಂಬ ಎದುರಿಸಿದ ಸಂಕಷ್ಟಗಳ ಕುರಿತು ವಿವರಿಸಿದರು. ವೇದಿಕೆಯಲ್ಲಿ ಮಂಜೂಷಾ ಗುಡಿಗಾರ ಉಪಸ್ಥಿತರಿದ್ದರು. ಉಮಾ ಗುಡಿಗಾರ ಪ್ರಾರ್ಥಿಸಿದರು. ಉಪನ್ಯಾಸಕ ಗಣಪತಿ ಕಾಯ್ಕಿಣಿ ಸ್ವಾಗತಿಸಿದರು. ಕೆ.ಬಿ. ಹೆಗಡೆ ಮುರ್ಡೇಶ್ವರ ನಿರ್ವಹಿಸಿ ವಂದಿಸಿದರು. ಎನ್.ಟಿ.ಭಂಡಾರಿ, ಚಂದ್ರಕಾಂತ ಕಿಣಿ, ವೀಣಾ ಸಹಕರಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.