Fishing ಕರಾವಳಿಯಲ್ಲಿ ಮತ್ಸ್ಯಕ್ಷಾಮ: ಸಚಿವ ವೈದ್ಯ ಬಾಗಿನ
Team Udayavani, Sep 8, 2024, 10:45 PM IST
ಭಟ್ಕಳ: ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ, ಮಂಗಳೂರಿನಲ್ಲಿ ಮತ್ಸ್ಯಕ್ಷಾಮದಿಂದ ಮೀನುಗಾರಿಕಾ ಉದ್ಯಮದ ಮೇಲೆ ದುಷ್ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಮೀನುಗಾರಿಕೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಭಟ್ಕಳ ತಾಲೂಕಿನ ಶಕ್ತಿ ಕ್ಷೇತ್ರವಾದ ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಸ್ವತಃ ಬೋಟು ಚಲಾವಣೆ ಮಾಡಿಕೊಂಡು ಸಮುದ್ರಕ್ಕೆ ತೆರಳಿ ಸಮುದ್ರಕ್ಕೆ ಬಾಗಿನ ಸಲ್ಲಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರಿಕೆ ಆರಂಭವಾಗಿ ತಿಂಗಳಿಗೂ ಹೆಚ್ಚು ಕಾಲ ಕಳೆದರೂ ಸಹ ಭಾರೀ ಮಳೆ, ಗಾಳಿ, ಪ್ರಕ್ಷುಬ್ಧ ವಾತಾವರಣ, ಮತ್ಸ್ಯಕ್ಷಾಮದ ಪರಿಣಾಮ ಮೀನುಗಾರಿಕಾ ಉದ್ಯಮ ತೀವ್ರ ಸಂಕಷ್ಟದಲ್ಲಿದೆ. ಪ್ರಕೃತಿ ವಿಕೋಪ ಮತ್ತು ಮತ್ಸ್ಯಕ್ಷಾಮದ ಹಿನ್ನೆಲೆಯಲ್ಲಿ ಹೆಚ್ಚಿನ ಬೋಟ್ಗಳು ಮೀನುಗಾರಿಕೆ ಆರಂಭಿಸಲು ಇನ್ನೂ ಮೀನಮೇಷ ಎಣಿಸುತ್ತಿರುವುದು ಸಚಿವರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ದೇವರ ಮೊರೆ ಹೋಗಿದ್ದಾರೆ.
ಕರಾವಳಿಯ (ಉತ್ತರಕನ್ನಡ, ಉಡುಪಿ, ಮಂಗಳೂರು) ಮೀನುಗಾರರು ಈ ಭಾರಿ ಮತ್ಸ್ಯ ಕ್ಷಾಮದಿಂದ ಮೀನುಗಾರಿಕೆ ಉದ್ಯಮದಲ್ಲಿ ನಷ್ಟ ಅನುಭವಿಸಿ ಸಂಕಷ್ಟದಲ್ಲಿದ್ದು ಇಂದು ಸಮಸ್ತ ಮೀನುಗಾರರ ಪರವಾಗಿ ಭಟ್ಕಳ ತಾಲೂಕಿನ ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಮೀನುಗಾರರ ಒಳಿತಿಗಾಗಿ ವಿಶೇಷ ಪೂಜೆ (1/2) pic.twitter.com/fp7NayKeYy
— Mankal S Vaidya • ಮಂಕಾಳ.ಎಸ್.ವೈದ್ಯ (@MankalSVaidya) September 8, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಬಸ್ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು
Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ
Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?
Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.