ಇನ್ನು 61 ದಿನ ಮೀನುಗಾರಿಕೆ ಬಂದ್‌: ಲಂಗರು ಹಾಕಿದ ಬೋಟುಗಳು!


Team Udayavani, Jun 3, 2024, 5:13 PM IST

ಇನ್ನು 61 ದಿನ ಮೀನುಗಾರಿಕೆ ಬಂದ್‌: ಲಂಗರು ಹಾಕಿದ ಬೋಟುಗಳು!

■ ಉದಯವಾಣಿ ಸಮಾಚಾರ
ಕಾರವಾರ: ಮಳೆಗಾಲ ಆರಂಭವಾದದ್ದೇ ತಡ ಮೀನುಗಾರಿಕೆ ಉದ್ಯಮ ಸಹ ವಿರಾಮ ತೆಗೆದುಕೊಂಡಿದೆ. ಮಳೆಗಾಲದಲ್ಲಿ
ಮೀನುಗಳು ಮೊಟ್ಟೆ ಇಟ್ಟು ಸಂತಾನೋತ್ಪತ್ತಿ ಮಾಡುವ ಸಮಯವಾದ ಕಾರಣ ಜೂನ್‌ -ಜುಲೈನಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ಸರ್ಕಾರ ಸಹ ನಿಷೇಧ ಹೇರುತ್ತಾ ಬಂದಿರುವುದು ವಾಡಿಕೆ.

ಜೂನ್‌ ಪ್ರಾರಂಭವಾಗುತ್ತಿದ್ದಂತೆ, ಆಳ ಸಮುದ್ರದಲ್ಲಿ ಮೀನು ಬೇಟೆಯಾಡುತ್ತಿದ್ದ ಯಾಂತ್ರಿಕ ಬೋಟ್‌ಗಳು ದಡ ಸೇರಿದವು.
ಕಾರವಾರ, ಮುದಗಾ, ಬೇಲೇಕೇರಿ, ತದಡಿ, ಕಾಸರಕೋಡು, ಭಟ್ಕಳ ಬಂದರು ಸೇರಿದಂತೆ ಜಿಲ್ಲೆಯ ಒಂಬತ್ತು ಬಂದರುಗಳಲ್ಲಿ ಮೀನುಗಾರಿಕಾ ಚಟುವಟಿಕೆ ಸ್ತಬ್ಧಗೊಂಡಿದೆ. ಪರ್ಶಿಯನ್‌, ಟ್ರಾಲರ್‌ ಬೋಟ್‌ ಗಳಲ್ಲಿ ಕೆಲಸ ಮಾಡುವ ಒಡಿಶಾ, ಆಂಧ್ರ ಹಾಗೂ ಉತ್ತರ ಕರ್ನಾಟಕದ ಕಾರ್ಮಿಕರು ತಮ್ಮ ಸ್ವಂತ ಊರು, ರಾಜ್ಯಕ್ಕೆ ತೆರಳಿದ್ದಾರೆ. ಅಂದಾಜು 25 ಸಾವಿರ ಕಾರ್ಮಿಕರು ವಲಸೆ ಬಂದು ಮೀನುಗಾರಿಕೆಯಲ್ಲಿ ನಿರತರಾಗುತ್ತಾರೆ.

ಉಳಿದಂತೆ ಜಿಲ್ಲೆಯ 25 ಸಾವಿರ ಕಾರ್ಮಿಕರು, ಬೋಟ್‌ ಮಾಲೀಕರು, ಅವರ ಸಿಬ್ಬಂದಿ ಬಲೆ ರಿಪೇರಿ, ಬೋಟ್‌ ರಿಪೇರಿ, ನವೀಕರಣದಂಥ ಕೆಲಸಗಳನ್ನು ಮಳೆಗಾಲದಲ್ಲಿ ಮಾಡಿಕೊಳ್ಳುತ್ತಾರೆ. ಈ ಕಾರ್ಯ ಈಗ ನಿರಂತರವಾಗಿ ನಡೆದಿದೆ.

ಪರ್ಶಿಯನ್‌ ಬೋಟ್‌ 1,113: ಇನ್ನು ಜಿಲ್ಲೆಯಲ್ಲಿ ಪರ್ಶಿಯನ್‌ ಬೋಟ್‌ 1,113 ಇದ್ದು, ಅವು ಬಂದರಿನ ಧಕ್ಕೆಗೆ ಬಂದಿವೆ.
4027 ಟ್ರಾಲರ್‌ ಬೋಟ್‌ಗಳು ಬಂದರಿನಲ್ಲಿ ಲಂಗರು ಹಾಕಿವೆ. ಇವುಗಳನ್ನು ಹೊರತು ಪಡಿಸಿ, ಸಣ್ಣ ಪ್ರಮಾಣದ ಯಂತ್ರ ಜೋಡಿಸಿ ಎರಡು ಜನ ಸಿಬ್ಬಂದಿ ಸೇರಿ ಮಾಡುವ ಯಾಂತ್ರಿಕೃತ ಮೀನುಗಾರಿಕಾ ದೋಣಿಗಳು 5000ಕ್ಕೂ ಹೆಚ್ಚಿವೆ. ಈಚಿನ ವರ್ಷಗಳಲ್ಲಿ ಮತ್ಸ್ಯ ಸಂಪತ್ತು ಕ್ಷೀಣಿಸುತ್ತಿದ್ದು, ಮೀನುಗಾರಿಕೆ ಸಹ ಸಮುದ್ರ ಸಂಪತ್ತಿನ ಅದೃಷ್ಟವನ್ನು ಅವಲಂಬಿಸಿದೆ ಎಂದು ಫಿಶ್‌ ಫೆಡರೇಶನ್‌ ಅಧ್ಯಕ್ಷ ರಾಜು ತಾಂಡೇಲ್‌ ತಿಳಿಸಿದ್ದಾರೆ.

ಸರ್ಕಾರ ಹತ್ತು ಹಲವು ನೆರವು ಘೋಷಣೆ ಪರಿಣಾಮ ಮೀನುಗಾರರ ಬದುಕು ಸ್ವಲ್ಪ ಚೇತರಿಕೆ ಇದೆ. ಮಳೆಗಾಲದಲ್ಲಿ ಸರ್ಕಾರದ ನಿಯಮ ಮೀರಿ ಆಳ ಸಮುದ್ರಕ್ಕೆ ತೆರಳಿ, ಬೋಟ್‌ ಅವಘಡವಾದರೆ, ಸರ್ಕಾರದ ಪರಿಹಾರ ದೊರೆಯುವುದಿಲ್ಲ. ಹಾಗಾಗಿ ನಿಷೇಧದ ಅವಧಿಯಲ್ಲಿ ಮೀನುಗಾರರು ಸರ್ಕಾರದ ನಿಯಮ ಪಾಲಿಸಬೇಕು ಎಂದು ಮೀನುಗಾರಿಕೆ ಪ್ರಭಾರ ಉಪ ನಿರ್ದೇಶಕ ಪ್ರತೀಕ ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಜೂನ್‌ ಆರಂಭದಿಂದ ಮೀನುಗಾರಿಕೆ ಬಂದ್‌ ಆಗಿದ್ದು, ಮೀನುಗಾರರಿಗೆ ಇದು ವಿಶ್ರಾಂತಿ ಸಮಯವಾಗಿದೆ.

ಮಳೆಗಾಲದಲ್ಲಿ ಮೀನುಗಾರಿಕೆ ಸಾಧ್ಯವಿಲ್ಲ. ಏಂಡಿ ಬಲೆ ಬಳಸಿ ಸಾಂಪ್ರದಾಯಿಕ ಮೀನುಗಾರಿಕೆ ಮಾಡಬಹುದು. ಅದು ಸಮುದ್ರ
ದಡದ ಮೀನುಗಾರಿಕೆ. ಇದು ಸಹ ಮಳೆ ವಿರಾಮದ ಅವಧಿಯಲ್ಲಿ. ಉಳಿದಂತೆ ಯಾಂತ್ರಿಕ ಬೋಟ್‌ಗಳಿಗೆ ಹಾಗೂ ಮೀನುಗಾರರಿಗೆ ಇದು ವಿಶ್ರಾಂತಿ ಕಾಲ. ವರ್ಷದ ಎರಡು ತಿಂಗಳು ನೆಮ್ಮದಿ ಸಮಯ. ಉಳಿದಂತೆ ನಾವು ಸಮುದ್ರದ ಜೊತೆ ಸದಾ ಸಂಘರ್ಷದಲ್ಲಿ ಇರುತ್ತೇವೆ.
·ಸತೀಶ್‌ ತಾಂಡೇಲ್‌, ಹೊನ್ನಾವರ

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-dandeli

Dandeli: ಕಾಳಿ ನದಿಗೆ ಜಿಗಿದ ಮಹಿಳೆಯ ಮೃತದೇಹ ಪತ್ತೆ

7

Joida: ಬಸ್ ನಿಲ್ದಾಣದಲ್ಲಿ ಚಾಲಕ, ನಿರ್ವಾಹಕನಿಂದ ಪ್ರಯಾಣಿಕನಿಗೆ ಹಲ್ಲೆ

6

Dandeli: ಗಣೇಶನಗರದಲ್ಲಿ ವಿವಾಹಿತ ಮಹಿಳೆ ನಾಪತ್ತೆ: ದೂರು ದಾಖಲು

Bheemanna-Naik

Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ‌

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.