ಹಕ್ಕಿಗಾಗಿ ಅರಣ್ಯ ಅತಿಕ್ರಮಣದಾರರ ಪ್ರತಿಭಟನೆ

•ಮಹಿಳೆ ಮೇಲೆ ದೌರ್ಜನ್ಯ ಎಸಗಿದ ಅರಣ್ಯ ಅಧಿಕಾರಿಗಳನ್ನು ಶೀಘ್ರ ಅಮಾನತುಗೊಳಿಸಲು ಆಗ್ರಹ

Team Udayavani, May 26, 2019, 12:49 PM IST

uk-tdy-2..

ಶಿರಸಿ: ಹೋರಾಟಗಾರ ರವೀಂದ್ರ ನಾಯ್ಕ ನೇತೃತ್ವದಲ್ಲಿ ಅರಣ್ಯ ಅತಿಕ್ರಮಣದಾರರು ಪ್ರತಿಭಟನೆ ನಡೆಸಿದರು.

ಶಿರಸಿ: ಸಿದ್ದಾಪುರ ಕಾನಸೂರು ಬಳಿ ವಿಧವಾ ಮಹಿಳೆ ಮೇಲೆ ದೌರ್ಜನ್ಯ ಎಸಗಿದ ಅರಣ್ಯಾಧಿಕಾರಿಗಳ ನಡೆ ವಿರೋಧಿಸಿ ಜಿಲ್ಲಾ ಅತಿಕ್ರಮಣದಾರರ ಹೋರಾಟ ವೇದಿಕೆ ಅಧ್ಯಕ್ಷ ಏ. ರವೀಂದ್ರ ನಾಯ್ಕರ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಅರಣ್ಯ ಅತಿಕ್ರಮಣದಾರರು ಪ್ರತಿಭಟನೆ ನಡೆಸಿದರು.

ಕಾನಸೂರಿನ ಗೀತಾ ಗಣಪತಿ ನಾಯ್ಕ ಮೇಲೆ ದೌರ್ಜನ್ಯ ಎಸಗಿದ ಅಧಿಕಾರಿಗಳನ್ನು ಅಮಾನತ್ತುಗೊಳಸಿವುದರ ಜೊತೆಯಲ್ಲಿ ಇಂತಹ ಅಮಾನವೀಯ ಕೈತ್ಯಗಳು ಮತ್ತೂಮ್ಮೆ ಮರುಕಳಿಸದಂತೆ ಹಿರಿಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎ.ರವೀಂದ್ರ ನಾಯ್ಕ ಮಾತನಾಡಿ, ಜಿಲ್ಲೆಯಲ್ಲಿ 80ಸಾವಿರಕ್ಕೂ ಅಧಿಕ ಅತಿಕ್ರಮಣದಾರರು ಹಕ್ಕು ಪತ್ರ ವಿತರಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಅವುಗಳಲ್ಲಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್‌ ಪರಿಶೀಲನೆ ನಡೆಸುವುದರ ಜೊತೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವ ಪ್ರಕ್ರಿಯೆ ನಡೆಸುವಂತಿಲ್ಲ ಎಂದು ಉಚ್ಚನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿದರೂ ಅಧಿಕಾರಿಗಳು ಅತಿಕ್ರಮಣದಾರರಿಗೆ ಅನಗತ್ಯ ತೊಂದರೆ ನೀಡುತ್ತಿರುವುದು ಬೇಸರದ ಸಂಗತಿ. ಮಹಿಳೆ ಮೇಲೆ ಅನಗತ್ಯ ಕಾನೂನು ಪೌರುಷ ತೋರುವ ಅಧಿಕಾರಿಗಳದ್ದು ಅಮಾನವೀಯ ಕೃತ್ಯವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮಾನವ ಹಕ್ಕುಗಳ ಮತ್ತು ಮಹಿಳಾ ಆಯೋಗದಲ್ಲಿಯೂ ಪ್ರಕಣರಣ ದಾಖಲಿಸುವುದಾಗಿ ತಿಳಿಸಿದರು.

ಭಟ್ಕಳದ ರಾಮಾ ಮೊಗೇರ್‌, ಜಿಲ್ಲೆಯಲ್ಲಿ ಶೇ.80 ರಷ್ಟು ಅರಣ್ಯ ಭೂಮಿ ಇರುವ ಮಾಹಿತಿ ತಿಳಿದಾಗ್ಯೂ ಸಹ ಅಧಿಕಾರಿಗಳು ಜಿಲ್ಲೆಯ ಜನರಿಗೆ ತೊಂದರೆ ನೀಡುತ್ತಿರುವುದು ಸರಿಯಲ್ಲ. ಇದೇರೀತಿ ಮುಂದುವರಿದಲ್ಲಿ ಅಧಿಕಾರಿಗಳ ಮನೆಯಲ್ಲೆ ವಾಸ್ತವ್ಯ ಹೂಡುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು.

ಸ್ಪಂದನೆ ನೀಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್‌.ಜಿ ಹೆಗಡೆ, ಅರಣ್ಯ ಅಧಿಕಾರಿಗಳು ಕಾನೂನಿಗೆ ಬದ್ಧರಾಗಿ ಕಾರ್ಯ ನಿರ್ವಹಿಸುತ್ತೇವೆ. ಕಾನಸೂರಿನ ಗೀತಾ ನಾಯ್ಕ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪ್ರತಿಭಟನಾ ಸ್ಥಳದಲ್ಲಿಯೇ ಪರಿಶೀಲಿಸಿ, ಆಕೆಯ ವಾಸ್ತವ್ಯಕ್ಕೆ ಸಂಬಂಧಿಸಿ ಇಲಾಖೆಯಿಂದ ಯಾವುದೆ ಆತಂಕ ನೀಡುವುದಿಲ್ಲ. ಕಾನಸೂರು ಪ್ರಕರಣದಲ್ಲಿ ಭಾಗಿಯಾದ ಇಲಾಖೆ ಸಿಬ್ಬಂದಿಗಳನ್ನು ಕೂಡಲೆ ವರ್ಗಾವಣೆ ಮಾಡುತ್ತೇವೆ ಎಂದರು.

ಜಿಪಂ ಸದಸ್ಯ ಜಿ.ಎನ್‌ ಹೆಗಡೆ ಮುರೇಗಾರ್‌, ಶೋಭಾ ನಾಯ್ಕ. ಮಂಜುನಾಥ ಮರಾಠಿ ಇತರರು ಇದ್ದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.