ಜಿಲ್ಲೆಯಲ್ಲಿ ಗೋವಾ ಮಾದರಿ ಪ್ರವಾಸೋದ್ಯಮ ಅಭಿವೃದ್ಧಿ- ಸತೀಶ್ ಸೈಲ್
Team Udayavani, Sep 30, 2024, 6:04 PM IST
ಉದಯವಾಣಿ ಸಮಾಚಾರ
ಕಾರವಾರ: ಉತ್ತರ ಕನ್ನಡ ಜಿಲ್ಲೆಯು ಆಕರ್ಷಕ ಪ್ರವಾಸಿ ತಾಣಗಳನ್ನು ಒಳಗೊಂಡಿದ್ದು ಮುಂದಿನ ದಿನಗಳಗಲ್ಲಿ ಅತ್ಯಾಕರ್ಷಕ ಯೋಜನೆಗಳ ಮೂಲಕ ಜಿಲ್ಲೆಯಲ್ಲಿ ಪ್ರವಾಸಿಗರ ಆಕರ್ಷಿಸಲು ಗೋವಾ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಆ್ಯಂಡ್ ಅಡ್ವಟೈಜಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಹಾಗೂ ಕಾರವಾರ ಶಾಸಕ ಸತೀಶ್ ಸೈಲ್ ಹೇಳಿದರು.
ಅವರು ರವಿವಾರ ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದಲ್ಲಿ, ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ
ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ನಡೆದ ಗಾಳಿ ಪಟ ಸ್ಪರ್ಧೆ ಮತ್ತು ಮರಳು ಶಿಲ್ಪ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ
ಚಿತ್ರಕಲೆ, ಗಾಳಿಪಾಟ ಸ್ಪರ್ಧೆ ಮತ್ತು ಮರಳು ಶಿಲ್ಪ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು. ಗೋವಾ ಬೀಚ್ಗಳಿಗಿಂತ ಪ್ರಾವಸೋದ್ಯಮಕ್ಕೆ ಪೂರಕವಾದ ಬೀಚ್ಗಳು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಗೋವಾದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಲು ಸಿ.ಆರ್.ಝಡ್ ಅನುಮತಿ ಪಡೆದು ಬೀಚ್ಗಳನ್ನು ಅಭಿವೃದ್ಧಿ ಪಡಿಸಿ ಸ್ಥಳೀಯ ವ್ಯಾಪರಸಸ್ಥರಿಗೆ ಉದ್ಯೋಗ
ನೀಡುವ ಮೂಲಕ ಸ್ಥಳೀಯ ಸಾಂಪ್ರದಾಯಕ ವಸ್ತುಗಳನ್ನು ಪ್ರವಾಸಿಗರಿಗೆ ತಿಳಿಸುವ ಮುಖಾಂತರ ಪ್ರವಾಸೋದ್ಯಮಕ್ಕೆ
ಹೆಸರುವಾಸಿಯಾಗಿದೆ.
ಅದೇ ಮಾದರಿಯಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ ಎಂದರು. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಹಾಗೂ ಪ್ರವಾಸಿಗರ ಮನರಂಜನೆಗಾಗಿ ಜಿಲ್ಲೆಯ ಕಡಲ ತೀರದಲ್ಲಿ ಪ್ಯಾರ ಸೈಕಲಿಂಗ್ ಸೇರಿದಂತೆ ಅನೇಕ
ಜಲಸಾಹಸ ಕ್ರೀಡೆಗಳು ಆರಂಭಿಸುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಹಾಗೂ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ ಪ್ಲೈ ಓವರ್ ಕೆಳಗಡೆ ಸಣ್ಣ ಅಂಗಡಿಗಳನ್ನು ನಿರ್ಮಾಣ ಮಾಡಿ ಸ್ಥಳೀಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಮೂಲಕ ಆರ್ಥಿಕವಾಗಿ ಸಬಲರನ್ನಾಗಿಲಸುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಾತನಾಡಿ, ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಪ್ರವಸೋದ್ಯಮ ಇಲಾಖೆ
ವತಿಯಿಂದ ಚಿತ್ರಕಲೆ, ಗಾಳಿಪಾಟ ಸ್ಪರ್ಧೆ ಹಾಗೂ ಮರಳು ಶಿಲ್ಪಿ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಲಾಗಿದೆ ಈ ಕಾರ್ಯಕ್ರಮಗಳಲ್ಲಿ ಉತ್ಸಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ಕಂಡು ಸಂತಸ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಅನೇಕ ಪ್ರವಾಸಿ ಸ್ಥಳಗಳಿವೆ ಇಲ್ಲಿಗೆ ಆಗಮಿಸುವ ಪ್ರವಾಸಿಗಳಿಗೆ ಪ್ರವಾಸಿ ತಾಣಗಳ ಪರಿಚಯಿಸಲು ಕಾನ್ಸ್ ಟೇಬಲ್ ಬುಕ್ ಮಾಡಲು ನಿರ್ಧರಿಸಲಾಗಿದೆ. ಇದರ ಕವರ್ ಪೇಜ್ ನಾಳೆ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಮರಳು ಶಿಲ್ಪ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದರಿಗೆ ಸಾಮಗ್ರಿಗಳ ಕಿಟ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೆಕರ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಜಯಂತ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ
Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ ನಾಯ್ಕ
Sirsi: ಯಕ್ಷಗಾನದ ಪ್ರಸಿದ್ಧ ಭಾಗವತ ವಿದ್ವಾನ್ ಗಣಪತಿ ಭಟ್ಟ ಗೆ ಚಂದುಬಾಬು ಪ್ರಶಸ್ತಿ
ಚಕ್ರ ದುಸ್ಥಿತಿಯಲ್ಲಿದ್ದರೂ ಪ್ರಯಾಣಿಕರನ್ನು ಕರೆದೊಯ್ದ ಬಸ್: ತಡೆದು ನಿಲ್ಲಿಸಿದ ಸಾರ್ವಜನಿಕರು
Dandeli: ಕಾಳಿ ನದಿಗೆ ಜಿಗಿದ ಮಹಿಳೆಯ ಮೃತದೇಹ ಪತ್ತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Alanda: ಕಲುಷಿತ ನೀರು ಸೇವಿಸಿ ನಿಂಬರ್ಗಾ ಗ್ರಾಮದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Malpe: ಹುಲ್ಲು ತರಲು ಹೋಗಿದ್ದ ಮಹಿಳೆ ನಾಪತ್ತೆ
Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ
Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್ ಭವಿಷ್ಯ
PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.