![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
Gokarna ಅಪಾಯದ ಕಡಲಿನಲ್ಲಿಯೂ ಮೋಜು-ಮಸ್ತಿ ಮಾಡುವ ಪ್ರವಾಸಿಗರು
ಕಡಲಬ್ಬರಕ್ಕೆ ಕೊಚ್ಚಿಹೋದ ಗೋಕರ್ಣದ ಪ್ರಮುಖ ಕಡಲತೀರ
Team Udayavani, Jun 21, 2024, 5:58 PM IST
![Gokarna ಅಪಾಯದ ಕಡಲಿನಲ್ಲಿಯೂ ಮೋಜು-ಮಸ್ತಿ ಮಾಡುವ ಪ್ರವಾಸಿಗರು](https://www.udayavani.com/wp-content/uploads/2024/06/Gokarna-2-620x377.jpg)
ಗೋಕರ್ಣ : ಕಳೆದೆರಡು ದಿನಗಳಿಂದ ಕಡಿಮೆಯಾಗಿದ್ದ ಮಳೆಯ ಆರ್ಭಟ ಶುಕ್ರವಾರ ಮತ್ತೆ ಅಬ್ಬರಿಸಿದೆ.
ಮಳೆಯ ತೀವ್ರತೆ ಕಡಲಬ್ಬರದಿಂದಾಗಿ ಇಲ್ಲಿಯ ಪ್ರಮುಖ ಕಡಲ ತೀರವನ್ನೇ ಸಮುದ್ರ ನುಂಗಿ ಹಾಕಿದೆ. ವಿಶಾಲವಾಗಿದ್ದ ಕಡಲತೀರ ಈಗ ಸಂಪೂರ್ಣ ಅಯೋಮಯವಾಗಿದೆ.
ದಕ್ಷಿಣದ ಕಾಶಿಯೆನಿಸಿಕೊಂಡಿರುವ ಗೋಕರ್ಣಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದರು. ಹಾಗೇ ದರ್ಶನವಾದ ನಂತರ ಸಮೀಪದಲ್ಲೇ ಇರುವ ಪ್ರಮುಖ ಕಡಲತೀರಕ್ಕೆ ಬಂದು ಹೋಗುವುದು ಸಂಪ್ರದಾಯ ಎನ್ನುವಂತಾಗಿದೆ.
ಹಾಗೇ ಶುಕ್ರವಾರ ಸಮುದ್ರದ ತೀರವನ್ನು ನೋಡಿದರೆ ಹತ್ತಾರು ಎಕರೆಯಷ್ಟು ಪ್ರದೇಶದಲ್ಲಿನ ಮಣ್ಣನ್ನು ಅಲ್ಲಿಯ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಕಡಲತೀರ ವಿರೂಪಗೊಂಡಿದೆ.
ಇಲ್ಲಿ ಸಾಕಷ್ಟು ಪ್ರಮುಖ ಬೀಚ್ಗಳಿದ್ದರೂ ಕೂಡ ಶ್ರೀ ಮಹಾಬಲೇಶ್ವರ ದೇವಸ್ಥಾನದ ಕಡಲತೀರ ಅತ್ಯಂತ ಸಮೀಪವಾಗಿರುವುದರಿಂದ ಭಕ್ತರು ಇಲ್ಲಿಗೆ ಬಂದು ಸಮುದ್ರಸ್ನಾನ ಮಾಡುವುದು, ಪಿಂಡಪ್ರದಾನ ಮಾಡುವುದು ಹಾಗೂ ವಿವಿಧ ಧಾರ್ಮಿಕ ಕಾರ್ಯಗಳನ್ನು ಮಾಡುತ್ತಿದ್ದರು. ಆದರೆ ಈಗ ಕಡಲತೀರವೇ ಇಲ್ಲ ಎಂಬಾತಾಗಿದೆ.
ಇನ್ನು ಹೊರಗಡೆಯಿಂದ ಬರುವ ಭಕ್ತರಿಗೆ ಇಲ್ಲಿಯ ಸಮುದ್ರದ ಆಳ ಮತ್ತು ತೀವೃತೆಯ ಬಗ್ಗೆ ಅರಿವು ಇಲ್ಲದಿರುವುದರಿಂದ ಸಮುದ್ರದ ಅಬ್ಬರದ ನಡುವೆಯೂ ಸಮುದ್ರ ಸ್ನಾನಕ್ಕೆ ತೆರಳುತ್ತಿರುವುದನ್ನು ನೋಡಿದರೆ ನಿಜಕ್ಕೂ ಭಯ ಹುಟ್ಟಿಸುತ್ತದೆ. ಲೈಫ್ಗಾರ್ಡ್ ಗಳು ಭಕ್ತರಿಗೆ ಪದೇ ಪದೇ ಎಚ್ಚರಿಕೆ ನೀಡಿದರೂ ಕೂಡ ಅವರು ಕ್ಯಾರೇ ಅನ್ನುತ್ತಿಲ್ಲ. ಒಮ್ಮೆಲೆ ನೀರು ಬಂದು ವಾಪಸ್ಸಾಗುವಾಗ ಸ್ವಲ್ಪ ಕಾಲು ತಪ್ಪಿದರೂ ನೀರು ಪಾಲಾಗುವ ಸಾಧ್ಯತೆಯಿದೆ.
ಹಾಗೇ ಸಾಕಷ್ಟು ಕಡಲತೀರವನ್ನು ಕೊಚ್ಚಿಕೊಂಡು ಹೋಗಿದ್ದರೂ ಕೂಡ ಪ್ರವಾಸಿಗರು ಅದರಲ್ಲಿಯೂ ಮಹಿಳೆಯರು ನೀರಿನಲ್ಲಿ ಮೋಜು ಮಾಡುತ್ತಿರುವುದು ನೋಡಿದರೆ ನಿಜಕ್ಕೂ ಆತಂಕ ಹುಟ್ಟಿಸುತ್ತದೆ.
ಲೈಫ್ಗಾರ್ಡ್ ಗಳು ಎಚ್ಚರಿಕೆ ನೀಡುತ್ತಿದ್ದರೂ ಕೂಡ ಅವರು ತಲೆಗೆ ಹಾಕಿಕೊಳ್ಳದೇ ತಮ್ಮದೇ ಲೋಕದಲ್ಲಿದ್ದರು. ಇಂತಹ ಅಪಾಯದ ಸನ್ನಿವೇಶದಲ್ಲಿಯೂ ಕೂಡ ಸಮುದ್ರದಲ್ಲಿ ಮೋಜು ಮಾಡುತ್ತಿರುವುದು ನಿಜಕ್ಕೂ ಆತಂಕ ಹುಟ್ಟಿಸುತ್ತಿದೆ.
ದೂರದಿಂದ ಬರುವ ಭಕ್ತರಿಗೆ ದೇವರ ದರ್ಶನವಾದ ನಂತರ ಸಮುದ್ರದಲ್ಲಿ ಸ್ನಾನ ಮಾಡಬೇಕೆಂಬ ಸಹಜ ಬಯಕೆಯಂತೆ ತೆರಳುತ್ತಾರೆ. ಆದರೆ ಸ್ವಲ್ಪವೇ ಹೆಚ್ಚು ಕಡಿಮೆಯಾದರೂ ಪ್ರಾಣ ಹೋಗುತ್ತದೆಂಬ ಕಿಂಚಿತ್ತು ಅಳಕಿಲ್ಲದೇ ನೀರಿನಲ್ಲಿ ಮೋಜು ಮಾಡುತ್ತಿರುವುದು ಎಂತವರಿಗಾದರೂ ಹುಚ್ಚಾಟ ಅನಿಸದೇ ಇರದು.
ಸಮುದ್ರಸ್ನಾನ ಮುಗಿದ ನಂತರ ಪಕ್ಕದಲ್ಲೇ ಇರುವ ಸಿಹಿ ನೀರು ಸ್ನಾನ ಗೃಹದಲ್ಲಿ ಸ್ನಾನ ಮಾಡಿ ಬಟ್ಟೆ ಬದಲಿಸುತ್ತಾರೆ. ಇನ್ನು ಬರುವ ಪ್ರವಾಸಿಗರು ಕೂಡ ಇದೇ ಕತೆಯಾಗಿದೆ.
ಟಾಪ್ ನ್ಯೂಸ್
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Deshpande](https://www.udayavani.com/wp-content/uploads/2024/07/Deshpande-150x90.jpg)
Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್.ವಿ.ದೇಶಪಾಂಡೆ
![America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ](https://www.udayavani.com/wp-content/uploads/2024/07/Miss-World-1-150x110.jpg)
America ಸೌಂದರ್ಯ ಸ್ಪರ್ಧೆ: ಶಿರಸಿ ಮೂಲದ ಡಾ|ಶ್ರುತಿಗೆ ಕಿರೀಟ
![15 ದಿನದಲ್ಲಿ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ ನಾಯ್ಕ](https://www.udayavani.com/wp-content/uploads/2024/07/bhimanna-naik-150x78.jpg)
15 ದಿನದಲ್ಲಿ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ ನಾಯ್ಕ
![9-sirsi](https://www.udayavani.com/wp-content/uploads/2024/06/9-sirsi-150x90.jpg)
ಶಿರಸಿಯ ಅದ್ವೈತನಿಗೆ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
![6-honnavar](https://www.udayavani.com/wp-content/uploads/2024/06/6-honnavar-150x90.jpg)
Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್
MUST WATCH
ಹೊಸ ಸೇರ್ಪಡೆ
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-150x92.jpg)
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.