Gokarna: ಉಕ್ಕಿ ಹರಿಯುತ್ತಿರುವ ಕಡಲು: ರೆಸಾರ್ಟ್, ಹೋಮ್ ಸ್ಟೇ ಸಮುದ್ರ ಪಾಲು

ಹರಿಯುವ ನದಿ, ಉಕ್ಕುವ ಸಮುದ್ರದ ಅಲೆಯಿಂದಾಗಿ ನಿದ್ದೆಗೆಟ್ಟ ಜನತೆ

Team Udayavani, Aug 25, 2024, 1:09 PM IST

7-gokarna

ಗೋಕರ್ಣ: ಈ ಬಾರಿ ಮಳೆಗಾಲದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸಾಕಷ್ಟು ಸಂಕಷ್ಟ ಉಂಟಾಗಿದ್ದು, ಇದರಿಂದಾಗಿ ಜನರು ಆತಂಕಗೊಂಡಿದ್ದಾರೆ.

ಒಂದೆಡೆ ಶಿರೂರು ಸೇರಿದಂತೆ ವಿವಿಧೆಡೆ ಗುಡ್ಡ ಕುಸಿತ, ನದಿ ಅಂಚಿನ ಮನೆಗಳಿಗೆ ನೀರು ನುಗ್ಗಿ ಹಾನಿ ಮಾಡಿದರೆ, ಸಮುದ್ರ ತೀರಗಳು ಮನೆ, ಅಂಗಡಿಗಳನ್ನೇ ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿರುವುದು ಕಂಡುಬರುತ್ತಿದೆ.

ಇಲ್ಲಿಯ ಸಮೀಪದ ದುಬ್ಬನಶಶಿ, ರುದ್ರಪಾದ, ಕರಿಯಪ್ಪನ ಕಟ್ಟೆಯಲ್ಲಿ ತೀವ್ರ ಕಡಲ ಕೊರೆತ ಉಂಟಾಗಿ ಮನೆ ಹಾಗೂ ಹೋಮ್ ಸ್ಟೇಗಳು ಸಮುದ್ರ ಪಾಲಾಗುತ್ತಿವೆ. ಹಲವು ದಶಕಗಳಿಂದ ಈ ಉದ್ಯೋಗವನ್ನೇ ನಂಬಿಕೊಂಡು ಬಂದವರಿಗೆ ಈಗ ದಿಕ್ಕು ತೋಚದಂತಾಗಿದೆ.

ಈ ಭಾಗದಲ್ಲಿ ಸಾಕಷ್ಟು ಸಣ್ಣಪುಟ್ಟ ಹೋಮ್‌ಸ್ಟೇಗಳಿವೆ. ಅದರಿಂದಲೇ ಹಲವರು ಜೀವನ ಸಾಗಿಸುತ್ತಿದ್ದರು. ಆದರೆ ಎಂದೂ ಕಾಣದಂತಹ ಕಡಲ ಕೊರೆತ ಈ ಬಾರಿ ಉಂಟಾಗಿದ್ದರಿಂದಾಗಿ ತಾವು ನಿರ್ಮಿಸಿಕೊಂಡಿದ್ದ ಕಟ್ಟಡ ಹಾಗೂ ಮನೆಗಳು ನೀರು ಪಾಲಾಗುತ್ತಿರುವುದನ್ನು ಕಂಡು ಕಣ್ಣೀರು ಹಾಕುತ್ತಿದ್ದಾರೆ.

ಓಂ ಬೀಚ್, ಕುಡ್ಲೆ ಬೀಚ್ ಸೇರಿದಂತೆ ಹಲವು ಕಡೆಗಳಲ್ಲಿ ಕಡಲ ಆರ್ಭಟ ಹೆಚ್ಚಾಗಿದೆ. ಹೀಗಾಗಿ ಪ್ರವಾಸಿಗರು ಕೂಡ ಇಲ್ಲಿ ಉಳಿದುಕೊಳ್ಳಲು ಹಿಂದೇಟು ಹಾಕುವಂತಾಗಿದೆ. ದೊಡ್ಡ ದೊಡ್ಡ ಅಲೆಗಳು ನೋಡುಗರಲ್ಲಿ ನಡುಕ ಹುಟ್ಟಿಸುತ್ತದೆ. ಇದರಿಂದಾಗಿ ಯಾವುದೇ ಆದಾಯವಿಲ್ಲದೇ ಹಲವರು ದಿನದೂಡುತ್ತಿದ್ದಾರೆ. ಈ ಬಾರಿ ಸಮುದ್ರ ಮಟ್ಟ ಕೂಡ ಏರಿಕೆಯಾಗಿದ್ದು, ಇದರಿಂದಾಗಿ ಕಡಲು ಹೆಚ್ಚಿನ ಪ್ರಮಾಣದಲ್ಲಿ ನೀರು ನುಗ್ಗುತ್ತಿದೆ.

ಮೀನುಗಾರಿಕಾ ಬಂದರಾಗಿರುವ ತದಡಿಯಲ್ಲಿ ಬಂದರಿನ ಮೇಲೆ ನೀರು ಹರಿದಿದ್ದು, ಅಷ್ಟರ ಮಟ್ಟಿಗೆ ಸಮುದ್ರದ ನೀರು ಮೀನುಗಾರರನ್ನು ಆತಂಕಕ್ಕೀಡು ಮಾಡಿದೆ.  ಇನ್ನು ಹಲವೆಡೆಗಳಲ್ಲಿ ಸಮುದ್ರದ ನೀರು ನುಗ್ಗಿದ್ದು, ಅಲ್ಲಲ್ಲಿ ಸಣ್ಣಪುಟ್ಟ ಹಾನಿಯಾಗಿರುವುದು ವರದಿಯಾಗುತ್ತಿದೆ.

ಈಗ ಮತ್ತೆ ಮಳೆ ಸುರಿಯುತ್ತಿರುವುದರಿಂದ ಅಘನಾಶಿನಿ ನದಿಯ ಹರಿವು ಇನ್ನು ಸಮುದ್ರದ ನೀರಿನ ಒತ್ತಡದಿಂದಾಗಿ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೂ ಕೂಡ ನೀರು ನುಗ್ಗುತ್ತಿರುವುದು ಕಂಡುಬರುತ್ತಿದೆ. ಒಟ್ಟಿನಲ್ಲಿ ಎಲ್ಲೆ ನೋಡಿದರೂ ಅಪಾಯ ಎನ್ನುವಂತಾಗಿದೆ. ಹೀಗಾಗಿ ಪ್ರವಾಸಿಗರ ಸಂಖ್ಯೆ ಕೂಡ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗಿದೆ.

 

ಟಾಪ್ ನ್ಯೂಸ್

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.