Robbery Case ಬಂಗಾರ ನೀಡುವುದಾಗಿ ವಂಚಿಸಿ ದರೋಡೆ: ಆರೋಪಿಗಳ ಬಂಧನ

7.63 ಲಕ್ಷ ರೂ. ಹಾಗೂ ಮೂರು ಮೋಟರ್‌ ಸೈಕಲ್‌ ಪೊಲೀಸರ ವಶಕ್ಕೆ

Team Udayavani, Aug 8, 2024, 9:45 PM IST

Robbery Case ಬಂಗಾರ ನೀಡುವುದಾಗಿ ವಂಚಿಸಿ ದರೋಡೆ: ಆರೋಪಿಗಳ ಬಂಧನ

ಶಿರಸಿ: ಬಂಗಾರ ನೀಡುವುದಾಗಿ ನಂಬಿಸಿ ದರೋಡೆ ಮಾಡಿದ ಆರೋಪಿತರನ್ನು ಬಂಧಿಸಿ ಅವರಿಂದ 7.63 ಲಕ್ಷ ರೂ. ಹಾಗೂ 3 ಮೋಟರ್‌ ಸೈಕಲ್‌ ವಶಪಡಿಸಲಾಗಿದೆ ಎಂದು ಎಸ್ಪಿ ಎಂ.ನಾರಾಯಣ ಶಿರಸಿ ಪೊಲೀಸರ ಕಾರ್ಯ ಶ್ಲಾಘಿಸಿದರು.

ಗುರುವಾರ(ಆ.08) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆ. 4ರಂದು ಶಿರಸಿ ಮಳಲಗಾಂವ ಬಳಿ ದರೋಡೆ ನಡೆದಿತ್ತು. ಕೇರಳದಿಂದ ಬಂದ ಇಬ್ಬರು ಬಂಗಾರ ನೀಡುವುದಾಗಿ ವಂಚಿಸಿ 9.11 ಲಕ್ಷ ರೂ ಎಗರಿಸಿದ್ದರು. ಈ ಕುರಿತು ಕೇರಳದ ಮಲಪುರಂದ ಸಚಿನ್‌ ಶಿವಾಜಿ ಗಾಯಕವಾಡ ಅವರು ಎಂಟು ಜನರ ವಿರುದ್ಧ ಬನವಾಸಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಏನಿದು ಘಟನೆ?: ಆರೋಪಿತರಲ್ಲಿ ಓರ್ವ ವಿಕಲಚೇತನ ವ್ಯಕ್ತಿ ಬಂಗಾರ ಕೊಡುವುದಾಗಿ ಹೇಳಿ ವಿಶ್ವಾಸದಿಂದ ಮಾತನಾಡಿ ತಿಂಗಳ ಮೊದಲು 800 ಮಿಲಿ ಬಂಗಾರ ನೀಡಿದ್ದ. ಬಳಿಕ ಸಚಿನ್‌ ತನ್ನ ಊರಿಗೆ ಹೊಗಿ ಪರೀಕ್ಷಿಸಿ ನೋಡಿ ಬಂಗಾರ ಎಂದು ಖಚಿತಗೊಂಡು ಆರೋಪಿತನಿಗೆ ಕರೆ ಮಾಡಿ ಬಂಗಾರ ಬೇಕು ಎಂದು ಹೇಳಿದ್ದರು. ಆಗ ಆರೋಪಿತ ಶಿರಸಿ-ಹಾನಗಲ್‌ ರಸ್ತೆಯ ಮಳಗಾಂವ ಬಸ್‌ ನಿಲ್ದಾಣ ಹತ್ತಿರ ಬರಲು ತಿಳಿಸಿದ್ದರು.

ಆ.4 ರಂದು ಬೆಳಗ್ಗೆ 11:45ಕ್ಕೆ ಆರೋಪಿತರು ತಿಳಿಸಿದ ಜಾಗಕ್ಕೆ ಬಂದಾಗ ಬಂಗಾರ ನೀಡುವುದಾಗಿ ನಂಬಿಸಿ ಸಚಿನ್‌ ಜತೆ ಬಂದ ಮಲಪುರಂದ ವಿಷ್ಣು, ನಾರಾಯಣ ಇಬ್ಬರೂ ಆರೋಪಿತರ ಬಳಿ ಹೋದಾಗ ದಾಳಿ ನಡೆಸಿ ಹೊಡೆದು ಇದ್ದ 9. 11 ಲಕ್ಷ ರೂ. ತೆಗೆದುಕೊಂಡು ಪರಾರಿಯಾಗಿದ್ದರು.

ಹೆಡೆಮುರಿ ಕಟ್ಟಿದ ಪೊಲೀಸರು: ಪ್ರಕರಣ ದಾಖಲಿಸಿಕೊಂಡ ಶಿರಸಿ ಪೊಲೀಸರು ಮೂರು ತಂಡಗಳನ್ನಾಗಿ ರಚಿಸಿ ಇದೀಗ ಎಂಟು ಜನರಲ್ಲಿ ಐವರನ್ನು ಬಂಧಿಸಿದ್ದಾರೆ.

ಸೊರಬ ಆನವಟ್ಟಿಯ ನಾಗಪ್ಪ ಕೊರಚರ (71), ಅವಿನಾಧ ಕೊರಚರ (28), ನಿಸ್ಸಾರ ಅಹಮದ್‌ (26), ಸಂಜೀವ ಕೊರಚರ (27), ಕೃಷ್ಣಪ್ಪ ನಾಯ್ಕ ಶಿಕಾರಿಪುರ 42 ಅವರನ್ನು ಬಂಧಿಸಲಾಗಿದೆ.

ಹೆಚ್ಚುವರಿ ಎಸ್‌ಪಿ ಸಿ.ಟಿ. ಜಯಕುಮಾರ, ಎಂ.ಜಗದೀಶ ಮಾರ್ಗದರ್ಶನದಲ್ಲಿ ಕೆ.ಎಲ್‌. ಗಣೇಶ, ಸಿಪಿಐ ಶಶಿಕಾಂತ ವರ್ಮಾ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಪಿಎಸ್‌ಐಗಳಾದ ಯಲ್ಲಾಲಿಂಗ ಕುನ್ನೂರು, ಸುನೀಲಕುಮಾರ, ಮಹಾಂತಪ್ಪ ಕುಂಬಾರ, ಸಿಬಂದಿ ಪಾಲ್ಗೊಂಡಿದ್ದರು.

ಸಿಎಂ ಬಂಗಾರ ಪದಕಕ್ಕೆ ಶಿಫಾರಸ್ಸು: ಈ ಪ್ರಕರಣದಲ್ಲಿ ರಾಮಯ್ಯ ಪೂಜಾರಿ ಕಾರ್ಯ ಕೂಡ ಗಮನಾರ್ಹ ಎಂದು ಎಸ್ಪಿ ಬಣ್ಣಿಸಿದರು. ರಾಮಯ್ಯ ಅವರ ಕಾರ್ಯ ಮೆಚ್ಚಿ ಸಿಎಂ ಬಂಗಾರದ ಪದಕಕ್ಕೆ ಶಿಫಾರಸ್ಸು ಮಾಡುತ್ತೇವೆ ಎಂದೂ ಹೇಳಿದರು.

ಹೆಚ್ಚುವರಿ ಎಸ್ಪಿ ಎಂ.ಜಗದೀಶ, ಡಿಎಸ್‌ ಪಿ ಗಣೇಶ ಕೆ.ಎಲ್‌.,ಸಿಪಿಐ ಶಶಿಕಾಂತ ವರ್ಮಾ ಇತರರು ಇದ್ದರು.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.