ಅಜ್ಜನಿಂದಲೇ ಮೊಮ್ಮಗನ ಕಿಡ್ನಾಪ್‌ : ಎಸ್ಪಿ ಪನ್ನೇಕರ್‌


Team Udayavani, Aug 23, 2022, 4:58 PM IST

22

ಸಾಂದರ್ಭಿಕ ಚಿತ್ರ

ಕಾರವಾರ: ಜಿಲ್ಲೆಯ ಭಟ್ಕಳದಲ್ಲಿ ಶನಿವಾರ ಸಂಜೆ ನಡೆದಿದ್ದ ಬಾಲಕನ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ. ಹಣದ ವಿಚಾರವಾಗಿ ಕೌಟುಂಬಿಕ ಕಲಹದಿಂದಾಗಿ ಮೊಮ್ಮಗನನ್ನೇ ಅಜ್ಜ ಅಪಹರಿಸಿದ್ದ ಎನ್ನುವುದು ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ ಎಂದು ಎಸ್ಪಿ ಡಾ| ಸುಮನ್‌ ಪನ್ನೇಕರ್‌ ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ. 20ರಂದು ಸಂಜೆ ಅಂಗಡಿಗೆ ತೆರಳಿದ್ದ ಭಟ್ಕಳ ಆಜಾದ್‌ ನಗರದ ಎಂಟು ವರ್ಷದ ಬಾಲಕನೊಬ್ಬನನ್ನು ಅಪಹರಣ ಮಾಡಲಾಗಿತ್ತು. ಈ ಸಂಬಂಧ ಭಟ್ಕಳ ನಗರ ಠಾಣೆಯಲ್ಲಿ ಮಧ್ಯರಾತ್ರಿ ಪ್ರಕರಣ ಸಹ ದಾಖಲಾಗಿತ್ತು. ಬಾಲಕನ ಹುಡುಕಾಟ ನಡೆಸಿದ್ದ ಪೊಲೀಸರು ಸುರಕ್ಷಿತವಾಗಿ ಕರೆತರಲು ಐದು ತಂಡ ರಚಿಸಿದ್ದರು. ಸಿಸಿ ಟಿವಿ ದೃಶ್ಯಾವಳಿಯ ನೆರವಿನಿಂದ ಹಾಗೂ ಕುಟುಂಬದವರನ್ನು ವಿಚಾರಣೆ ನಡೆಸಿದಾಗ ಹಣದ ವ್ಯವಹಾರವೇ ಅಪಹರಣಕ್ಕೆ ಕಾರಣ ಎಂಬುದು ತನಿಖೆಯಲ್ಲಿ ಕಂಡು ಬಂದಿದೆ.

ಬಾಲಕನನ್ನು ಮಾರುತಿ ಸುಜುಕಿ ಇಕೋ ವಾಹನದಲ್ಲಿ ಆಜಾದ್‌ ನಗರದಿಂದ ಅಪಹರಿಸಿ, ಬಳಿಕ ಮತ್ತೂಂದು ವಾಹನ ಬಳಸಿ ಬಾಲಕನನ್ನು ಗೋವಾಕ್ಕೆ ಕರೆದೊಯ್ಯಲಾಗಿತ್ತು. ಸೋಮವಾರ ಬೆಳಗ್ಗೆ ಅಲ್ಲಿನ ಕಲಂಗುಟ್‌ ಬೀಚ್‌ನ ಕೋಣರಯೊಂದರಲ್ಲಿ ಒಬ್ಬ ಆರೋಪಿ ಅನೀಶ್‌ ಎಂಬಾತನೊಂದಿಗೆ ಪತ್ತೆಯಾಗಿದ್ದಾನೆ.

ಬಾಲಕನ ತಾಯಿಯ ಸೋದರ ಮಾವ (ಬಾಲಕನ ಅಜ್ಜ), ಸೌದಿ ಅರೇಬಿಯಾದಲ್ಲಿರುವ ಇನಾಯತ್‌ ಉಲ್ಲಾ ಎಂಬಾತನ ಸೂಚನೆಯ ಮೇರೆಗೆ ಈ ಅಪಹರಣ ನಡೆದಿದೆ. ಐವರು ಆರೋಪಿಗಳು ಇದರಲ್ಲಿ ಭಾಗಿಯಾಗಿದ್ದರು ಎಂಬುದು ತಿಳಿದು ಬಂದಿದೆ.

ಈ ಸಂಬಂಧ ಒಬ್ಬನನ್ನು ಬಂಧಿಸಲಾಗಿದ್ದು, ನಾಲ್ವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಎಸ್ಪಿ ಸುಮನ್‌ ತಿಳಿಸಿದರು. ಬಾಲಕನ ತಂದೆ ಮತ್ತು ಅಜ್ಜನಿಗೆ ಹಣದ ವ್ಯವಹಾರವಿತ್ತು. ಈ ಕಾರಣಕ್ಕಾಗಿ ಬಾಲಕನನ್ನು ಅಪಹರಣ ಮಾಡಿಸಲಾಗಿತ್ತು.

ಬಾಲಕನಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಸುರಕ್ಷಿತವಾಗಿ ಕರೆತರಲಾಗಿದೆ ಎಂದ ಅವರು, ಈ ಅಪಹರಣದಿಂದ ಭಟ್ಕಳದ ಜನತೆ ಅಥವಾ ಜಿಲ್ಲೆಯ ಜನತೆ ಭಯಪಡುವಂಥದ್ದೇನೂ ಇಲ್ಲ. ಇದು ಕೌಟುಂಬಿಕ ಕಲಹದಿಂದ ನಡೆದ ಅಪಹರಣವಷ್ಟೇ ಎಂದು ಎಸ್ಪಿ ಹೇಳಿದರು. ಅಪಹರಣದ ಪ್ರಕರಣದಲ್ಲಿ ನಾಲ್ವರ ಹುಡುಕಾಟ ನಡೆದಿದೆ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.