![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 7, 2024, 6:50 PM IST
ಕಾರವಾರ : ಬನವಾಸಿಯ ಗುಡ್ನಾಪುರದಲ್ಲಿನ ಐತಿಹಾಸಿಕ ರಾಣಿ ಮನೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿ ಪ್ರವಾಸಿ ಆಕರ್ಷಣೀಯ ಸ್ಥಳವಾಗಿ ಮಾಡುವಂತೆ ಪ್ರಾಚ್ಯ ವಸ್ತು ಸಂರಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು.
ಅವರು ಬುಧವಾರ ಬನವಾಸಿಗೆ ಭೇಟಿ ನೀಡಿ, ಗುಡ್ನಾಪುರದಲ್ಲಿನ ರಾಣಿ ಮನೆಯ ಸ್ಥಳ ವೀಕ್ಷಿಸಿ ಮಾತನಾಡಿದರು.ಕದಂಬ ವಂಶದ ಮಹಾರಾಜರು ವಸಂತ ಕಾಲದಲ್ಲಿ ತಮ್ಮ ಕುಟುಂಬ ಸಮೇತ ಇಲ್ಲಿಗೆ ಆಗಮಿಸಿ ತಂಗುತ್ತಿದ್ದ ಈ ಸ್ಥಳವು ಐತಿಹಾಸಿಕ ಹಿನ್ನಲೆ ಹೊಂದಿದ್ದು, ಪ್ರಸ್ತುತ ಇಲ್ಲಿರುವ ಅವಶೇಷಗಳು ರಾಣಿಮನೆಯ ವೈಭವಕ್ಕೆ ಸಾಕ್ಷಿಯಾಗಿವೆ. ಈ ಸ್ಥಳದ ಇತಿಹಾಸವನ್ನು ಸಾರ್ವಜನಿಕರಿಗೆ ತಿಳಿಸುವುದು ಅತ್ಯಂತ ಅಗತ್ಯವಿದೆ ಎಂದರು.
ಪ್ರಸ್ತುತ ಇಲ್ಲಿರುವ ರಾಣಿ ಮನೆಯ ಅವಶೇಷಗಳಿಗೆ ಯಾವುದೇ ಹಾನಿಯಾಗದಂತೆ ಅತ್ಯಂತ ಸೂಕ್ಷ ಮತ್ತು ಎಚ್ಚರಿಕೆಯಿಂದ ಈ ಸ್ಥಳದಲ್ಲಿನ ಪುರಾತನ ಆವರಣ ಗೋಡೆಗಳ ದುರಸ್ತಿ, ಆವರಣದಲ್ಲಿನ ಗಿಡಗಂಟೆಗಳನ್ನು ತೆಗೆದು ಸ್ವಚ್ಛಗೊಳಿಸುವಂತೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಮುಕ್ತಾಯಗೊಳಿಸಿ ಸಾರ್ವಜನಿಕ ವೀಕ್ಷಣೆಗೆ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ಈ ಸ್ಥಳದ ಐತಿಹಾಸಿಕ ಹಿನ್ನೆಲೆ ಕುರಿತಂತೆ ಪ್ರವೇಶದ್ವಾರದಲ್ಲಿ ವಿವರವಾದ ಮಾಹಿತಿ ಫಲಕ ಅಳವಡಿಸಿ, ಶಿಲಾ ಶಾಸನಗಳನ್ನು ಸೂಕ್ತ ಸ್ಥಳದಲ್ಲಿ ಸಂರಕ್ಷಣೆ ಮಾಡುವಂತೆ ಹಾಗೂ ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯಗಳ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ಈ ಬಾರಿಯ ಕದಂಬೋತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶಗಳನ್ನು ನೀಡುವಂತೆ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಉಪ ವಿಭಾಗಾಧಿಕಾರಿ ಅಪರ್ಣಾ ರಮೇಶ್, ತಹಶೀಲ್ದಾರ್ ಶ್ರೀಧರ್, ಪ್ರಾಚ್ಯ ವಸ್ತು ಸಂರಕ್ಷಣಾ ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.