ಹಳಿಯಾಳ: ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ನಿರೀಕ್ಷೆಯಲ್ಲಿ ಕೃಷಿಕ

ಮೆಕ್ಕೆಜೋಳಕ್ಕೆ 400 ರಿಂದ 500 ರೂ ದರ ಹೆಚ್ಚು ದೊರೆಯಬಹುದು

Team Udayavani, Sep 25, 2024, 6:09 PM IST

ಹಳಿಯಾಳ: ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ನಿರೀಕ್ಷೆಯಲ್ಲಿ ಕೃಷಿಕ

ಹಳಿಯಾಳ: ವಾಣಿಜ್ಯ ಕಬ್ಬಿನ ಬೆಳೆಗೆ ಪರ್ಯಾಯವಾಗಿ ಕ್ಷೇತ್ರದಲ್ಲಿ ಬೆಳೆಯಲಾಗಿರುವ ಮೆಕ್ಕೆಜೋಳ ಕಟಾವು ಕಾರ್ಯ ಆರಂಭವಾಗಿದೆ. ಆದರೆ ಪ್ರಸ್ತುತ ಜುಲೈನಲ್ಲಿ ಸುರಿದ ಭಾರಿ ಮಳೆಯ ಪರಿಣಾಮ ಇಳುವರಿ ಕುಂಠಿತವಾಗಿದೆ. ಜೂನ್‌ನಲ್ಲಿ ಭೂಮಿ ಹದಗೊಳಿಸಿ ಬಿತ್ತಲಾದ  ಮೆಕ್ಕೆಜೋಳ ಮೊದಲ ಹಂತದಲ್ಲಿ ಉತ್ತಮವಾಗಿ ಬೆಳೆದಿತ್ತು. ತದ ಬಳಿಕ ಜುಲೈನಲ್ಲಿ ಮೆಕ್ಕೆಜೋಳ ಹಂತ ಹಂತವಾಗಿ ತೆನೆ ಒಡೆದು ಕಾಳು ಕಟ್ಟುತ್ತದೆ. ಆದರೆ ಈ ಸಂದರ್ಭದಲ್ಲಿ ಭಾರಿ ಮಳೆಯಾದ ಪರಿಣಾಮ ಕಳೆ ನಿಯಂತ್ರಣ ಸಾಧ್ಯವಾಗಲಿಲ್ಲ. ಇದರಿಂದಾಗಿ ಇಳುವರಿ ಕುಂಠಿತವಾಗಿದೆ ಎನ್ನುತ್ತಾರೆ ಕೃಷಿ ಇಲಾಖೆ ಅಧಿಕಾರಿಗಳು.

ಸದ್ಯ ಮಳೆರಾಯ ಕೊಂಚ ಬಿಡುವು ನೀಡಿರುವುದರಿಂದ ಬೆಳೆ ಕಟಾವು ಮಾಡಿ ರಾಶಿ ಮಾಡುವ ಕೆಲಸದಲ್ಲಿ ರೈತರು ನಿರತರಾಗಿದ್ದಾರೆ. ಹಳಿಯಾಳ ಹಾಗೂ ದಾಂಡೇಲಿ ಸೇರಿದಂತೆ ಪ್ರಸ್ತುತ ವರ್ಷ 3500 ಹೆಕ್ಟೇರ್‌ ಅಂದರೆ 8750 ಎಕ್ಕರೆ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. 110 ರಿಂದ 130 ದಿನಗಳ ಒಳಗೆ ಮೆಕ್ಕೆಜೋಳ ಬೆಳೆಯಲಾಗುತ್ತದೆ. ಈ ಭಾಗದಲ್ಲಿ ಪ್ರತಿ ಎಕರೆ 12 ರಿಂದ 15 ಕ್ವಿಂಟಲ್‌ ಮೆಕ್ಕೆಜೋಳ ಬೆಳೆಯಲಾಗುತ್ತದೆ.

ಆದರೆ ಕಳೆ ನಿಯಂತ್ರಣದ ಕೊರತೆಯಿಂದಾಗಿ ಪ್ರಸ್ತುತ ವರ್ಷದಲ್ಲಿ ಇಳುವರಿ ಕುಂಟಿತಗೊಂಡಿದ್ದು, ಪ್ರತಿ ಎಕರೆಗೆ 10 ರಿಂದ 12 ಕ್ವಿಂಟಲ್‌ ಮೆಕ್ಕೆಜೋಳ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಕಟಾವು ಕಾರ್ಯ ಮಾತ್ರ ಆರಂಭಗೊಂಡಿದ್ದು,
ಖರೀದಿ ಕೇಂದ್ರಗಳು ಇನ್ನೂ ಆರಂಭವಾಗಿಲ್ಲ.

ಕಟಾವು ಮುಗಿದ ನಂತರ ಕನಿಷ್ಠ ಎಂಟು ದಿನ ಮೆಕ್ಕೆಜೋಳವನ್ನು ಬಿಸಿಲಿನಲ್ಲಿ ಒಣಗಿಸಿ ತದನಂತರ ಮಾರುಕಟ್ಟೆಗೆ ಸಾಗಿಸಲಾಗುತ್ತದೆ. ಪ್ರಸ್ತುತ ವರ್ಷದಲ್ಲಿ ಪ್ರತಿ ಕ್ವಿಂಟಾಲ್‌ ಮೆಕ್ಕೆಜೋಳಕ್ಕೆ 2500 ರಿಂದ 2600 ದರ ನಿಗದಿ ಆಗಬಹುದು ಎಂದು ವ್ಯಾಪಾರಸ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷದ ಬೆಲೆಗೆ ಹೋಲಿಸಿದರೆ ಪ್ರಸ್ತುತ ವರ್ಷದಲ್ಲಿ ಪ್ರತಿ ಕ್ವಿಂಟಲ್‌ ಮೆಕ್ಕೆಜೋಳಕ್ಕೆ 400 ರಿಂದ 500 ರೂ ದರ ಹೆಚ್ಚು ದೊರೆಯಬಹುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪಿ.ಐ
ಮಾನೆ ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್‌ ಮೂರನೇ ವಾರದ ನಂತರ ಆರಂಭ ವಾಗುವ ಮೆಕ್ಕೆಜೋಳ ಕಟಾವು ಕಾರ್ಯ ಅಕ್ಟೋಬರ್‌ ಅಂತ್ಯದವರೆಗೆ ಜರುಗುತ್ತದೆ. ಒಂದು ವೇಳೆ ಮಳೆ ಸುರಿದರೆ ಬಿಸಿಲಿನ ಕೊರತೆಯಿಂದಾಗಿ ಮೆಕ್ಕೆಜೋಳ ಒಣಗಿಸಲು ಸಾಧ್ಯವಾಗುವುದಿಲ್ಲ. ಇದರಿಂದ ನವೆಂಬರ್‌ವರೆಗೂ ಕೆಲ ಸಂದರ್ಭ ಮೆಕ್ಕೆಜೋಳ ಕಟಾವು ಕಾರ್ಯವನ್ನು ರೈತರು ಮುಂದುವರಿಸುತ್ತಾರೆ.

ಒಣಗಿಸಲು ರಸ್ತೆಯೇ ಗತಿ
ಬೆಳೆ ಕಟಾವು ಮಾಡಿದ ನಂತರ ಸುಮಾರು ಒಂದು ವಾರ ಸಂಪೂರ್ಣ ಬಿಸಿಲಿನಲ್ಲಿ ಒಣಗಿಸಬೇಕಾಗುತ್ತದೆ. ಆದರೆ ಬಹುತೇಕ
ಗ್ರಾಮಗಳಲ್ಲಿ ಮೆಕ್ಕೆಜೋಳ ಒಣಗಿಸಲು ಸೂಕ್ತ ಪ್ರಾಂಗಣವಿಲ್ಲದ ಕಾರಣ ರಸ್ತೆ ಮೇಲೆ ಒಣಗಿಸಿ   ತದನಂತರ ಮಾರುಕಟ್ಟೆಗೆ ಸಾಗಿಸಬೇಕಾದ ಅನಿವಾರ್ಯತೆ ರೈತ ವರ್ಗಕ್ಕಿದೆ.

ತೂಕದಲ್ಲಿ ಮೋಸ!
ರೈತರು ಕಷ್ಟಪಟ್ಟು ಬೆಳೆದ ಬೆಳೆಯನ್ನು ದಲ್ಲಾಳಿಗಳು ಖರೀದಿಸಿ ವಿವಿಧ ಸೀಡ್ಸ್‌ ತಯಾರಿಕಾ ಕಂಪೆನಿಗಳಿಗೆ ಮಾರಾಟ ಮಾಡುತ್ತಾರೆ. ಆದರೆ ದಲ್ಲಾಳಿಗಳು ರೈತರ ಕಣ್ಣಿಗೆ ಮಣ್ಣೆರಚಿ ತೂಕದಲ್ಲಿ ಮೋಸ ಮಾಡುತ್ತಾರೆ. ಇದರಿಂದಾಗಿ ರೈತರಿಗೆ ನಷ್ಟ
ಉಂಟಾಗುತ್ತದೆ ಎಂದು ಪ್ರಗತಿಪರ ಕೃಷಿಕ ಪುಂಡಲಿಕ ಗೋಡಿಮನಿ ಬೇಸರ ವ್ಯಕ್ತಪಡಿಸಿದ್ದಾರೆ.

■ ವಿನಾಯಕ ಮೇಟಿ

ಟಾಪ್ ನ್ಯೂಸ್

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli:ದೂರು ನೀಡಿ ಎರಡುವರೆ ಗಂಟೆಯೊಳಗಡೆ ನಾಪತ್ತೆಯಾದ ಮಹಿಳೆಯನ್ನು ಪತ್ತೆ ಹಚ್ಚಿದ ಪೊಲೀಸರು

Dandeli:ದೂರು ನೀಡಿ ಎರಡುವರೆ ಗಂಟೆಯೊಳಗಡೆ ನಾಪತ್ತೆಯಾದ ಮಹಿಳೆಯನ್ನು ಪತ್ತೆ ಹಚ್ಚಿದ ಪೊಲೀಸರು

6-sirsi

BJP ರಾಜ್ಯಪಾಲರನ್ನು ಅಸ್ತ್ರ ಮಾಡಿಕೊಂಡು ಮುಖ್ಯಮಂತ್ರಿ ವಿರುದ್ಧ ರಣತಂತ್ರ ರೂಪಿಸಿದೆ

ಜೋಯಿಡಾ: ಕಾಳಿ ನದಿಯಲ್ಲಿ ರಾಫ್ಟಿಂಗ್‌-ಜಲಸಾಹಸ ಕ್ರೀಡೆಗೆ ಚಾಲನೆ‌

ಜೋಯಿಡಾ: ಕಾಳಿ ನದಿಯಲ್ಲಿ ರಾಫ್ಟಿಂಗ್‌-ಜಲಸಾಹಸ ಕ್ರೀಡೆಗೆ ಚಾಲನೆ‌

shShiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

Shiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

death

Mulur: ಮಾನಸಿಕ ಖನ್ನತೆಯಿಂದ ಮನನೊಂದು ಆತ್ಮಹತ್ಯೆ

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

16

Moodubelle: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

15

Kattingeri: ಕಾಲೇಜು ವಿದ್ಯಾರ್ಥಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.