ಜೆ.ಡಿ.ಎಸ್ ಮುಗಿಸಲು ಕಾಂಗ್ರೆಸ್ ಮಾಡಿದ ಅಪಪ್ರಚಾರವೇ ಇಂದು ಬಿಜೆಪಿ ಅಧಿಕಾರಕ್ಕೆ ಬರಲು ಕಾರಣ


Team Udayavani, Feb 9, 2023, 9:48 PM IST

ಜೆ.ಡಿ.ಎಸ್ ಮುಗಿಸಲು ಕಾಂಗ್ರೆಸ್ ಮಾಡಿದ ಅಪಪ್ರಚಾರವೇ ಇಂದು ಬಿಜೆಪಿ ಅಧಿಕಾರಕ್ಕೆ ಬರಲು ಕಾರಣ

ಭಟ್ಕಳ: ರಾಜ್ಯದಲ್ಲಿ ಜೆ.ಡಿ.ಎಸ್. ಮುಗಿಸಬೇಕು ಎನ್ನುವ ದುರಾಸೆಯಿಂದ ಕಾಂಗ್ರೆಸ್ ಪಕ್ಷ ಮಾಡಿದ ಅಪಪ್ರಚಾರವೇ ಇಂದು ರಾಜ್ಯದಲ್ಲಿ ಅತ್ಯಂತ ಕೆಟ್ಟ ಬಿ.ಜೆ.ಪಿ. ಸರಕಾರ ಆಡಳಿತ ಮಾಡಲು ಕಾರಣವಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಅವರು ಗುರುವಾರ ರಾತ್ರಿ ಪಟ್ಟಣದ ರಿಕ್ಷಾ ಚಾಲಕರ ಮಾಲಕರ ಗಣೇಶೋತ್ಸವ ಮೈದಾನದಲ್ಲಿ ಪಂಚರತ್ನ ಯಾತ್ರೆಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಕಾಂಗ್ರೆಸ್ ಜೆ.ಡಿ.ಎಸ್. ಮುಗಿಸಲು ಹೋಗಿ ರಾಜ್ಯದಲ್ಲಿ ಬಿ.ಜೆ.ಪಿ. ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುವಂತೆ ಮಾಡಿದೆ. ತಾಕತ್ತಿದ್ದರೆ ಬಿ.ಜೆ.ಪಿ.ಯನ್ನು ನೇರವಾಗಿ ಎದುರಿಸಿ ಎಂದು ಸವಾಲು ಹಾಕಿದ ಅವರು ಕಾಂಗ್ರೆಸ್ ಪಕ್ಷ ಜೆ.ಡಿ.ಎಸ್.ಗೆ ಮುಸ್ಲಿಮರು ಮತ ನೀಡಿದರೆ ಅದು ಬಿಜೆಪಿಗೆ ಮತ ನೀಡಿದಂತೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ತಾವು ಒಮ್ಮೆ ಅನಿವಾರ್ಯವಾಗಿ ಬಿ.ಜೆ.ಪಿ. ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದು, ತಮ್ಮ ಪಕ್ಷ ಮುಸ್ಲೀಮರ ಪರವಾಗಿಯೇ ಇದೆ ಎಂದು ಹೇಳಿದರು.

ಕಳೆದ 14 ತಿಂಗಳು ಮುಖ್ಯ ಮಂತ್ರಿಯಾಗಿದ್ದಾಗ ಬಿ.ಜೆ.ಪಿ. ಪಕ್ಷವನ್ನು ಹಿಡತದಲ್ಲಿಟ್ಟುಕೊಂಡಿದ್ದರೂ ಸಹ, ಕಾಂಗ್ರೆಸ್‌ನ ವಿರೋಧ ಪಕ್ಷದ ನಾಯಕ (ಸಿದ್ದರಾಮಯ್ಯ ಅವರ ಹೆಸರು ಹೇಳದೇ) ಮುಂದಿನ ಮುಖ್ಯ ಆಗಬೇಕೆನ್ನುವ ಆಶೆಯಿಂದ ಬಿ.ಜೆ.ಪಿ.ಗೆ ಅಧಿಕಾರ ಹಿಡಿಯಲು ಸಹಾಯ ಮಾಡಿದರು ಎಂದು ಕಟುಕಿದರು.

ಪದೇ ಪದೇ ಮುಸ್ಲೀಮರನ್ನು ಓಲೈಸಿದ ಕುಮಾರಸ್ವಾಮಿ ಮುಂದಿನ ದಿನಗಳಲ್ಲಿ ಭಟ್ಕಳ ಕ್ಷೇತ್ರದಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಮುಸ್ಲೀಮರು ತಮ್ಮದೇ ಅಭ್ಯರ್ಥಿಯನ್ನು ನಿಲ್ಲಿಸಿ ಗೆಲ್ಲಿಸಬೇಕು ಎಂದು ಪರೋಕ್ಷಗಾಗಿ ಇನಾಯತ್‌ವುಲ್ಲಾ ಶಾಬಂದ್ರಿಯವರನ್ನ ಜೆ.ಡಿ.ಎಸ್. ಅಭ್ಯರ್ಥಿಯನ್ನಾಗಿಸಲು ತಂಜೀ ಸಂಸ್ಥೆಗೆ ಆಸೆ ಹುಟ್ಟಿಸುವ ಕಾರ್ಯ ಮಾಡಿದರು. ಕರಾವಳೀಯಲ್ಲಿನ್ ದರ್ಮ ದಂಗಲ್ ಕೊನೆಗೊಳಿಸಲು ಮುಸ್ಲೀಮ್ ಅಭ್ಯರ್ಥಿಯನ್ನೇ ಆರಿಸಿ ತರುವಂತೆಯೂ ಅವರು ಕೋರಿದರು. ತಮ್ಮ ಭಾಷಣದುದ್ದಕ್ಕೂ ಮುಸ್ಲೀಮರನ್ನೇ ಓಲೈಕೆ ಮಾಡಿದ ಕುಮಾರಸ್ವಾಮಿಯವರ ಭಾಷಣದಿಂದ ಜೆ.ಡಿ.ಎಸ್. ನಲ್ಲಿಯೇ ಇರುವ ಅನೇಕ ಹಿಂದೂ ಮುಖಂಡರೂ ಅಸಾಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಅಪಪ್ರಚಾರಕ್ಕೆ ಯಾವುದೇ ಕಾರಣಕ್ಕೂ ಮುಸ್ಲೀಮರು ಕಿವಿಗೊಡಬಾರದು ಎಂದ ಅವರು ಬಿಜೆಪಿಯವರಿಗೆ ಜನತೆ ವಿದ್ಯಾವಂತರಾಗುವುದು ಬೇಡವಾಗಿದೆ. ಜನತೆಯನ್ನು ಮತ್ತೆ ಮನುಕುಲಕ್ಕೆ ಕರೆದುಕೊಂಡು ಹೋಗುವುದು ಬೇಕಾಗಿದೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಪ್ರತಿ ಗ್ರಾಮ ಪಂಚಾಯತ್‌ಗೊಂದು 30 ಹಾಸಿಗೆ ಸುಸಜ್ಜಿತ ಆಸ್ಪತ್ರೆ ನಿರ್ಮಿಸುತ್ತೇವೆ. 3 ವೈದ್ಯರು, 30 ಸಿಬ್ಬಂದಿಗಳನ್ನು ಕೊಡುತ್ತೇನೆ. ಸಂಧ್ಯಾ ಸುರಕ್ಷಾ ಯೋಜನೆಯ ಮೊತ್ತವನ್ನು 5 ಸಾವಿರಕ್ಕೆ ಮತ್ತು ವಿಧವಾ ವೇತನವನ್ನು 2500ಕ್ಕೆ ಏರಿಕೆ ಮಾಡಲಾಗುವುದು ಎಂದರು.

ಜೆಡಿಎಸ್ ಮುಖಂಡ ಇನಾಯತುಲ್ಲಾ ಶಾಬಂದ್ರಿ ಪ್ರಸ್ತಾವಿಕ ಮಾತನಾಡಿ, ಭಟ್ಕಳದ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡಿದರು. ಕುಮಟಾದ ಜೆಡಿಎಸ್ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ಮಾತನಾಡಿದರು. ವೇದಿಕೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ, ಮಾಜಿ ಎಮ್ಮೆಲ್ಸಿ ರಮೇಶ ಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ರಾಜವರ್ಧನ್ ನಾಯ್ಕ, ಮುಖಂಡರಾದ ಗಣಪತಿ ಭಟ್ಟ, ಅಲ್ತಾಪ್ ಖರೂರಿ, ಕೃಷ್ಣಾನಂದ ಪೈ, ಪಾಂಡುರಂಗ ನಾಯ್ಕ, ಮಂಜು ಗೊಂಡ, ವೆಂಕಟೇಶ ನಾಯ್ಕ, ದೇವಯ್ಯ ನಾಯ್ಕ ಮುಂತಾದವರಿದ್ದರು. ಕುಂದಾಪುರ ಜೆಡಿಎಸ್ ಕ್ಷೇತ್ರಾಧ್ಯಕ್ಷ ಹುಸೇನ್ ಹೈಕಾಡಿ ನಿರೂಪಿಸಿದರು.

ಕುಮಾರಸ್ವಾಮಿ ದರುಶನದ ವೇಳೆ ಹನುಮಂತನಿಂದ ಪ್ರಸಾದ !
ಭಟ್ಕಳದಲ್ಲಿನ ಜೆಡಿಎಸ್ ಸಮಾವೇಶಕ್ಕೆ ಬರುವ ಪೂರ್ವದಲ್ಲಿ ಕುಮಾರಸ್ವಾಮಿಯವರು ಶಿರಾಲಿಯ ಸಾರದಹೊಳೆ ಹಳೇಕೋಟೆ ಹನಮಂತ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಹನುಮಂತನ ದರುಶನವನ್ನು ಪಡೆಯುತ್ತಿರುವಾಗಲೇ ದೇವರು ಪ್ರಸಾದ ನೀಡಿ ಹರಿಸಿರುವುದು ವಿಶೇಷವಾಗಿದ್ದು ಇದುವೇ ಭಟ್ಕಳ ಕ್ಷೇತ್ರಕ್ಕೆ ಶುಭ ಶಕುನ ಎಂದು ಹಲವರು ಮಾತನಾಡಿಕೊಂಡರು. ಕುಮಾರಸ್ವಾಮಿಯವರಿಗೂ ವಿಷಯ ತಿಳಿಸಿ ಪಂಚರತ್ನ ಯಾತ್ರೆಯ ಯಶಸ್ಸು ದೊರೆಯುವುದಕ್ಕೆ ಮುನ್ಸೂಚನೆ ಎಂದು ಹೇಳಿದರೆನ್ನಲಾಗಿದೆ.

ಪಂಚರತ್ನ ಯಾತ್ರೆಯ ಮೂಲಕ ಹಳ್ಳಿ ಹಳ್ಳಿಗೂ ಭೇಟಿ ನೀಡಿದ್ದೇನೆ. ಭಟ್ಕಳಕ್ಕೆ ಇನಾಯತ್‌ವುಲ್ಲಾ ಅವರ ಒತ್ತಾಯಕ್ಕೆ ಬಂದಿದ್ದು ಇಡೀ ನನ್ನ ಯಾತ್ರೆಯಲ್ಲಿ ಅತ್ಯಂತ ಕಡಿಮೆ ಜನ ಸೇರಿದ್ದು ಭಟ್ಕಳದಲ್ಲಿ ಮಾತ್ರ ಎಂದು ತಮ್ಮ ಅಸಾಮಾಧಾನವನ್ನು ಕುಮಾರಸ್ವಾಮಿ ಹೊರ ಹಾಕಿದರು. ಸಭೆಯಲ್ಲಿ ತಮ್ಮ ಭಾಷಣದುದ್ದಕ್ಕೂ ಅಲ್ಪ ಸಂಖ್ಯಾತರ ಕುರಿತೇ ಮಾತನಾಡಿದ್ದ ಕುಮಾರಸ್ವಾಮಿ ಸಭೆಯಲ್ಲಿ ಅಲ್ಪ ಸಂಖ್ಯಾತರೇ ಕೇವಲ ಕೆಲವು ಸಂಖ್ಯೆಲ್ಲಿದ್ದುದು ವಿಶೆಷವಾಗಿತ್ತು.

ಟಾಪ್ ನ್ಯೂಸ್

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

CM-Meeting

Bumper Gift: ಬಡವರ 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂಪಾಯಿ

ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಮೋದಿಗೆ ಅಭಿನಂದನೆ

Karnataka ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಮೋದಿಗೆ ಅಭಿನಂದನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

4-yadagiri

Narayanapur: ವಿದ್ಯುತ್‌ ತಂತಿ ತಗುಲಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.