Rain: ಭಾರೀ ಮಳೆಯಿಂದ ಶಿರೂರಿನಲ್ಲಿ ಗುಡ್ಡ ಕುಸಿತ; 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ


Team Udayavani, Jul 16, 2024, 11:14 AM IST

Rain: ಭಾರೀ ಮಳೆಯಿಂದ ಶಿರೂರಿನಲ್ಲಿ ಗುಡ್ಡ ಕುಸಿತ; 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಅಂಕೋಲಾ: ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಪರಿಣಾಮ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಂಗಳವಾರ(ಜು.16ರಂದು) ಭೀಕರ ಮಳೆಯಿಂದ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಮಣ್ಣಿನಡಿಯಲ್ಲಿ ಒಂದೇ ಕುಟುಂಬದ ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹೆದ್ದಾರಿ ಪಕ್ಕದಲ್ಲಿದ್ದ ಮನೆಯಲ್ಲಿನ ಕುಟುಂಬದ ಸದಸ್ಯರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.

ಎರಡು ಕುಟುಂಬದ ಒಟ್ಟು ಒಂಬತ್ತು ಮಂದಿ ಮಣ್ಣಿನಡಿ ಸಿಲುಕೊಂಡಿದ್ದಾರೆ ಎನ್ನಲಾಗುತ್ತಿದೆ. ಲಕ್ಷ್ಮಣ ನಾಯ್ಕ (47), ಶಾಂತಿ ನಾಯ್ಕ (36), ರೋಶನ್ (11), ಅವಾಂತಿಕಾ (6), ಜಗನ್ನಾಥ(55 ) ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಗುಡ್ಡ ಕುಸಿತಿದಿಂದಾಗಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಕಾರವಾರ ಗೋವಾ ಅಂಕೋಲಾದಿಂದ ಕೇರಳ, ಮಂಗಳೂರು, ಕುಮಟಾ ಮತ್ತಿತರ ಭಾಗಗಳಿಗೆ ತೆರಳುವವರು ಹೆದ್ದಾರಿಯಲ್ಲಿ ಕಾಲ ಕಳೆಯುವಂತಾಗಿದೆ.

ಚತುಷ್ಪಥ ಹೆದ್ದಾರಿಗಾಗಿ ಗುಡ್ಡವನ್ನ ಕೊರೆಯಲಾಗಿತ್ತು ಈ ಗುಡ್ಡವು ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಭಾರಿ ಪ್ರಮಾಣದಲ್ಲಿ ಕುಸಿತವಾಗಿರುವುದರಿಂದ ಹೆದ್ದಾರಿಯ ತುಂಬಾ ಮಣ್ಣು ಕಲ್ಲುಗಳು ತುಂಬಿ ಸಂಚರಿಸಲು ಆಗದ ಹಾಗೆ ಮಾರ್ಪಟ್ಟಿದೆ.

ಹೆದ್ದಾರಿಯಲ್ಲಿ ನಿಂತಿರುವ ಅನೇಕ ವಾಹನಗಳಿಗೂ ಹಾನಿ ಉಂಟಾಗಿದ್ದು ಅಲ್ಲಿ ನಿಂತಿರುವ ಒಂದು ಗ್ಯಾಸ್ ಟ್ಯಾಂಕರ್ ಪಕ್ಕದಲ್ಲಿರುವ ಗಂಗಾವಳಿ ನದಿಗೆ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಅದರಲ್ಲಿದ್ದ ಚಾಲಕ ಕ್ಲೀನರ್ ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.

ಈಗಾಗಲೇ ಅಂಕೋಲಾ ತಾಲೂಕು ಆಡಳಿತ ಅಗ್ನಿಶಾಮಕದಳ ಪೊಲೀಸ್ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು ಮಣ್ಣಿನ ಅಡಿಯಲ್ಲಿ ಎಷ್ಟು ಜನರು ಸಿಲುಕಿಕೊಂಡಿದ್ದಾರೆ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. ರಸ್ತೆಯ ಮೇಲೆ ಬಿದ್ದಿರುವ ಮಣ್ಣನ್ನು ತೆರವು ಮಾಡಲು 24 ಗಂಟೆಗೂ ಅಧಿಕ ಕಾಲ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಉಪಾಹಾರ ಕೂಟ ನಿಗದಿ ಮಾಡಿ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

Congress ಉಪಾಹಾರ ಕೂಟ ನಿಗದಿ ಮಾಡಿ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

Krishna Byre Gowda “ದಕ್ಷಿಣ ರಾಜ್ಯಗಳು ಜಿಎಸ್‌ಟಿ ಪಾಲಿಗೆ ಧ್ವನಿ ಎತ್ತಬೇಕಿದೆ’

Krishna Byre Gowda “ದಕ್ಷಿಣ ರಾಜ್ಯಗಳು ಜಿಎಸ್‌ಟಿ ಪಾಲಿಗೆ ಧ್ವನಿ ಎತ್ತಬೇಕಿದೆ’

Renukaswamy Case ನಟ ದರ್ಶನ್‌ ಗ್ಯಾಂಗ್‌ ನ್ಯಾಯಾಂಗ ಬಂಧನ ವಿಸ್ತರಣೆ

Renukaswamy Case ನಟ ದರ್ಶನ್‌ ಗ್ಯಾಂಗ್‌ ನ್ಯಾಯಾಂಗ ಬಂಧನ ವಿಸ್ತರಣೆ

gNagamangala ನಡೆದಿದ್ದು ಸಣ್ಣ ಗಲಾಟೆ: ಗೃಹ ಸಚಿವ ಪರಮೇಶ್ವರ್‌

Mandya; ನಾಗಮಂಗಲದಲ್ಲಿ ನಡೆದಿದ್ದು ಸಣ್ಣ ಗಲಾಟೆ: ಗೃಹ ಸಚಿವ ಪರಮೇಶ್ವರ್‌

Second PUC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ

Second PUC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Court-1

Kasaragod: ಕೊ*ಲೆ ಪ್ರಕರಣ: ವಿಚಾರಣೆ ಪೂರ್ಣ; ಶೀಘ್ರ ತೀರ್ಪು ಪ್ರಕಟ ನಿರೀಕ್ಷೆ

1-eweeeeeee

Palestine ದಾಳಿಗೆ ಭಾರತ ಮೂಲದ ಇಸ್ರೇಲಿ ಯೋಧ ಸಾ*ವು

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.