ಹರಾಜು ಪ್ರಕ್ರಿಯೆಯಲ್ಲಿ ಎಡವಟ್ಟು: ಭಟ್ಕಳ ಪರಸಭೆ ಎದುರು ಪ್ರತಿಭಟನೆ

ಉರ್ದು ಪತ್ರಿಕೆಯಲ್ಲಿ ಪ್ರಕಟಣೆ ಹೊರಡಿಸಿಲ್ಲ ಎನ್ನುವ ಕ್ಷುಲ್ಲಕ ಕಾರಣ...

Team Udayavani, Feb 13, 2023, 4:09 PM IST

1-asdsd

ಭಟ್ಕಳ: ಅಂಗಡಿಗಳ ಹರಾಜು ಪ್ರಕ್ರಿಯೆಯಲ್ಲಿ ಭಟ್ಕಳ ಪರಸಭೆ ಮತ್ತೊಮ್ಮೆ ಎಡವಟ್ಟು ಮಾಡಿಕೊಂಡಿದ್ದು ಅಂಗಡಿಕಾರರಿಂದ ಹರಾಜು ಪ್ರಕ್ರಿಯೆಗೆ ಡಿಮಾಂಡ್ ಡ್ರಾಫ್ಟ್ ಪಡೆದುಕೊಂಡ ನಂತರ ಉರ್ದು ಪತ್ರಿಕೆಯಲ್ಲಿ ಪ್ರಕಟಣೆ ಹೊರಡಿಸಿಲ್ಲ ಎನ್ನುವ ಕ್ಷುಲ್ಲಕ ಕಾರಣ ನೀಡಿ ಹರಾಜು ಪ್ರಕ್ರಿಯೆಯನ್ನೇ ಮುಂದೂಡಿದೆ ಎಂದು ಆರೋಪಿಸಿ ಪುರಸಭಾ ಅಂಗಡಿಕಾರರು ಪುರಸಭೆಯ ಎದುರು ಪ್ರತಿಭಟನೆ ನಡೆಸಿದರು.

ಭಟ್ಕಳ ಪುರಸಭೆಯ ಮುಂದೆ ಅಂಗಡಿಕಾರರ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಪುರಸಭಾ ನಾಮ ನಿರ್ದೇಶಿತ ಸದಸ್ಯ ಶ್ರೀಕಾಂತ ನಾಯ್ಕ ಕಳೆದ ಫೆ.7ರಂದು ನಡೆಯಬೇಕಾಗಿದ್ದ ನ್ಯಾಯ ಸಮ್ಮತವಾದ ಹರಾಜು ಪ್ರಕ್ರಿಯೆಯನ್ನು ಉರ್ದು ಭಾಷೆಯಲ್ಲಿ ಜಾಹಿರಾತು ಕೊಡಲಿಲ್ಲ ಅನ್ನುವ ಕಾರಣ ನೀಡಿ ಸಂಪೂರ್ಣ ಪ್ರಕ್ರಿಯೆಯನ್ನು ಮುಂದೂಡಿ ಗೊಂದಲ ಸೃಷ್ಟಿಮಾಡಲು ಹುನ್ನಾರ ನಡೆಸಿದಂತಿದೆ. ಈಗಾಗಲೇ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಂಗಡಿಕಾರರಿಗೆ ಅನ್ಯಾಯ ಮಾಡಿ ಇತರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪುರಸಭೆಯ ಅಧ್ಯಕ್ಷರು ಸರ್ವಾಧಿಕಾರಿ ಧೋರಣೆ ತಳೆದಿದ್ದಾರೆ. ಈ ಹಿಂದೆ ಕೂಡಾ ಪುರಸಭಾ ಅಂಗಡಿ ಮಳಿಗೆಗಳ ಅವೈಜ್ಞಾನಿಕ ಹರಾಜು ಪ್ರಕ್ರಿಯೆ ಹಾಗೂ ನಂತರದ ಬೆಳವಣಿಗೆಯಲ್ಲಿ ರಾಮಚಂದ್ರ ನಾಯ್ಕ ಎನ್ನುವವರು ಪ್ರಾಣ ಕಳೆದುಕೊಂಡಿರುವ ಘಟನೆ ಇನ್ನೂ ಹಸಿರಾಗಿರುವಾಗಲೇ ಪುರಸಭಾ ಅಧ್ಯಕ್ಷರು ಯಾವುದೇ ಸಭೆಯನ್ನು ಕರೆಯದೇ ಏಕಪಕ್ಷೀಯವಾಗಿ ನಿರ್ಣಯವನ್ನು ಕೈಗೊಂಡಿರುವುದು ಸರಿಯಲ್ಲ. ತಕ್ಷಣ ಹರಾಜು ಪ್ರಕ್ರಿಯೆಯನ್ನು ನಡೆಸಬೇಕು ಇಲ್ಲವಾದಲ್ಲಿ ಮಂಗಳವಾರದಿಂದ ರಸ್ತೆಯಲ್ಲಿ ಕುಳಿತು ಅಂಗಡಿಕಾರರು ಮತ್ತು ಸಾರ್ವಜನಿಕರನ್ನು ಸೇರಿಸಿಕೊಂಡು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಂಗಡಿಕಾರ ರಾಮನಾಥ ಬಳೇಗಾರ್ ಈಗಾಗಲೇ 21 ಅಂಗಡಿಗಳ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ೪೬ ಜನರು ಡಿ.ಡಿ. ಯನ್ನು ನೀಡಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುತ್ತಾರೆ. ಕಾನೂನು ಪ್ರಕ್ರಿಯೆಗಳನ್ನು ಪೂರೈಸಿ ಹರಾಜು ಪ್ರಕ್ರಿಯ ಹಮ್ಮಿಕೊಂಡಿದ್ದು ಇದೀಗ ಕ್ಷುಲ್ಲಕ ಕಾರಣಕ್ಕೆ ಹರಾಜು ಪ್ರಕ್ರಿಯೆಯನ್ನು ರದ್ದುಗೊಳಿಸಿರುವುದರ ಹಿಂದೆ ಬೃಹತ್ ಷಡ್ಯಂತ್ರ ಇದೆ ಎನ್ನುವುದು ಮೇಲ್ನೋಟಕ್ಕೆ ಸಾಬೀತಾಗುತ್ತದೆ. ಈ ಹಿಂದೆ ಹರಾಜು ಪ್ರಕ್ರಿಯೆಯನ್ನು ನಡೆಸಿದಾಗ ಬೇಕಾಬಿಟ್ಟಿ ಹರಾಜು ಕೂಗಿ, ಲಕ್ಷಾಂತರ ರೂಪಾಯಿಗೆ ಹರಾಜು ಹಾಕಿ ನಂತರ ನಾಪತ್ತೆಯಾಗಿದ್ದರಿಂದ ಪುರಸಭೆಗೆ ಲಕ್ಷಾಂತರ ರೂ. ಹಾನಿಯಾಗಿದ್ದನ್ನು ಸ್ಮರಿಸಿದ ಅವರು ಈ ಬಾರಿಯೂ ಕೂಡಾ ತಮಗೆ ಬೇಕಾದವರನ್ನು ಹರಾಜು ಪ್ರಕ್ರಿಯೆಯಲ್ಲಿ ತೂರಿಸಿ, ಸಂಪೂಣಾ ಹರಾಜು ಪ್ರಕ್ರಿಯೆಯನ್ನೇ ಗೊಂದಲಮಯವನ್ನಾಗಿಸುವ ಹುನ್ನಾರ ಅಧ್ಯಕ್ಷರದ್ದಾಗಿದೆ ಎಂದೂ ದೂರಿದರು.

ತಕ್ಷಣ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಮುಂದೆ ಆಗಬಹುದಾಗಿದ್ದ ಅನಾಹುತಗಳನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ಮುಂದಾಗುವ ಎಲ್ಲಾ ಅನಾಹುತಗಳಿಗೆ ಪುರಸಭಾ ಅಧ್ಯಕ್ಷರೇ ಜವಾಬ್ದಾರರಾಗಬೇಕಾಗುತ್ತದೆ ಎಂದ ಅವರು ನ್ಯಾಯ ದೊರೆಯುವ ತನಕವೂ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದೂ ಹೇಳಿದರು.

ಪುರಸಭಾ ಅಧ್ಯಕ್ಷರ ಸರ್ವಾಧಿಕಾರಿ ಧೋರಣೆಗೆ ಧಿಕ್ಕಾರ ಕೂಗಿದ ಅಂಗಡಿಕಾರರು ತಕ್ಷಣ ಹರಾಜು ಹಾಕಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಅಂಗಡಿಕಾರರು ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

gold

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Raju Talikote: ಗುಬ್ಬಿ ಗೂಡು ಕಟ್ಟುವಂತೆ ರಂಗಾಯಣ ಕಟ್ಟುವೆವು

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿUttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

3

Dandeli: ಸಮರ್ಪಕ ಬೀದಿ ದೀಪ ನಿರ್ವಹಣೆಗೆ ಆಗ್ರಹಿಸಿ ಬಿಜೆಪಿ ನಗರಸಭಾ ಸದಸ್ಯರಿಂದ ಪ್ರತಿಭಟನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.