18-19 ರಂದು ಸೋಂದಾ ಇತಿಹಾಸೋತ್ಸವ

ರಾಷ್ಟ್ರೀಯ ವಿಚಾರ ಸಂಕಿರಣ, ಸೋದೆ ಸದಾಶಿವರಾಯ ಪ್ರಶಸ್ತಿ ಪ್ರದಾನ ಸಮಾರಂಭ

Team Udayavani, Jun 9, 2022, 3:55 PM IST

23

ಶಿರಸಿ: ಕೋವಿಡ್‌ ಕಾರಣದಿಂದ ಮುಂದೂಡಲ್ಪಟ್ಟ ಸೋಂದಾ ಇತಿಹಾಸೋತ್ಸವ, ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಸೋದೆ ಸದಾಶಿವರಾಯ ಪ್ರಶಸ್ತಿ ಪ್ರದಾನ ಸಮಾರಂಭ ಸೋಂದಾದ ಮೂರು ಧರ್ಮ ಪೀಠಗಳಾದ ಸ್ವರ್ಣವಲ್ಲೀ ಮಠ, ವಾದಿರಾಜಮಠ, ಜೈನಮಠ, ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮಿಥಿಕ್‌ ಸೊಸೈಟಿ, ಜಾಗೃತ ವೇದಿಕೆ ಸೋಂದಾ, ಸೋದೆ ಸದಾಶಿವರಾಯ ಪ್ರಶಸ್ತಿ ಪ್ರದಾನ ಸಮಿತಿ, ರಂಗ ಚರಿತ ಸೋಂದಾ ಇವುಗಳ ಸಂಯುಕ್ತ ಆಶ್ರಯದಲ್ಲಿ ಜೂ.18 ಮತ್ತು 19 ರಂದು ಸ್ವರ್ಣವಲ್ಲೀ ಮಠದಲ್ಲಿ ನಡೆಯಲಿದೆ.

ರಾಷ್ಟ್ರಮಟ್ಟದ ಈ ಸಮ್ಮೇಳನವನ್ನು ಸ್ವರ್ಣವಲ್ಲೀ ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಮತ್ತು ಜೈನಮಠದ ಶ್ರೀ ಭಟ್ಟಾಕಳಂಕ ಭಟ್ಟಾರಕ ಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ.

ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಪ್ರಾಚೀನ ಭಾರತದ ವಿಜ್ಞಾನ ಸಂಶೋಧಕ ಡಾ| ಸುಂದರ ರಾಜನ್‌ ಬೆಂಗಳೂರು ವಹಿಸಲಿದ್ದಾರೆ. ಈ ವರ್ಷದ ಸೋದೆ ಸದಾಶಿವರಾಯ ಪ್ರಶಸ್ತಿಗೆ ಖ್ಯಾತ ಶಾಸನ ತಜ್ಞ ಡಾ| ದೇವರಕೊಂಡಾರೆಡ್ಡಿ ಭಾಜನರಾಗಿದ್ದಾರೆ.

ಜೂ.18 ರಂದು ಬೆಳಗ್ಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕಿ ರೂಪಾಲಿ ನಾಯ್ಕ, ಪರಂಪರೆ ಇಲಾಖೆ ರಾಜ್ಯ ನಿರ್ದೇಶಕ ಡಾ| ಗೋಪಾಲ್‌, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖೀಲ ಭಾರತ ಮಟ್ಟದ ಹಿರಿಯ ಪ್ರಚಾರಕ ಪ.ರಾ. ಕೃಷ್ಣಮೂರ್ತಿ ಭಾಗವಹಿಸಲಿದ್ದಾರೆ. ಇತಿಹಾಸಕಾರ ಲಕ್ಷ್ಮೀಶ್‌ ಸೋಂದಾ ರಚಿಸಿದ ಅನುರಾಯ ಶಾಲ್ಮಲೆ, ಸದಾಶಿವರಾಯನ ನಿಗೂಢ ಆತ್ಮಕಥನ ಲೋಕಾರ್ಪಣೆಗೊಳ್ಳಲಿದೆ.

ಈ ವರ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಪ್ರಾಚೀನ ಭಾರತದ ಕೊಡುಗೆಗಳು ಎಂಬ ವಿಷಯದಲ್ಲಿ ನಾಲ್ಕು ಪ್ರಧಾನ ಗೋಷ್ಠಿ ಹಾಗೂ ಎರಡು ಉಪಗೋಷ್ಠಿಗಳು ನಡೆಯಲಿವೆ. ಪ್ರಾಚೀನ ಭಾರತದ ನಗರ ವಾಸ್ತು ವಿಜ್ಞಾನ, ನೌಕಾ ತಂತ್ರಜ್ಞಾನ, ಕೃಷಿ ವಿಜ್ಞಾನ, ನೀರಾವರಿ ತಂತ್ರಜ್ಞಾನ, ಯೋಗ ವಿಜ್ಞಾನ, ಚಿಕಿತ್ಸಾ ಪದ್ಧತಿಯ ಇತಿಹಾಸ, ಖಗೋಳ ವಿಜ್ಞಾನ, ಪ್ರಾಚೀನ ಭಾರತದ ಶಾಸ್ತ್ರ ಗ್ರಂಥಗಳು, ಈ ವಿಷಯಗಳ ಕುರಿತು ಡಾ| ಅನುರಾಧಾ ವಿ., ಡಾ| ಲ.ನ. ಸ್ವಾಮಿ, ಡಾ| ನರಸಿಂಹನ್‌, ಡಾ| ಹರಿಹರ ಶ್ರೀನಿವಾಸರಾವ್‌, ಡಾ| ಕೋಟೆಮನೆ ರಾಮಚಂದ್ರ ಭಟ್‌, ಡಾ| ವಿಜಯಲಕ್ಷ್ಮೀ ಬಾಳೇಕುಂದ್ರಿ, ಡಾ| ಶ್ರೀನಾಥ್‌ ರತ್ನಕುಮಾರ್‌, ಡಾ| ಜಯಸಿಂಹ ವಿಷಯ ಮಂಡಿಸಲಿದ್ದಾರೆ. ಡಾ| ಸಿ.ಎಸ್‌ ವಾಸುದೇವನ್‌, ಡಾ| ರಾಜಾರಾಮ್‌ ಹೆಗಡೆ, ಡಾ| ರಮೇಶ್‌ ನಾಯಕ್‌, ನರೇಂದ್ರ ಕೆ.ವಿ., ಡಾ| ಟಿ.ಎಸ್‌. ಹಳೆಮನೆ, ಡಾ| ವೆಂಕಟರಾವ್‌ ಪಲಾಟೆ ಅಧ್ಯಕ್ಷತೆ ವಹಿಸಲಿದ್ದಾರೆ.

ಡಾ| ಶೆಲ್ವಪಿಳ್ಳೈ ಅಯ್ಯಂಗಾರ್‌ ಆಶಯ ನುಡಿಗಳನ್ನು ಆಡಲಿದ್ದಾರೆ. ಎರಡನೇ ದಿನ ನಡೆಯುವ ಸಮಾರೋಪ ಸಮಾರಂಭದಲ್ಲಿ ಸ್ವರ್ಣವಲ್ಲೀ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಟಾರ್‌, ಪರಂಪರೆ ಇಲಾಖೆ ನಿರ್ದೇಶಕ ಡಾ| ಗೋಪಾಲ್‌, ಹಂಪಿ ವಿವಿ ಶಾಸನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಅಮರೇಶ್‌ ಯತಗಲ್‌, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಹನುಮಂತಪ್ಪ ನಿಟ್ಟೂರ್‌, ಸಾಹಿತಿ ಸಂತೋಷ್‌ಕುಮಾರ್‌ ಮೆಹೆಂದಳೆ ಭಾಗವಹಿಸಲಿದ್ದಾರೆ. ಸಮ್ಮೇಳನದ ಮೊದಲ ದಿನ ಸಂಜೆ ಶಿರಸಿ ಯಕ್ಷಗೆಜ್ಜೆ ತಂಡದಿಂದ ಬೊಮ್ಮಯ್ಯ ಗಾಂವ್ಕರ್‌ ವಿರಚಿತ ಐತಿಹಾಸಿಕ ಯಕ್ಷಗಾನ ಚಾಲುಕ್ಯ ವರ್ಧನ ಪ್ರದರ್ಶನವಾಗಲಿದೆ.

ವಿಶೇಷ ಆಕರ್ಷಣೆಯಾಗಿ ಹೈದ್ರಾಬಾದ್‌ನ ಮೋಹನ ಆರ್‌. ಅವರಿಂದ ಆದಿಮಾನವ ವಿರಚಿತ ಬಂಡೆಗಲ್ಲು ಚಿತ್ರಗಳ ಪ್ರದರ್ಶನ ಇರಲಿದೆ. ಮಿಥಿಕ್‌ ಸೊಶೈಟಿಯ ಉದಯ್‌ಕುಮಾರ್‌ ಅವರಿಂದ ಶಾಸನಗಳ ಡಿಜಿಟಲೀಕರಣ ಪ್ರಾತ್ಯಕ್ಷಿಕೆ ನಡೆಯಲಿದೆ. ಪ್ರಾಚೀನ ಭಾರತದ ವಿಜ್ಞಾನ ತಂತ್ರಜ್ಞಾನದ ಭವ್ಯ ಅನಾವರಣ ಈ ವರ್ಷದ ಇತಿಹಾಸೋತ್ಸವದ ವಿಶೇಷವಾಗಲಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Raju Talikote: ಗುಬ್ಬಿ ಗೂಡು ಕಟ್ಟುವಂತೆ ರಂಗಾಯಣ ಕಟ್ಟುವೆವು

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿUttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ

3

Dandeli: ಸಮರ್ಪಕ ಬೀದಿ ದೀಪ ನಿರ್ವಹಣೆಗೆ ಆಗ್ರಹಿಸಿ ಬಿಜೆಪಿ ನಗರಸಭಾ ಸದಸ್ಯರಿಂದ ಪ್ರತಿಭಟನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.