Dandeli: ಬೃಹತ್ ಗಾತ್ರದ ಕಾಳಿಂಗ ಸರ್ಪ ಪ್ರತ್ಯಕ್ಷ
ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟು ಬಂದ ಉರಗ ಪ್ರೇಮಿ ರಜಾಕ್ ಶಾ
Team Udayavani, Jan 1, 2024, 1:00 PM IST
ದಾಂಡೇಲಿ: ನಗರದ ಬೈಲುಪಾರಿನ ಮನೆಯೊಂದರ ಆವರಣದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿ ಆತಂಕದ ಸೃಷ್ಠಿಸಿದ ಘಟನೆ ನಡೆದಿದೆ.
ಬೈಲುಪಾರಿನ ನಿವಾಸಿ, ಉಪ ವಲಯಾರಣ್ಯಾಧಿಕಾರಿ ರಾಮು ಗೌಡ ವಾಸ್ತವ್ಯವಿರುವ ಅರಣ್ಯ ವಸತಿ ಗೃಹದ ಆವರಣದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿದೆ. ಹಾವು ಕಂಡ ತಕ್ಷಣವೇ ನಗರದ ಉರಗ ಪ್ರೇಮಿ ರಜಾಕ್ ಶಾ ಅವರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ರಜಾಕ್ ಶಾ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಮರಳಿ ಕಾಡಿಗೆ ಬಿಟ್ಟು ಬಂದಿದ್ದಾರೆ.
ಕಳೆದ ಅನೇಕ ವರ್ಷಗಳಿಂದ ನಗರ ಹಾಗೂ ನಗರದ ಸುತ್ತಮುತ್ತಲ ಜನವಸತಿ ಪ್ರದೇಶದಲ್ಲಿ ಹಾವುಗಳು ಪ್ರತ್ಯಕ್ಷವಾದ ಸಂದರ್ಭದಲ್ಲಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಹಾವನ್ನು ಸುರಕ್ಷಿತವಾಗಿ ಹಿಡಿದು ಮರಳಿ ಕಾಡಿಗೆ ಬಿಟ್ಟು ಬರುವ ಮೂಲಕ ರಜಾಕ್ ಶಾ ಅವರು ವನ್ಯ ಕಾಳಜಿಯನ್ನು ಮೆರೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain ಯಲ್ಲಾಪುರ: ಬಾಗಿನಕಟ್ಟಾ ಬಳಿ ಭೂಕುಸಿತ; ಸಂಚಾರ ಸ್ಥಗಿತ
Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು
Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ
ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ
ತುಂಬಿ ಹರಿಯುತ್ತಿರುವ ಚಂಡಿಕಾನದಿ;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ಮಾರ್ಗ ವ್ಯವಸ್ಥೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.