ಹೈನು ಹೆಚ್ಚಳವಾದ್ರೂ ಬಾಡಿಗೆ ಕಟ್ಟೋದು ತಪ್ಪಿಲ್ಲ!

•ಎಚ್ಚೆತ್ತುಕೊಳ್ಳಲಿ ಸರಕಾರ•ಸೋರುವ ಕಟ್ಟಡದಲ್ಲಿ ಪಶು ಆಹಾರ ಸಂಗ್ರಹಣೆ

Team Udayavani, Jun 11, 2019, 2:16 PM IST

Udayavani Kannada Newspaper

ಶಿರಸಿ: ಕ್ಷೀರ ಉತ್ಪಾದನೆಯಲ್ಲಿ ತನ್ನದೇ ಆದ ದಾಪುಗಾಲು ಇಡುತ್ತಿರುವ ಉತ್ತರ ಕನ್ನಡ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಸ್ವಂತ ಕಟ್ಟಡವೇ ಇಲ್ಲ. ಕಳೆದ ಮೂರು ದಶಕಗಳಿಂದಲೂ ಬಾಡಿಗೆ ಕಟ್ಟಡದಲ್ಲೇ ದಿನಕ್ಕೆರಡು ಬಾರಿ ತೆರೆಯುತ್ತಿದೆ. ಬಹುತೇಕ ಹಾಲು ಸಂಘಗಳಿಗೆ ಸ್ವಂತ ಕಟ್ಟಡ ಗಗನ ಕುಸುಮವೇ ಆಗಿದೆ.

ಜಿಲ್ಲೆಯಲ್ಲಿ 241 ಸಹಕಾರಿ ಹಾಲು ಉತ್ಪಾದಕರ ಸಂಘಗಳಿವೆ. ಅವುಗಳಲ್ಲಿ ಕೇವಲ 60 ಸಂಘಗಳಿಗೆ ಮಾತ್ರ ಸ್ವಂತ ಕಟ್ಟಡವಿದೆ. ಉಳಿದ 181 ಸಂಘಗಳು ಬಾಡಿಗೆ ಕಟ್ಟಡದಲ್ಲೇ ದಿನ ದೂಡುತ್ತಿವೆ. ಸಂಘದ ಸಹಕಾರಿಗಳಿಗೆ ಸ್ವಂತ ಕಟ್ಟಡ ಹಾಗೂ ಸ್ಥಳ ಎರಡೂ ಗಗನ ಕುಸುಮವೇ ಆಗಿದೆ.

ಧಾರವಾಡ ಹಾಲು ಒಕ್ಕೂಟ ವ್ಯಾಪ್ತಿಗೆ ಸೇರಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾಲಿನ ಉತ್ಪನ್ನಗಳ ಗಣನೀಯ ಏರಿಕೆ ಆಗುತ್ತಿದೆ. ಇದಕ್ಕಾಗಿ ಕೇವಲ 80ರಷ್ಟಾಗಿದ್ದ ಸಂಘಗಳು ಕಳೆದ ದಶಕದಿಂದೀಚೆಗೆ ಏರಿಕೆಯೂ ಆಗಿದೆ. 12-13 ಸಾವಿರ ಲೀ. ಉತ್ಪಾದನೆಗೆ ತತ್ವಾರ ಕಾಣುತ್ತಿದ್ದ ಹಾಲು ಇಂದು 40 ಸಾವಿರ ಲೀ. ದಾಟಿದೆ.

ಇವುಗಳನ್ನು ವ್ಯವಸ್ಥಿತವಾಗಿ ಸಂಗ್ರಹಿಸಿ ದಿನಕ್ಕೆರಡು ಸಲ ಒಕ್ಕೂಟಕ್ಕೆ ನೀಡುವ ಹಾಲು ಸಂಘಗಳಿಗೆ ಮಾತ್ರ ಸ್ವಂತ ಕಟ್ಟಡ ಹೊಂದಿಲ್ಲ. ಜೊತೆಗೆ ಸರಕಾರದ ಯಾವುದೇ ಅನುದಾನ ದೊರೆತೂ ಇಲ್ಲ. ಹೀಗಾಗಿ ನೂರಾರು ಸಂಘಗಳು ಇನ್ನೂ ಸಂಘ ಸಂಸ್ಥೆಗಳ ಬಾಡಿಗೆ ಕಟ್ಟಡದಲ್ಲಿ ದಿನ ಕಳೆಯುತ್ತಿರುವುದು ವಿಪರ್ಯಾಸವಾಗಿದೆ. ಹೆಚ್ಚಿನ ಸಂಘಗಳು ಸರಾಸರಿ ದಿನಕ್ಕೆ 200-250ಲೀಟರ್‌ ಹಾಲು ಉತ್ಪಾದನೆ ಮಾಡುತ್ತವೆ. ಕೆಲವು ಸಂಘಗಳು ಇದಕ್ಕೂ ಹೆಚ್ಚು ಕಡಿಮೆ ಉತ್ಪಾದಿಸುವುದಿದೆ. ಎಷ್ಟೇ ಉತ್ಪಾದನೆಯಾದರೂ ಸಂಘಗಳಿಗೆ ಲಾಭ ಅಷ್ಟಕಷ್ಟೇ. ಈ ಲಾಭದಲ್ಲಿ ಸಂಘಕ್ಕೆ ಬೇಕಾದ ಕಟ್ಟಡ ನಿರ್ಮಾಣ ಕಷ್ಟಸಾಧ್ಯ. ಹೀಗಿರುವಾಗ ಸರಕಾರದ ಅನುದಾನ ಕಟ್ಟಡಗಳ ನಿರ್ಮಾಣಕ್ಕೆ ದೊರೆತರೆ ಅನುಕೂಲವಾಗಲಿದೆ ಎಂಬುದು ಸಾರ್ವತ್ರಿಕ ಅಭಿಮತವಾಗಿದೆ.

ಶಿರಸಿ ತಾಲೂಕಿನಲ್ಲಿ 83ರಲ್ಲಿ 37ಕ್ಕೆ ಸ್ವಂತ ಕಟ್ಟಡ, ಸಿದ್ದಾಪುರದಲ್ಲಿ 50ಕ್ಕೆ 15, ಯಲ್ಲಾಪುರದಲ್ಲಿ 33ರಲ್ಲಿ 8ಕ್ಕೆ, ಮುಂಡಗೋಡ 26ರಲ್ಲಿ 26, ಕುಮಟಾದಲ್ಲಿ ಏಳಕ್ಕೆ ಏಳು, ಭಟ್ಕಳದಲ್ಲಿ 9ಕ್ಕೆ 9, ಹೊನ್ನಾವರಲ್ಲಿ 9ಕ್ಕೆ 9, ಅಂಕೋಲಾದಲಿ 6ಕ್ಕೆ ಆರು, ಹಳಿಯಾಳದಲ್ಲಿ 18ಕ್ಕೆ ಹದನೆಂಟೂ ಕಟ್ಟಡ ಇಲ್ಲವಾಗಿದೆ.

ಹಾಲಿ ಸಂಘಗಳಲ್ಲಿ ಹಾಲಿನ ಸಂಗ್ರಹಣೆ ಜತೆಗೆ ಅವುಗಳ ಉಪಕರಣ, ಪಶು ಆಹಾರಗಳ ಚೀಲಗಳನ್ನೂ ಇಟ್ಟುಕೊಳ್ಳಬೇಕಾಗುತ್ತದೆ. ಮಾಸಿಕ ಮೀಟಿಂಗ್‌, ಕಂಪ್ಯೂಟರ್‌ ಕೂಡ ಇರುತ್ತವೆ. ಬಾಡಿಗೆ ಕಟ್ಟಡಕ್ಕೆ 250 ರೂ.ಗಳಿಂದ ಎರಡೂವರೆ ಸಾವಿರ ರೂ. ತನಕ ಮಾಸಿಕ ಬಾಡಿಗೆ ಕೊಟ್ಟೇ ಹೋಗುತ್ತದೆ. ಇದು ಒಂದು ಕಡೆ ನಷ್ಟವಾದರೆ, ಇನ್ನೊಂದು ಕಡೆ ಉಪಕರಣ, ಪಶು ಆಹಾರ ಇಟ್ಟುಕೊಳ್ಳುವ ವ್ಯವಸ್ಥಿತ ಗೋದಾಮೂ ಇಲ್ಲದಂತಾಗುತ್ತದೆ. ಸ್ವಂತ ಬಂಡವಾಳ ಬಳಸಿ ಸಂಘದ ಕಟ್ಟಡ ಸ್ಥಾಪಿಸಿಕೊಳ್ಳುವಷ್ಟು ಸಿರಿವಂತರಾಗದ ಕಾರಣ ಸಂಘಗಳಿಗೆ ಸರಕಾರದ ನೆರವು ಅಗತ್ಯವಾಗಿದೆ.

•ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.