ಕಾಂಡ್ಲಾ ರಕ್ಷಣೆ ಜನರಿಗೆ ಸೇರಿದ್ದು: ರೆಡ್ಡಿ

•ಜಲಚರ ಜೀವಿಗಳಿಗೆ ಆಶ್ರಯ ತಾಣಗಳು•ಜನರ ಮಧ್ಯೆ ಕಾಂಡ್ಲಾ ದಿನ ಆಚರಿಸುವಂತಾಗಬೇಕು

Team Udayavani, Jul 28, 2019, 12:23 PM IST

uk-tdy-2

ಕಾರವಾರ: ವಿಜ್ಞಾನ ಕೇಂದ್ರದಲ್ಲಿ ವಿದ್ಯಾರ್ಥಿಗಳಿಂದ ಕಾಂಡ್ಲಾ ದಿನಾಚರಣೆ ನಿಮಿತ್ತ ಕಾರ್ಯಾಗಾರ ನಡೆಯಿತು.

ಕಾರವಾರ: ಕಾಂಡ್ಲಾ ಸಸ್ಯಗಳ ಮಹತ್ವ ಸಾರ್ವಜನಿಕರಿಗೆ ತಿಳಿಸುವ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಜನರ ಮಧ್ಯೆ ಕಾಂಡ್ಲಾ ದಿನ ಆಚರಿಸುವುದು ಒಳಿತು ಎಂದು ಡಿಎಫ್‌ಓ ವಸಂತ ರೆಡ್ಡಿ ಅಭಿಪ್ರಾಯಪಟ್ಟರು.

ಅವರು ವಿಜ್ಞಾನ ಕೇಂದ್ರದಲ್ಲಿ ನಡೆದ ವಿಶ್ವ ಕಾಂಡ್ಲಾ ದಿನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕಾಂಡ್ಲಾ ಮಹತ್ವವನ್ನು ಜನತೆಗೆ ತಿಳಿಸುವಲ್ಲಿ ಪತ್ರಕರ್ತರ ಪಾತ್ರ ದೊಡ್ಡದು. ಕಾಂಡ್ಲಾ ಮಣ್ಣು ಸವಕಳಿ ತಡೆಯುತ್ತದೆ ಅಲ್ಲದೇ ನದಿಯ ಜೀವಿಗಳಿಗೆ ಆಶ್ರಯ ನೀಡುತ್ತವೆ ಎಂದರು. ಕೇವಲ ನಾಲ್ಕು ಗೋಡೆ ಮಧ್ಯೆ ಉಪನ್ಯಾಸ ಮಾಡುವುದಕ್ಕಿಂತ ನಾವು ನದಿ ದಂಡೆ ಜನರನ್ನು ತಲುಪಬೇಕಿದೆ ಎಂದರು.

ಮುಖ್ಯ ಅತಿಥಿಗಳಾಗಿ ಸರ್ಕಾರಿ ಪದವಿ ಕಾಲೇಜಿನ ಪ್ರಿನ್ಸಿಪಾಲೆ ಕಲ್ಪನಾ ಕೆರವಡಿಕರ ಕಾಂಡ್ಲಾ ಪರಿಸರದ ಉಪಯೋಗಗಳು ಹಾಗೂ ಜನಸಾಮಾನ್ಯರಲ್ಲಿ ಕಾಂಡ್ಲಾ ಪರಿಸರ ಹೇಗೆ ಪ್ರಭಾವ ಬೀರುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆವಹಿಸಿದ್ದ ವಿ.ಎನ್‌. ನಾಯಕ ಮಾತನಾಡಿ ನೈಜ ಸಂಗತಿ ಮುಖಾಂತರ ಕಾಂಡ್ಲಾ ಪರಿಸರದ ರಕ್ಷಣೆ ನಮ್ಮೆಲ್ಲರ ಹೊಣೆ ಎಂದರು. ಇದೇ ವೇಳೆ ವಿಶ್ವ ಪರಿಸರ ದಿನಾಚರಣೆ ಹಾಗೂ ವಿಶ್ವ ಸಾಗರ ದಿನಾಚರಣೆ ಪ್ರಯುಕ್ತ ಕಾರವಾರ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಚಿತ್ರಕಲಾ ಹಾಗೂ ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಉತ್ತರ ಕನ್ನಡ, ಕರ್ನಾಟಕ ಅರಣ್ಯ ಇಲಾಖೆ ಕಾರವಾರ ವಿಭಾಗ, ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಕಾರವಾರ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಹಾಗೂ ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕಾಂಡ್ಲಾ ದಿನಾಚರಣೆ ಪ್ರಯುಕ್ತ ಉತ್ತರ ಕನ್ನಡ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಏರ್ಪಡಿಸಿದ್ದವು. ಕರ್ನಾಟಕದಲ್ಲಿನ ಕಾಂಡ್ಲಾ ಸಸ್ಯಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ ಎಂಬ ವಿಷಯದ ಮೇಲೆ ಡಾ| ವಸಂತ ರೆಡ್ಡಿ ಕಾಂಡ್ಲಾ ಸಸ್ಯಗಳ ಪುನಃಸ್ಥಾಪನೆ ಎಂಬ ವಿಷಯದ ಮೇಲೆ ಸುಹಾಸ ನಾಯ್ಕ, ಸಂರಕ್ಷಣಾಧಿಕಾರಿ ಕಾಂಡ್ಲಾ ಸಸ್ಯಗಳ ವೈವಿಧ್ಯತೆ ಕುರಿತು ಕುಮಟಾದ ಪ್ರಕಾಶ ಮೇಸ್ತಾ ಉಪನ್ಯಾಸ ನೀಡಿದರು.

ಬಸವರಾಜ, ವಲಯ ಅರಣ್ಯ ಸಂರಕ್ಷಣಾಧಿಕಾರಿ ಜಿ.ವಿ. ನಾಯ್ಕ ಇದ್ದರು. ಹೊನ್ನಾವರ, ಅಂಕೋಲಾ ಮತ್ತು ಕಾರವಾರ ತಾಲೂಕಿನ ವಿವಿಧ ಕಾಲೇಜಿನಿಂದ ಸುಮಾರು 100 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಅಧಿಕಾರಿ ಡಾ| ಸಂಜೀವ ದೇಶಪಾಂಡೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಭಾಗ್ಯಶ್ರೀ ನಾಯ್ಕ ವಂದಿಸಿದರು. ಕವಿತಾ ಮೇಸ್ತಾ ನಿರೂಪಿಸಿದರು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ಕಾಂಡ್ಲಾ ಸಸ್ಯಗಳ ಮೇಲೆ ಚಲನಚಿತ್ರ ಪ್ರದರ್ಶಿಸಲಾಯಿತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.