![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 18, 2021, 4:27 PM IST
ಕಾರವಾರ: ನಗರಸಭೆ ವ್ಯಾಪ್ತಿಯಲ್ಲಿ ಮತ್ತು ಕಾರವಾರ ತಾಲೂಕಿನ ಚಿತ್ತಾಕುಲಾ ಮತ್ತು ಮಲ್ಲಾಪುರ ಗ್ರಾಪಂ ವ್ಯಾಪ್ತಿಯ ಪ್ರದೇಶಗಳನ್ನು ಸ್ಪೆಶಲ್ ಕಂಟೋನ್ಮೆಂಟ್ ಝೋನ್ ಆಗಿಸಿ ಡಿಸಿ ಆದೇಶ ಹೊರಡಿಸಿದ್ದಾರೆ.
ಈ ಪ್ರದೇಶಗಳಲ್ಲಿ ಕೋವಿಡ್-19 ಮಾರ್ಗಸೂಚಿಯನ್ವಯ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಡಿವೈಎಸ್ಪಿ , ತಾಪಂ ಇಒ, ಪಿಎಸ್ಐಗಳ ಜೊತೆ ಸಭೆ ನಡೆಸಲಾಯಿತು. ತುರ್ತು ವೈದ್ಯಕೀಯ ಸಂದರ್ಭಗಳನ್ನು ಹೊರತುಪಡಿಸಿ ಸಾರ್ವಜನಿಕರ ಓಡಾಟ ಕಡ್ಡಾಯವಾಗಿ ನಿರ್ಬಂಧಿಸಲು ಸೂಚಿಸಲಾಯಿತು.
ಹೋಟೆಲ್ಗಳಲ್ಲಿ ಯಾವುದೇ ಆಹಾರ ಪಾರ್ಸೆಲ್ ನೀಡದೇ ವಿತರಣೆ ಹುಡುಗರ ಮೂಲಕವೇ ಹೋಟೆಲ್ನವರೇ ಆಹಾರ ತಲುಪಿಸುವ ವ್ಯವಸ್ಥೆ ಮಾಡಬೇಕು. ಅನವಶ್ಯಕ ಓಡಾಡುತ್ತಿರುವವರ ವಿರುದ್ಧ ಕ್ರಮವಹಿಸಿ ಮತ್ತು ಅನುಮತಿ ಪಡೆಯದೆ ಯಾವುದೇ ಅಂಗಡಿ-ಮುಂಗಟ್ಟುಗಳು ತೆರೆದಿದ್ದರೆ ಅಂತಹವರ ವಿರುದ್ಧ ಪೋಲೀಸರಿಗೆ ಪ್ರಕರಣ ದಾಖಲಿಸಲು ತಿಳಿಸಲಾಯಿತು.
ವೈದ್ಯಕೀಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜನರ ಓಡಾಟಕ್ಕೆ ಅನುಕೂಲವಾಗುವಂತೆ ಆಟೋ ಚಾಲಕರ-ಮಾಲೀಕರ ಸಂಘದಿಂದ ನಿಗ ಪಡಿಸಿದ ಸ್ಥಳಗಳಲ್ಲಿ ತುರ್ತು ಸೇವೆಗಾಗಿ ಆಟೋಗಳು ಲಭ್ಯವಿರುವುದಾಗಿ ನಗರಸಭೆ ಮತ್ತು ಗ್ರಾಪಂ ವ್ಯಾಪ್ತಿಯಲ್ಲಿ ಪ್ರಚಾರ ಮಾಡಲು ಸೂಚಿಸಲಾಯಿತು. ಹೋಮ್ ಐಸೋಲೇಷನ್ನಲ್ಲಿ ಇದ್ದವರ ಮನೆಗಳಿಗೆ ಗುರುತಿಗಾಗಿ ಸ್ಟಿಕ್ಕರ್ ಅಂಟಿಸಿ, ನೆರೆಹೊರೆಯ ಮನೆಗಳಲ್ಲಿರುವವರಿಗೆ ಮಾಹಿತಿ ನೀಡಿ ಸೂಕ್ತ ಮುಂಜಾಗ್ರತೆ ವಹಿಸುವಂತೆ ತಿಳಿವಳಿಕೆ ನೀಡಲು ಹೇಳಲಾಯಿತು. ಕೈಗಾದಲ್ಲಿ ಕೆಲಸ ಮಾಡುತ್ತಿರುವ ನೌಕರರು ಹೆಚ್ಚಿನದಾಗಿ ಕೈಗಾ ಟೌನ್ ಶಿಪ್ನಲ್ಲಿ ಹಾಗೂ ಮಲ್ಲಾಪುರ ಗ್ರಾಪಂ ವ್ಯಾಪ್ತಿಯ ಪ್ರದೇಶಗಳಲ್ಲಿದ್ದು, ಅವರು ಕೈಗಾಗೆ ಕೆಲಸಕ್ಕೆ ಹೋಗಿ ಬರಲು ಮುಂಜಾಗ್ರತಾ ಕ್ರಮಗಳೊಂದಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಕೈಗಾದ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವುದು.
ಹೋಂ ಐಸೋಲೇಶನ್ ನಲ್ಲಿ ಇದ್ದವರಿಗೆ ಮೆಡಿಕಲ್ ಕಿಟ್ಗಳನ್ನು ತಲುಪಿಸುವ ಬಗ್ಗೆ ಟಿಎಚ್ಒ ಅವರು ಕ್ರಮ ಕೈಗೊಳ್ಳಲು ಹೇಳಲಾಯಿತು. ದಿನಬಳಕೆ ವಸ್ತುಗಳನ್ನು ಮನೆ ಮನೆಗೆ ತಲುಪಿಸುವ ವ¤ಕ್ತಿಗಳು ಸೂಕ್ತ ಮುಂಜಾಗ್ರತಾ ವಹಿಸಿ ತೆರಳುವಂತೆ ಕ್ರಮ ವಹಿಸುವುದು. ನಿರ್ಬಂಧಿತ ಪ್ರದೇಶಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟು ಪಾಲಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಲಾಯಿತು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.