Karwar; ದ್ವೇಷ ಭಾಷಣ ಮಾಡಿದ ಅನಂತ ಕುಮಾರ್ ಹೆಗಡೆ ವಿರುದ್ಧ ಸೆ.505 ಅಡಿ ಪ್ರಕರಣ ದಾಖಲು
Team Udayavani, Jan 14, 2024, 3:42 PM IST
![Karwar; ದ್ವೇಷ ಭಾಷಣ ಮಾಡಿದ ಅನಂತ ಕುಮಾರ್ ಹೆಗಡೆ ವಿರುದ್ಧ ಸೆ.505 ಅಡಿ ಪ್ರಕರಣ ದಾಖಲು](https://www.udayavani.com/wp-content/uploads/2024/01/ananat-620x342.jpg)
![Karwar; ದ್ವೇಷ ಭಾಷಣ ಮಾಡಿದ ಅನಂತ ಕುಮಾರ್ ಹೆಗಡೆ ವಿರುದ್ಧ ಸೆ.505 ಅಡಿ ಪ್ರಕರಣ ದಾಖಲು](https://www.udayavani.com/wp-content/uploads/2024/01/ananat-620x342.jpg)
ಕಾರವಾರ: ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕುಮಟಾ ಪೊಲೀಸರು ಸ್ವಯಂ ಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿದ್ದಾರೆ.
ದ್ವೇಷ ಭಾಷಣದ ಕಾರಣಕ್ಕೆ ಸೆಕ್ಷನ್ 505, ಶಾಂತಿ ಕದಡುವ ಮಾತಿನ ಕಾರಣಕ್ಕೆ ಸೆಕ್ಷನ್ 153 ಎ ಅಡಿಯಲ್ಲಿ ಸಂಸದರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳೀಯ ಮತ್ತು ರಾಜ್ಯ ಮಟ್ಟದ ದೃಶ್ಯ ಮಾಧ್ಯಮಗಳಲ್ಲಿ ಪ್ರಕಟವಾದ ದೃಶ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ಧಾರಾಮಯ್ಯ ಅವರ ಬಗ್ಗೆ ಸಂಸದ ಅನಂತ ಕುಮಾರ್ ಬಳಸಿದ ಭಾಷೆ, ಚಿನ್ನದ ಪಳ್ಳಿ ಮಸೀದಿಯನ್ನು ಬಾಬರಿ ಮಸೀದಿ ತರಹ ಹೊಡೆದು ಹಾಕಲಾಗುವುದು, ರಣ ಭೈರವ ಎದ್ದಿದ್ದಾನೆ. ಅಹಿಂದ ಎಂಬ ಗತಿಗೆಟ್ಟ ಮಾನಸಿಕತೆ, ಅಲ್ಪಸಂಖ್ಯಾತರಿಗೆ ಮಾರಿಕೊಂಡ ಮುಖ್ಯಮಂತ್ರಿ ಎಂಬ ವಾಕ್ಯಗಳನ್ನು ಸಂಸದ ಅನಂತ ಕುಮಾರ್ ಹೆಗಡೆ ಬಳಸಿದ್ದರು. ಅಲ್ಲದೆ ಶಿರಸಿ ಸಿಪಿ ಬಝಾರ್ ಮಸೀದಿ ವಿಜಯ ವಿಠ್ಠಲ ದೇವಸ್ಥಾನ ಆಗಿದೆ. ಶ್ರೀರಂಗಪಟ್ಟಣದ ದೊಡ್ಡ ಮಸೀದಿ ಹನುಮಂತನ ದೇವಸ್ಥಾನವಾಗಿದೆ ಎಂದಿದ್ದರು. ನಮ್ಮ ವಿರೋಧಿ ಕಾಂಗ್ರೆಸ್ ಅಲ್ಲ. ಕಾಂಗ್ರೆಸ್ ಗೆ ಬಿಜೆಪಿ ಎದುರಿಸುವ ಮಾನಸಿಕತೆ ಇಲ್ಲ, ನಮ್ಮ ವಿರೋಧ ಸಿದ್ಧಾರಾಮಯ್ಯ. ನಮ್ಮ ವಿರೋಧಿಗಳು ಸನಾತನವನ್ನು ವಿರೋಧಿಸುವವರು. ಅವರ ವಿರುದ್ಧ ನಾವು ಸೇಡು ತೀರಿಸಿಕೊಳ್ಳಬೇಕು ಎಂದಿದ್ದರು.
ಈ ಹೇಳಿಕೆ ಮಾಧ್ಯಮಗಳಲ್ಲಿ ಬರುತ್ತಿದ್ದಂತೆ ಕಾಂಗ್ರೆಸ್ಸಿಗರು, ಸಂಸದ ಸಮಾಜದ ಕೋಮು ಸೌಹಾರ್ದತೆ ಹಾಳುಗೆಡವುತ್ತಿದ್ದಾರೆ ಎಂದು ಟೀಕಿಸಿದ್ದರು. ಗೃಹ ಸಚಿವರು ಹಾಗೂ ಆರೋಗ್ಯ ಸಚಿವರ ಪ್ರತಿಕ್ರಿಯೆಗಳು ಸಹ ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದವು. ಇದನ್ನೆಲ್ಲಾ ಗಮನಿಸದ ಕುಮಟಾ ಪೋಲೀಸರು, ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ](https://www.udayavani.com/wp-content/uploads/2025/02/halle-150x87.jpg)
![Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ](https://www.udayavani.com/wp-content/uploads/2025/02/halle-150x87.jpg)
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
![ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ](https://www.udayavani.com/wp-content/uploads/2025/02/sukri-150x86.jpg)
![ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ](https://www.udayavani.com/wp-content/uploads/2025/02/sukri-150x86.jpg)
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
![12](https://www.udayavani.com/wp-content/uploads/2025/02/12-12-150x80.jpg)
![12](https://www.udayavani.com/wp-content/uploads/2025/02/12-12-150x80.jpg)
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
![Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ](https://www.udayavani.com/wp-content/uploads/2025/02/yallapura-150x84.jpg)
![Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ](https://www.udayavani.com/wp-content/uploads/2025/02/yallapura-150x84.jpg)
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ