Karwar; ಕರ್ತವ್ಯ ನಿರತ ಪೊಲೀಸರ ಮೇಲೆ ದಾಳಿ: ಹತ್ತು ಯುವಕರ ಬಂಧನ
Team Udayavani, Nov 12, 2023, 10:43 PM IST
ಕಾರವಾರ: ರವಿವಾರ ನಸುಕಿನ 1-30 ರ ಸುಮಾರಿಗೆ ಬೈತಖೋಲ್ ಬಂದರು ಪ್ರದೇಶದ ರಸ್ತೆ ಬದಿಯಲ್ಲಿದ್ದ ಯುವಕರಿಗೆ ಮನೆಗೆ ಹೋಗುವಂತೆ ಪೊಲೀಸರು ಬುದ್ದಿ ಹೇಳಿದಕ್ಕೆ, ಯುವಕರ ಗುಂಪೊಂದು ಕರ್ತವ್ಯ ನಿರತ ಇಬ್ಬರು ಪೊಲೀಸರನ್ನು ಥಳಿಸಿದ ಘಟನೆ ಕಾರವಾರದ ಬಂದರು ಪ್ರದೇಶ ಬೈತಖೋಲ್ ದಲ್ಲಿ ನಡದಿದೆ. ನಗರ ಠಾಣೆಯ ಬೈತಖೋಲ್ ಬೀಟ್ ಪೋಲೀಸರಾದ ಗಣೇಶ ಕುರಿಯವರ್, ಹರೀಶ ಗವಾಣಿಕರ ಇಬ್ಬರೂ ಯುವಕರ ದಾಳಿಗೆ ತುತ್ತಾಗಿ ಗಾಯಗೊಂಡಿದ್ದಾರೆ.
ಈರ್ವರು ಪೊಲೀಸರು ರಾತ್ರಿ ವೇಳೆ ಬೈತಖೋಲ್ ಏರಿಯಾದಲ್ಲಿ ಕರ್ತವ್ಯದಲ್ಲಿದ್ದರು. ಹತ್ತಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಇದ್ದ ಯುವಕರು ತಡ ರಾತ್ರಿಯಾದರೂ ಮನೆಗೆ ತೆರಳದೆ, ರಸ್ತೆ ಬದಿಯಲ್ಲಿ ನಿಂದತುಕೊಂಡಿದ್ದರು. ಈ ಗುಂಪು ಗಮನಿಸಿದ ಪೊಲೀಸರು, ಮನೆಗೆ ಹೋಗುವಂತೆ ಯುವಕರಿಗೆ ಬುದ್ದಿ ಹೇಳಿದರು. ಈ ವೇಳೆ ಮಾತಿಗೆ ಮಾತು ಬೆಳೆದು ಕೋಪಿಷ್ಟ ಯುವಕರು ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ.
ಯುವಕರಿಂದ ಹಲ್ಲೆಗೆ ತುತ್ತಾಗಿ ಗಾಯಗೊಂಡ ಪೊಲೀಸರನ್ನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಸುನೀಲ ಗೌಡ, ಮಂಜುನಾಥ ಗೌಡ, ಸಂದೇಶ್, ರಘುವೀರ,ನಿತಿನ್ ಗೌಡ, ಗಗನ ಗೌಡ, ಅನುರಾಗ ಗೌಡ, ಉಮೇಶ್ ಜನಕಪ್ರಸಾದ್, ವಿತೇಶ ಗೌಡ, ಯುವರಾಜ ಗೌಡ, ಸುಚಿತ ಗೌಡ ಎಂಬುವವರನ್ನು ಬಂಧಿಸಿ,ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಹಲ್ಲೆ ಮಾಡಿದ ಆರೋಪಿತರನ್ನು ನ್ಯಾಯಾಂಗ ಬಂಧನದಲ್ಲಿಡಲು ನ್ಯಾಯಾಧೀಶರು ಆದೇಶಿಸಿದ್ದಾರೆ. ಬೈತಖೋಲ್ ದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.