ಅತಿಕ್ರಮಣದಾರರಿಗೆ ಕಿರುಕುಳ ನೀಡದಿರಿ


Team Udayavani, Apr 14, 2021, 4:38 PM IST

Untitled-4

ಭಟ್ಕಳ: ಜಿಲ್ಲೆಯಲ್ಲಿಯೇ ಮಾದರಿ ಆಸ್ಪತ್ರೆಯಾಗಿ ಜನರಿಗೆ ಉತ್ತಮ ಸೇವೆ ನೀಡುತ್ತಿರುವ ಇಲ್ಲಿನ ತಾಲೂಕು ಆಸ್ಪತ್ರೆ ವಾತಾವರಣವನ್ನು ಹಾಳುಮಾಡುವ ಪಿತೂರಿ ನಡೆಯುತ್ತಿದ್ದು, ಅದಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ ಎಂದು ಶಾಸಕ ಸುನೀಲ್‌ ನಾಯ್ಕ ಹೇಳಿದರು.

ಇಲ್ಲಿನ ತಾಪಂ ಸಭಾ ಭವನದಲ್ಲಿ ನಡೆದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ| ಸವಿತಾ ಕಾಮತ್‌ ಅವರಿಂದ ವಿವರ ಪಡೆದರು.

ಕೋವಿಡ್‌ ಲಸಿಕೆಯನ್ನು ಪ್ರಸ್ತುತ ನಿಯಮದಂತೆ ಸರ್ಕಾರಿ ಕಟ್ಟಡದಲ್ಲಿಯೇ ವ್ಯವಸ್ಥೆ ಮಾಡಬೇಕು. ಮುಂದಿನ ದಿನಗಳಲ್ಲಿ ನಿಯಮಾವಳಿಬದಲಾದರೆ ಖಾಸಗಿ ಕಟ್ಟಡಗಳಲ್ಲಿ ಲಸಿಕಾ ಅಭಿಯಾನ ಮಾಡಬಹುದು ಎಂದು ತಾಲೂಕುಆರೋಗ್ಯಾಧಿಕಾರಿ ಡಾ| ಮೂರ್ತಿರಾಜ ಭಟ್ಟ ಹೇಳಿದರು.

ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಯೋಜನೆ ರೈತರಿಗೆ ವರದಾನವಾಗಿದ್ದರೂ ಬ್ಯಾಂಕ್‌ನವರಅಸಹಕಾರದಿಂದ ರೈತರು ಕ್ರೆಡಿಟ್‌ ಕಾರ್ಡ್‌ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಕೃಷಿ ಅಧಿಕಾರಿಜಿ.ಎನ್‌. ನಾಯ್ಕ ತಿಳಿಸಿದರು. ಶೀಘ್ರದಲ್ಲಿ ಬ್ಯಾಂಕ್‌ಗೆ ಭೇಟಿ ನೀಡಿ ವ್ಯವಸ್ಥಾಪಕರೊಂದಿಗೆ ಮಾತನಾಡಿಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.

ಅರಣ್ಯ ಇಲಾಖೆ ಪ್ರಗತಿ ಕುರಿತು ವಲಯಅರಣ್ಯಾಧಿಕಾರಿ ಸವಿತಾ ದೇವಾಡಿಗವಿವರಿಸುತ್ತಿದ್ದಂತೆಯೇ ಶಾಸಕರು ನಿಮ್ಮ ಸಿಬ್ಬಂದಿಬಹಳ ವರ್ಷಗಳಿಂದ ಅತಿಕ್ರಮಣ ಮಾಡಿಉಳಿದುಕೊಂಡಿರುವವರು ಹಾಕಿದ ಗಿಡಗಳನ್ನುಕೀಳುತ್ತಿದ್ದಾರೆನ್ನುವ ದೂರು ಬಂದಿದೆ. ಯಾವುದೇಹೊಸ ಅತಿಕ್ರಮಣಕ್ಕೆ ನಾನೂ ಬೆಂಬಲ ನೀಡುವುದಿಲ್ಲ. ಆದರೆ ಹಲವಾರು ವರ್ಷಗಳಿಂದ ಅತಿಕ್ರಮಣ ಮಾಡಿಗಿಡ ಬೆಳೆಸಿ ಬಂದವರಿಗೆ ತೊಂದರೆ ಕೊಡದಂತೆಸಿಬ್ಬಂದಿಗೆ ತಿಳಿ ಹೇಳಿ ಎಂದು ಸೂಚಿಸಿದರು.

ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕರ ಮಕ್ಕಳ ಮದುವೆ, ಸ್ಕಾಲರ್‌ಶಿಪ್‌ ಇತ್ಯಾದಿಗಳಿಗೆ ಅರ್ಜಿ ಸಲ್ಲಿಸಿ ವರ್ಷಗಟ್ಟಲೆಯಾದರೂ ಅವರಿಗೆ ದೊರೆತಿಲ್ಲ. ತಕ್ಷಣ ಅರ್ಜಿಗಳನ್ನು ವಿಲೇವಾರಿ ಮಾಡಿ ಎಂದು ಕಾರ್ಮಿಕ ನಿರೀಕ್ಷಕರಿಗೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕಅಭಿಯಂತರ ಮಹೇಶ ನಾಯ್ಕ ಅವರನ್ನುಉದ್ದೇಶಿಸಿ ಮಾತನಾಡಿದ ಶಾಸಕರು, ಮುಡೇìಶ್ವರಮುಖ್ಯ ರಸ್ತೆಯ ಅವ್ಯವಸ್ಥೆಗೆ ಕಾರಣ ಏನು? ಗುತ್ತಿಗೆದಾರರಿಗೆ ಇನ್ನೆಷ್ಟು ಕಾಲಾವಕಾಶ ಬೇಕು, ಅಗೆದು ಹಾಕಿ ಎಷ್ಟು ಸಮಯವಾಗಿದೆ, ಇದೊಂದುಕಾಮಗಾರಿಯಿಂದ ಮುಜುಗರವಾಗುತ್ತಿದೆ ಎಂದು ಖಾರವಾಗಿಯೇ ಹೇಳಿದರು. ಮುಂದಿನ ಮೇ 31ರಒಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಭರವಸೆ ನೀಡಿದ್ದ ಅವರಿಗೆ ಪೂರ್ಣಗೊಳ್ಳದಿದ್ದಲ್ಲಿನಿಮ್ಮನ್ನೇ ಹೊಣೆಗಾರನ್ನಾಗಿ ಮಾಡುವುದಾರಿ ಎಚ್ಚರಿಕೆ ನೀಡಿದರು.

ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳು ಮಳೆ ಬರುವ ಪೂರ್ವದಲ್ಲಿ ಮುಗಿಸುವಂತಾಗಬೇಕು. ಕುಡಿಯುವ ನೀರಿಗೆಯಾವುದೇ ಕಾರಣಕ್ಕೂ ತೊಂದರೆಯಾಗಬಾರದು.ಕಾಮಗಾರಿ ಮುಗಿಯುವ ಹಂತದಲ್ಲಿದ್ದರೆ ಶೀಘ್ರ ಮುಗಿಸಿ ನೀರು ಕೊಡುವ ಕೆಲಸ ಮಾಡಿಎಂದು ಪಂಚಾಯತ್‌ರಾಜ್‌ ಇಂಜಿನಿಯರ್‌ ಗೆ ಸೂಚಿಸಿದರು.

ಕಂದಾಯ ಇಲಾಖೆಯಲ್ಲಿಕೆಲಸ ವಿಳಂಬ ಆಗುತ್ತಿದೆ ಎನ್ನುವ ದೂರಿದೆ. ಜನರಕೆಲಸ ತ್ವರಿತಗತಿಯಲ್ಲಿ ಮಾಡಿಕೊಡಲು ಸಿಬ್ಬಂದಿಗೆ ಸೂಚಿಸಿದರು.

ಬಿಇಒ ದೇವಿದಾಸ ಮೊಗೇರ, ಮೀನುಗಾರಿಕಾ ಇಲಾಖೆಯ ರವಿ, ತೋಟಗಾರಿಕಾ ಇಲಾಖೆಯ ಸಂಧ್ಯಾ ಭಟ್ಟ, ಹೆಸ್ಕಾಂ ಇಲಾಖೆಯ ಮಂಜುನಾಥ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಪ್ರಗತಿ ವರದಿ ಮಂಡಿಸಿದರು.ತಹಶೀಲ್ದಾರ್‌ ಎಸ್‌. ರವಿಚಂದ್ರ, ತಾಪಂ ಇಒ ಪ್ರಭಾಕರ ಚಿಕ್ಕನಮನೆ ಇದ್ದರು

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.