Kumata: ಪೌಷ್ಠಿಕ ಆಹಾರ ಸೇವನೆಯಿಂದ ಕ್ರಿಯಾಶೀಲತೆ

ಹುಟ್ಟಿದ ಮಗುವಿಗೆ ತಾಯಿಯ ಹಾಲು ಮಹತ್ವದಾಗಿದೆ.

Team Udayavani, Sep 7, 2023, 5:15 PM IST

Kumata: ಪೌಷ್ಠಿಕ ಆಹಾರ ಸೇವನೆಯಿಂದ ಕ್ರಿಯಾಶೀಲತೆ

ಕುಮಟಾ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉ.ಕ, ಶಿಶು ಅಭಿವೃದ್ಧಿ ಯೋಜನೆ ಕುಮಟಾ, ಹಾಗೂ ಮಾಣಿಕ್ಯ ಚಾರಿಟೇಬಲ್‌ ಟ್ರಸ್ಟ್‌ ಇವರ ಸಹಕಾರದೊಂದಿಗೆ ಪೋಷಣ ಅಭಿಯಾನ ಮತ್ತು ಮಕ್ಕಳಿಗಾಗಿ ಮುದ್ದು ಕೃಷ್ಣ ವೇಷ ಸ್ಪರ್ಧೆ
ತಾಲೂಕಿನ ಸೊಪ್ಪಿನ ಹೊಸಳ್ಳಿ ಗ್ರಾಪಂ ಬಂಗಣೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಈ ವೇಳೆ ವೇದಿಕೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಅಖಂಡ ಕರ್ನಾಟಕ ರಕ್ಷಣಾ ಸೇವಾದಳದ ರಾಜ್ಯ ಕಾರ್ಯದರ್ಶಿ ವಿಶ್ವನಾಥ ನಾಯ್ಕ ಮಾತನಾಡಿ, ಮಕ್ಕಳ ದೈಹಿಕ ಕ್ಷಮತೆ ಹಾಗೂ ಕ್ರಿಯಾಶೀಲತೆಗಳಿಗೆ ಪೌಷ್ಟಿಕ ಆಹಾರಗಳು ಅಗತ್ಯವಿದ್ದು, ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ಪೌಷ್ಟಿಕ ಆಹಾರಗಳನ್ನು ನೀಡುವುದರೊಂದಿಗೆ ಅದರ ಮಹತ್ವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ. ಹಿಂದೆ ಸಿರಿಧಾನ್ಯಗಳು, ತರಕಾರಿಗಳನ್ನು ಹೆಚ್ಚಾಗಿ ಬಳಸುವ ಮೂಲಕ ನಮ್ಮ ಹಿರಿಯರು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಂಡಿದ್ದರು.

ಇಂದಿನ ಮಕ್ಕಳು ತರಕಾರಿಗಳನ್ನು ತೆಗೆದಿಟ್ಟು ಊಟ ಮಾಡುತ್ತಿರುವ ಬೆಳವಣಿಗೆ ಹೆಚ್ಚಾಗುತ್ತಿದೆ. ಸಜ್ಜೆ, ನವಣೆ, ರಾಗಿ, ಅರ್ಕ ಮೊದಲಾದ ಧಾನ್ಯಗಳ ಬಳಕೆ ಹೆಚ್ಚಾಗಬೇಕಿದೆ. ಮಕ್ಕಳು ಹಸಿವಿನಿಂದ ಬಳಲಬಾರದು ಎಂದು ಸರ್ಕಾರ ಮಧ್ಯಾಹ್ನದ ಬಿಸಿಯೂಟ ನೀಡುತ್ತಿದೆ. ಈ ನಿಟ್ಟಿನಲ್ಲಿ ಪೋಷಣ ಅಭಿಯಾನದ ಮೂಲಕ ತಾಯಿ ಹಾಗೂ ಮಗು, ಮಕ್ಕಳ ಆರೋಗ್ಯದ ಕಾಳಜಿ ಕುರಿತು ಮಾಹಿತಿ ನೀಡಲಾಗುತ್ತಿದ್ದು ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಬಳಿಕ ಸಂತೆಗುಳಿ ಸಿಎಚ್‌ಒ ಲಕ್ಷ್ಮೀ ಕೆ. ನಾಯ್ಕ ಮಾತನಾಡಿ, ಹುಟ್ಟಿದ ಮಗುವಿಗೆ ತಾಯಿಯ ಹಾಲು ಮಹತ್ವದಾಗಿದೆ. ತಾಯಿ
ಹಾಲಿನ ಸೇವನೆಯಿಂದ ಮಗುವು ಅಧಿಕ ತೂಕ ಸಮಸ್ಯೆ, ಮಧುಮೇಹ, ಅಲರ್ಜಿಗಳು, ರಕ್ತದಲ್ಲಿ ಅ ಕ ಕೊಲೆಸ್ಟರಾಲ್‌ ಅಂಶ ಮುಂತಾದ ಸಮಸ್ಯೆಗಳಿಗಳಿಂದ ದೂರ ಉಳಿಯಬಹುದಾಗಿದೆ.

ತಾಯಿ ಹಾಲನ್ನು ಪೂರ್ವಾವಧಿಯಾಗಿ ಜನಿಸಿದ ಮಕ್ಕಳಿಗೆ ನೀಡಿದಲ್ಲಿ ಸುಲಭವಾಗಿ ಜೀರ್ಣವಾಗುವ ಪುಡಿ ಹಾಲು ಅಥವಾ
ಇನ್ಶಾಂಟ್  ಫಾರ್ಮುಲಾಗಳಿಗಿಂತ ಆರೋಗ್ಯಕರವಾಗಿದೆ ಎಂದರು.ಈ ವೇಳೆ ಮಕ್ಕಳಿಗಾಗಿ ಮುದ್ದು ಕೃಷ್ಣ ವೇಷ ಸ್ಪರ್ಧೆ
ಏರ್ಪಡಿಸಲಾಗಿದ್ದು, ಪುಟಾಣಿಗಳು ಉತ್ಸಾಹದಿಂದ‌ ಪಾಲ್ಗೊಂಡರು. ಸ್ಪರ್ಧಿಸಿದ ಮಕ್ಕಳಿಗೆ ಟ್ರಸ್ಟ್‌ ವತಿಯಿಂದ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಸಿಆರ್‌ಪಿ ಈಶ್ವರ ಭಟ್‌, ಬಂಗಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಸುಬ್ರಹ್ಮಣ್ಯ ಹೆಗಡೆ, ಸಹ ಶಿಕ್ಷಕರಾದ ಗಣೇಶ ಹೆಗಡೆ, ಆರೋಗ್ಯ ಇಲಾಖೆ ಭಾರತಿ ಆಚಾರಿ, ವಿಜಯಾ ನಾಯ್ಕ, ಬಾಲನಾಗಮ್ಮ, ಗ್ರಾಪಂ ಸದಸ್ಯರಾದ ಈಶ್ವರ ಮರಾಠಿ, ಪುರುಷ ಮರಾಠಿ ಸೇರಿದಂತೆ ಇತರರಿದ್ದರು. ಕಾರ್ಯಕ್ರಮವನ್ನು ಟ್ರಸ್ಟ್‌ನ ಅಧ್ಯಕ್ಷರಾದ ಮಾರುತಿ ಸಂಕೊಳ್ಳಿ ಉದ್ಘಾಟಿಸಿದರು. ಅಶ್ವಿ‌ನಿ ಭಟ್‌ ಸ್ವಾಗತಿಸಿದರು. ಕಲಾವತಿ ಮರಾಠಿ ವಂದಿಸಿದರು. ಕುಮಟಾ ಕನ್ನಡ ಸಂಘದ ಉಪಾಧ್ಯಕ್ಷರಾದ ಉದಯ ಭಟ್‌ ಕೂಜಳ್ಳಿ ನಿರೂಪಿಸಿದರು.

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.