Kumta -Sirsi ರಾಷ್ಟ್ರೀಯ ಹೆದ್ದಾರಿ ನವೆಂಬರ್ 1 ರಿಂದ ಮೇ 31 ರವರೆಗೆ ಸಂಪೂರ್ಣ ಸ್ಥಗಿತ
ದೇವಿಮನೆ ಘಟ್ಟ ಸಂಪೂರ್ಣ 7 ತಿಂಗಳು ಸ್ಥಗಿತಗೊಳ್ಳಲಿದೆ...
Team Udayavani, Oct 18, 2023, 8:31 PM IST
ಶಿರಸಿ: ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ಮತ್ತು ದೇವಿಮನೆ ಘಟ್ಟದಲ್ಲಿ ರಸ್ತೆ ನಿರ್ಮಾಣ ಮಾಡಬೇಕಾದ್ದರಿಂದ ನವೆಂಬರ್ 1 ರಿಂದ 2024 ಮೇ 31 ರವರೆಗೆ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ ಎಂದು ಸಹಾಯಕ ಆಯುಕ್ತ ದೇವರಾಜ ಆರ್. ತಿಳಿಸಿದರು.
ಶಿರಸಿ ತಾಲೂಕಾ ವ್ಯಾಪ್ತಿಯಲ್ಲಿ 3 ಸೇತುವೆ ಹಾಗೂ ದೇವಿಮನೆ ಘಟ್ಟದಲ್ಲಿ ಹೆದ್ದಾರಿ ನಿರ್ಮಾಣ ಮಾಡಬೇಕಾದ್ದರಿಂದ ಸ್ಥಗಿತಗೊಳಿಸುವುದು ಅನಿವಾರ್ಯ. 2020 ರಲ್ಲಿ ಗುತ್ತಿಗೆ ಪಡೆದ ಕಂಪೆನಿಯು ಶಿರಸಿ-ಕುಮಟಾ ಹೆದ್ದಾರಿ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿತ್ತು. ಆ ಆದೇಶವನ್ನು ಮುಂದುವರೆಸಿ, ನ.1 ರಿಂದ 7 ತಿಂಗಳು ಹೆದ್ದಾರಿ ಸ್ಥಗಿತಗೊಳಿಸಲಾಗುತ್ತಿದೆ.
ಶಿರಸಿ ತಾಲೂಕಾ ವ್ಯಾಪ್ತಿಯ 33 ಕಿ.ಮೀ ಹೆದ್ದಾರಿಯಲ್ಲಿ27 ಕಿ.ಮೀ ಈಗಾಗಲೇ ಮುಕ್ತಾಯಗೊಂಡಿದೆ. 2 ಸೇತುವೆ ನಿರ್ಮಾಣವಾಗಬೇಕಾದ್ದರಿಂದ ರಸ್ತೆ ಸ್ಥಗಿತಗೊಳಿಸುವುದು ಅತ್ಯವಶ್ಯ. ತಾಲೂಕಾ ವ್ಯಾಪ್ತಿಯ ಸಾಕಷ್ಟು ಹಳ್ಳಿಗಳಿಗೆ ಈ ರಸ್ತೆಯ ಮೂಲಕ ತೆರಳಬೇಕಾದ್ದರಿಂದ ಅವರಿಗೆ ತೊಂದರೆಯಾಗದಂತೆ ಪಕ್ಕದಲ್ಲಿ ಸಣ್ಣ ರಸ್ತೆ ನಿರ್ಮಿಸಿಕೊಟ್ಟು ಅನುಕೂಲ ಕಲ್ಪಿಸಬೇಕು. ದೇವಿಮನೆ ಘಟ್ಟ ಸಂಪೂರ್ಣ 7 ತಿಂಗಳು ಸ್ಥಗಿತಗೊಳ್ಳಲಿದೆ. ಬೃಹತ್ ವಾಹನ ಸಂಚಾರಕ್ಕೆ ಅವಕಾಶವಿಲ್ಲ.
ಪ್ರಮುಖ ಸ್ಥಳಗಳಲ್ಲಿ ರಸ್ತೆ ಮಾರ್ಗದ ನಾಮಫಲಕ ಅಳವಡಿಸಿ, ನಿಲೇಕಣಿ ಕ್ರಾಸ್ ಮತ್ತು ಹೆಗಡೆಕಟ್ಟಾ ಕ್ರಾಸ್ ಬಳಿ ನಾಕಾ ಬಂಧಿ ಆರಂಭಿಸಿ, ಯಾವುದೇ ಕಾರಣಕ್ಕೂ ಪ್ರಯಾಣಿಕರಿಗೆ ಗೊಂದಲ ಉಂಟಾಗದಂತೆ ನೋಡಿಕೊಳ್ಳಬೇಕು. ತಾಲೂಕಿನ ಅಮ್ಮಿನಳ್ಳಿ ವರೆಗೆ 2 ಸೇತುವೆ ನಿರ್ಮಾಣವಾಗಬೇಕಿದ್ದು, ಆ ಸಮಯದಲ್ಲಿ ರಸ್ತೆ ಮಾರ್ಗ ಕಡಿತಗೊಂಡು ತೊಂದರೆ ಎದುರಿಸಬೇಕಾಗಿ, ನಗರ ಸಂಪರ್ಕ ಕಡಿತಗೊಳ್ಳುತ್ತದೆ. ಅವರಿಗೆ ಅನಾನುಕೂಲ ಆಗದಂತೆ ಪಕ್ಕದಲ್ಲಿ ಸಣ್ಣ ರಸ್ತೆ ನಿರ್ಮಿಸಿ, ದ್ವಿಚಕ್ರ ವಾಹನ ಮತ್ತು ಕಾರುಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದೂ ತಿಳಿಸಿದರು.
ಕುಮಟಾ-ದೊಡ್ಮನೆ-ಸಿದ್ದಾಪುರ-ಶಿರಸಿ ಮಾರ್ಗದಲ್ಲಿ ಲಘು ಗಾತ್ರದ ವಾಹನ, ಹೊನ್ನಾವರ-ಮಾವಿನಗುಂಡಿ, ಸಿದ್ದಾಪುರ, ಶಿರಸಿ ಮಾರ್ಗದಲ್ಲಿ ಎಲ್ಲ ತರದ ವಾಹನ, ಶಿರಸಿ-ಯಾಣ-ವಡ್ಡಿ-ಕುಮಟಾ ಮಾರ್ಗದಲ್ಲಿ ಲಘು ಗಾತ್ರದ ವಾಹನ, ಶಿರಸಿ, ಯಲ್ಲಾಪುರ, ಅಂಕೋಲಾ ಮಾರ್ಗದಲ್ಲಿ ಎಲ್ಲ ತರತ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಯಾಣ ಮತ್ತು ದೊಡ್ಮನೆ ಮಾರ್ಗದ ರಸ್ತೆ ಕಿರಿದಾಗಿದ್ದರಿಂದ ಲಘು ವಾಹನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಆ ಮಾರ್ಗದಲ್ಲಿ ಯಾವುದೇ ಬೃಹತ್ ಗಾತ್ರದ ವಾಹನಗಳಿಗೆ ಅವಕಾಶವಿಲ್ಲ. ಸ್ಥಳೀಯ ಬಸ್ಗಳು ಮಾತ್ರ ಈ ರಸ್ತೆಯಲ್ಲಿ ಸಂಚರಿಸಬಹುದು, ದೂರ ಮಾರ್ಗಗಳ ಬಸ್ಗಳು ಮಾವಿನಗುಂಡಿ ಮತ್ತು ಯಲ್ಲಾಪುರ ಮಾರ್ಗದಲ್ಲಿ ಘಟ್ಟದ ಕೆಳಗಿನ ತಾಲೂಕುಗಳಿಗೆ ತೆರಳಬೇಕಿದೆ ಎಂದರು.
ರಾಜ್ಯ ಪ್ರಸಿದ್ಧ ಶಿರಸಿಯ ಮಾರಿಕಾಂಬಾ ದೇವಿಯ ಜಾತ್ರೆಯು ಮಾರ್ಚ್ ತಿಂಗಳಿನಲ್ಲಿ ನಡೆಯುವುದರಿಂದ ಹೆದ್ದಾರಿ ಬಂದ್ ಮಾಡುವುದರಿಂದ ಘಟ್ಟದ ಕೆಳಗಿನ ಕುಮಟಾ ತಾಲೂಕಿನವರಿಗೆ ಬಹಳ ತೊಂದರೆಯಾಗುತ್ತದೆ. 15 ದಿನದ ಅವಧಿಗೆ ಕುಮಟಾ ತಾಲೂಕಿನ ಭಕ್ತರ ಕಾರು ಮತ್ತು ದ್ವಿಚಕ್ರ ವಾಹನಗಳಿಗೆ ಅವಕಾಶ ನೀಡಬೇಕು. ಇಲ್ಲವಾದಲ್ಲಿ ಬಹಳ ಸಮಸ್ಯೆ ಉಂಟಾಗುತ್ತದೆ. ಶಿರಸಿ ಸಮೀಪದ ಸೇತುವೆಯನ್ನು ಶೀಘ್ರವಾಗಿ ಕಾಮಗಾರಿ ಕೈಗೆತ್ತುಕೊಂಡು ಮುಕ್ತಾಯಗೊಳಿಸಿದರೆ, ಸಮೀಪದ ಹಳ್ಳಿಗಳ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಇದರ ಕುರಿತು ಆರ್.ಎನ್.ಎಸ್ ಕಂಪೆನಿ ಕ್ರಮ ವಹಿಸಬೇಕು ಎಂದೂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.